ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ವಿತರಿಸುವ ಸರ್ಕಾರಿ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪಿತರನ್ನು ಶಿರಸಿ ನಗರ ಪೊಲೀಸರ ಕಾರ್ಯಚರಣೆ ನಡೆಸಿ ಬಂಧನ ಮಾಡಲಾಗಿದೆ.
ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 40 ಕ್ವಿಂಟಾಲ್ ಅಕ್ಕಿ ಹಾಗೂ ಸಾಗಾಟಕ್ಕೆ ಬಳಸಿದ್ದ ವಾಹನವನ್ನು ಜಪ್ತಿ ಮಾಡಲಾಗಿದೆ.
ಶಿರಸಿಯ ಚಿಪಗಿ ನರೆಬೈಲ್ ನಿವಾಸಿ ಉಬೇದ್ ಅಲಿಯಾಸ್ ಸಲೀಂ ಜವಳಿ ಎಂಬಾತ ಪಡಿತರ ಚೀಟಿದಾರರಿಂದ ಕಡಿಮೆ ಬೆಲೆಗೆ ಅನ್ನಭಾಗ್ಯ ಯೋಜನೆಯ 40 ಕ್ವಿಂಟಾಲ್ ಅಕ್ಕಿಯನ್ನು ಖರೀದಿಸಿ, ತನ್ನ ಹಿಟ್ಟಿನ ಗಿರಣಿಯಲ್ಲಿ ಸಂಗ್ರಹಿಸಿಟ್ಟಿದ್ದನು. ಈ ಅಕ್ಕಿಯನ್ನು ಇಸಳೂರು, ಶಿರಸಿ ನಿವಾಸಿ ಸುನೀಲ್ ಮಹಾದೇವಪ್ಪ ನಾಡಗಿ ಎಂಬಾತ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಖರೀದಿಸಿದ್ದನು.
ಶಿರಸಿಯಿಂದ ಹುಬ್ಬಳ್ಳಿ ಕಡೆಗೆ ಟಾಟಾ ಕಂಪನಿಯ 407 ವಾಹನದಲ್ಲಿ ಈ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಿಕೊಂಡು ಹೋಗುತ್ತಿದ್ದಾಗ, ಶಿರಸಿಯ ಮಂಗಳೂರು ಹೋಟೆಲ್ ಕ್ರಾಸ್ ಬಳಿ ಪೊಲೀಸರು ವಾಹನ ಸಮೇತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಸುನೀಲ್ ಮಹಾದೇವಪ್ಪ ನಾಡಗಿ (ಈಸಳೂರು, ಶಿರಸಿ) ಮತ್ತು ಅಲ್ತಾಫ್ ರೆಹಮತ್ ಉಲ್ಲಾ ಶೇಖ್ (ಕಸ್ತೂರ ಬಾ ನಗರ, ಶಿರಸಿ) ಎಂಬುವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಅಂದಾಜು ₹1,36,000 ಬೆಲೆ ಬಾಳುವ 40 ಕ್ವಿಂಟಾಲ್ (50 ಕೆ.ಜಿ. ತೂಕದ 80 ಚೀಲ) ಪಡಿತರ ಅಕ್ಕಿ ಹಾಗೂ ಅಕ್ರಮ ಸಾಗಾಟಕ್ಕೆ ಬಳಸಿದ್ದ ಅಂದಾಜು ₹4,50,000 ಮೌಲ್ಯದ ಟಾಟಾ 407 ವಾಹನವನ್ನು ಜಪ್ತಿ ಮಾಡಲಾಗಿದೆ. ಒಟ್ಟು ₹5,86,000 ಮೌಲ್ಯದ ಸ್ವತ್ತನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ. ಕೃಷ್ಣಮೂರ್ತಿ, ಜಗದೀಶ್ ನಾಯ್ಕ್ ಹಾಗೂ ಶಿರಸಿ ಉಪವಿಭಾಗದ ಡಿವೈಎಸ್ಪಿ ಗೀತಾ ಪಾಟೀಲ್, ವೃತ್ತ ನಿರೀಕ್ಷಕ ಶಶಿಕಾಂತ ವರ್ಮಾ, ಶಿರಸಿ ತಹಶೀಲ್ದಾರ್ ಪುಟ್ಟರಾಜಗೌಡ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆಯಲ್ಲಿ ಶಿರಸಿ ನಗರ ಠಾಣೆಯ ಪಿಎಸ್ಐ ನಾಗಪ್ಪ ಬಿ, ಆಹಾರ ನಿರೀಕ್ಷಕರಾದ ಕವಿತಾ ಪಾಟನಕರ್, ಸಿಬ್ಬಂದಿ ಸದ್ದಾಂ ಹುಸೇನ್, ಚನ್ನಬಸಪ್ಪ ಕ್ಯಾರಕಟ್ಟಿ, ಹನುಮಂತ ಕಬಾಡಿ, ಸುದರ್ಶನ ನಾಯ್ಕ, ಸುನೀಲ್ ಹಂಡಲಗಿ, ರಾಜಶೇಖರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…