ರಾಯಚೂರು: ಬೇರೆ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಪಾಪಿ ತಂದೆಯೊಬ್ಬ ಹೆತ್ತ ಮಗಳನ್ನೇ ಕೊಲೆ ಮಾಡಿ ಶವವನ್ನು ನದಿಗೆ ಎಸೆದಂತಹ ಶಾಕಿಂಗ್ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
2024ರ ಸೆಪ್ಟೆಂಬರ್ 29ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ.
ಲಕ್ಕಪ್ಪ ಕಂಬಳಿ ಪುತ್ರಿಯನ್ನು ಕೊಲೆ ಮಾಡಿದ ಆರೋಪಿಯಾದರೆ ರೇಣುಕಾ (18) ಕೊಲೆಯಾದ ಮಗಳು.
ಗ್ರಾಮದ ಅನ್ಯ ಜಾತಿಯ ಯುವಕ ಹನುಮಂತನನ್ನು ರೇಣುಕಾ ಪ್ರೀತಿಸಿದ್ದಳು. ಮದುವೆಗೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಇಬ್ಬರೂ ಓಡಿಹೋಗಿದ್ದರು. ಆಗ ರೇಣುಕಾಗೆ 17 ವರ್ಷವಾಗಿದ್ದು, ಅಪ್ರಾಪ್ತ ವಯಸ್ಕಳಾಗಿದ್ದರಿಂದ ಆಕೆಯ ತಂದೆ ಲಕ್ಕಪ್ಪ ಪೊಲೀಸರಿಗೆ ದೂರು ನೀಡಿದ್ದರು. ಜೊತೆಗೆ ಹನುಮಂತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿತ್ತು.
ಪೋಕ್ಸೋ ಪ್ರಕರಣದಡಿ ಆರೋಪಿಯಾಗಿದ್ದ ಹನುಮಂತನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದರೆ ಇತ್ತ ರೇಣುಕಾ ಅದೇ ಹುಡುಗನನ್ನು ಮದುವೆಯಾಗುವುದಾಗಿ ಪಟ್ಟು ಹಿಡಿದಿದ್ದಳು. ಇದಾದ ಕೆಲ ದಿನಗಳ ಬಳಿಕ ಹನುಮಂತ ಜಾಮೀನಿನ ಮೇಲೆ ಹೊರಬಂದಿದ್ದ. ಹೀಗಾಗಿ ರೇಣುಕಾ ಮತ್ತೆ ಹನುಮಂತನೊಂದಿಗೆ ಓಡಾಡುವುದನ್ನು ಪ್ರಾರಂಭಿಸಿದ್ದಳು.
ರೇಣುಕಾಗೆ ತಂದೆ ಎಷ್ಟೇ ಬುದ್ದಿ ಹೇಳಿದರೂ ಹನುಮಂತನನ್ನೇ ಮದುವೆಯಾಗುವುದಾಗಿ ಪಟ್ಟು ಹಿಡಿದಿದ್ದರಿಂದ ಕೋಪಗೊಂಡ ಲಕ್ಕಪ್ಪ ಮಗಳನ್ನು ಕೊಲೆ ಮಾಡಿ, ಶವವನ್ನು ಮೂಟೆ ಕಟ್ಟಿ ಕೃಷ್ಣಾ ನದಿಗೆ ಎಸೆದಿದ್ದಾನೆ. ಈ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಪೋಕ್ಸೋ ಪ್ರಕರಣದ ವಿಚಾರಣೆ ವೇಳೆ ಲಕ್ಕಪ್ಪ ತಪ್ಪೊಪ್ಪಿಗೆ ಮಾಡಿದ್ದಾರೆ.
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…