ರಾಯಚೂರು: ಬೇರೆ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಪಾಪಿ ತಂದೆಯೊಬ್ಬ ಹೆತ್ತ ಮಗಳನ್ನೇ ಕೊಲೆ ಮಾಡಿ ಶವವನ್ನು ನದಿಗೆ ಎಸೆದಂತಹ ಶಾಕಿಂಗ್ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
2024ರ ಸೆಪ್ಟೆಂಬರ್ 29ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ.
ಲಕ್ಕಪ್ಪ ಕಂಬಳಿ ಪುತ್ರಿಯನ್ನು ಕೊಲೆ ಮಾಡಿದ ಆರೋಪಿಯಾದರೆ ರೇಣುಕಾ (18) ಕೊಲೆಯಾದ ಮಗಳು.
ಗ್ರಾಮದ ಅನ್ಯ ಜಾತಿಯ ಯುವಕ ಹನುಮಂತನನ್ನು ರೇಣುಕಾ ಪ್ರೀತಿಸಿದ್ದಳು. ಮದುವೆಗೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಇಬ್ಬರೂ ಓಡಿಹೋಗಿದ್ದರು. ಆಗ ರೇಣುಕಾಗೆ 17 ವರ್ಷವಾಗಿದ್ದು, ಅಪ್ರಾಪ್ತ ವಯಸ್ಕಳಾಗಿದ್ದರಿಂದ ಆಕೆಯ ತಂದೆ ಲಕ್ಕಪ್ಪ ಪೊಲೀಸರಿಗೆ ದೂರು ನೀಡಿದ್ದರು. ಜೊತೆಗೆ ಹನುಮಂತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿತ್ತು.
ಪೋಕ್ಸೋ ಪ್ರಕರಣದಡಿ ಆರೋಪಿಯಾಗಿದ್ದ ಹನುಮಂತನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದರೆ ಇತ್ತ ರೇಣುಕಾ ಅದೇ ಹುಡುಗನನ್ನು ಮದುವೆಯಾಗುವುದಾಗಿ ಪಟ್ಟು ಹಿಡಿದಿದ್ದಳು. ಇದಾದ ಕೆಲ ದಿನಗಳ ಬಳಿಕ ಹನುಮಂತ ಜಾಮೀನಿನ ಮೇಲೆ ಹೊರಬಂದಿದ್ದ. ಹೀಗಾಗಿ ರೇಣುಕಾ ಮತ್ತೆ ಹನುಮಂತನೊಂದಿಗೆ ಓಡಾಡುವುದನ್ನು ಪ್ರಾರಂಭಿಸಿದ್ದಳು.
ರೇಣುಕಾಗೆ ತಂದೆ ಎಷ್ಟೇ ಬುದ್ದಿ ಹೇಳಿದರೂ ಹನುಮಂತನನ್ನೇ ಮದುವೆಯಾಗುವುದಾಗಿ ಪಟ್ಟು ಹಿಡಿದಿದ್ದರಿಂದ ಕೋಪಗೊಂಡ ಲಕ್ಕಪ್ಪ ಮಗಳನ್ನು ಕೊಲೆ ಮಾಡಿ, ಶವವನ್ನು ಮೂಟೆ ಕಟ್ಟಿ ಕೃಷ್ಣಾ ನದಿಗೆ ಎಸೆದಿದ್ದಾನೆ. ಈ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಪೋಕ್ಸೋ ಪ್ರಕರಣದ ವಿಚಾರಣೆ ವೇಳೆ ಲಕ್ಕಪ್ಪ ತಪ್ಪೊಪ್ಪಿಗೆ ಮಾಡಿದ್ದಾರೆ.
ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಕ್ಕಟ್ಟು ಭಾರತಕ್ಕೂ ತಟ್ಟಿರುವ ಹಿನ್ನೆಲೆ ದೇಶಾದ್ಯಂತ ಅಡುಗೆ ಅನಿಲ ಪೂರೈಕೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಪ್ರಸ್ತುತ…
ಇಸ್ಪೀಟ್ ಆಡುತ್ತಿದ್ದಾರೆಂದು ವಶಕ್ಕೆ ಪಡೆದಿದ್ದ ವ್ಯಕ್ತಿಯೊಬ್ಬರು ಪೊಲೀಸ್ ವಶದಲ್ಲಿದ್ದಾಗಲೇ ಸಾವನ್ನಪ್ಪಿದ ಹಿನ್ನೆಲೆ ಗ್ರಾಮಸ್ಥರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಘಟನೆ…
ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…
ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…
ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…
ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…