Categories: ರಾಜ್ಯ

ಅನ್ನ ಭಾಗ್ಯದ ಅಕ್ಕಿಯ ಮೊದಲ ತುತ್ತಿನಲ್ಲೇ ಕಲ್ಲು- ಮಾಜಿ ಸಿಎಂ ಬೊಮ್ಮಾಯಿ‌ ಆಕ್ರೋಶ

ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಯೋಜನೆ ಜಾರಿ ಮಾಡುವಲ್ಲಿ ಜನರಿಗೆ ದೋಖಾ ಮಾಡುವುದು ಮುಂದುವರೆಸಿದೆ. ಹತ್ತು ಕೆಜಿ ಅಕ್ಕಿ ಕೊಡುವ ಗ್ಯಾರೆಂಟಿ ನೀಡಿ ಈಗ ಒಬ್ಬರಿಗೆ 170 ರೂ. ಹಾಕುವುದಾಗಿ ಹೇಳಿರುವುದು ಸರ್ಕಾರದ ವಂಚನೆಯ ಇನ್ನೊಂದು ಮುಖ ಬಯಲಾಗಿದೆ ಎಂದು ಕಾಂಗ್ರೆಸ್ ಸರ್ಕಾರ ವಿರುದ್ಧ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ‌ ಆಕ್ರೋಶ ವ್ಯಕ್ತಪಡಿಸಿದ್ದಾರೆ

ರಾಜ್ಯ ಸರ್ಕಾರ ನೀಡುವ 170 ರೂ. ಗ್ರಾಮೀಣ ಮಹಿಳೆಯ ದಿನದ ಕೂಲಿಯ ಅರ್ಧದಷ್ಟು ಹಣವೂ ಆಗುವುದಿಲ್ಲ. ಸುಳ್ಳು ಗ್ಯಾರೆಂಟಿ ಗಳನ್ನು ಈಡೇರಿಸಲಾಗದೇ ಈಗ ಜನರಿಗೆ ದ್ರೋಹ ಮಾಡಲಾಗುತ್ತಿದೆ.

ಚುನಾವಣೆಯಲ್ಲಿ ಜನರಿಗೆ ಕೊಟ್ಟ ಮಾತಿನಂತೆ ಹತ್ತು ಕೆಜಿ ಅಕ್ಕಿ ಕೊಡಿ, ಇಲ್ಲವೇ ಮಾರುಕಟ್ಟೆ ದರದಲ್ಲಿ ಪ್ರತಿ ಕೆಜಿಗೆ 60 ರೂ. ಗಳಂತೆ ಹತ್ತು ಕೆಜಿಗೆ ತಗಲುವ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಿ. ಇಲ್ಲದಿದ್ದರೆ ಮಾತಿಗೆ ತಪ್ಪಿದ್ದಕ್ಕಾಗಿ‌ ಜನರಿಗೆ ಕ್ಷಮೆ ಕೇಳಿ ಎಂದು ಆಗ್ರಹಿಸಿದ್ದಾರೆ

Ramesh Babu

Journalist

Recent Posts

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

19 minutes ago

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

13 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

13 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

16 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

16 hours ago