ರಾಯಚೂರು: ಬೇರೆ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಪಾಪಿ ತಂದೆಯೊಬ್ಬ ಹೆತ್ತ ಮಗಳನ್ನೇ ಕೊಲೆ ಮಾಡಿ ಶವವನ್ನು ನದಿಗೆ ಎಸೆದಂತಹ ಶಾಕಿಂಗ್ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
2024ರ ಸೆಪ್ಟೆಂಬರ್ 29ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ.
ಲಕ್ಕಪ್ಪ ಕಂಬಳಿ ಪುತ್ರಿಯನ್ನು ಕೊಲೆ ಮಾಡಿದ ಆರೋಪಿಯಾದರೆ ರೇಣುಕಾ (18) ಕೊಲೆಯಾದ ಮಗಳು.
ಗ್ರಾಮದ ಅನ್ಯ ಜಾತಿಯ ಯುವಕ ಹನುಮಂತನನ್ನು ರೇಣುಕಾ ಪ್ರೀತಿಸಿದ್ದಳು. ಮದುವೆಗೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಇಬ್ಬರೂ ಓಡಿಹೋಗಿದ್ದರು. ಆಗ ರೇಣುಕಾಗೆ 17 ವರ್ಷವಾಗಿದ್ದು, ಅಪ್ರಾಪ್ತ ವಯಸ್ಕಳಾಗಿದ್ದರಿಂದ ಆಕೆಯ ತಂದೆ ಲಕ್ಕಪ್ಪ ಪೊಲೀಸರಿಗೆ ದೂರು ನೀಡಿದ್ದರು. ಜೊತೆಗೆ ಹನುಮಂತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿತ್ತು.
ಪೋಕ್ಸೋ ಪ್ರಕರಣದಡಿ ಆರೋಪಿಯಾಗಿದ್ದ ಹನುಮಂತನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದರೆ ಇತ್ತ ರೇಣುಕಾ ಅದೇ ಹುಡುಗನನ್ನು ಮದುವೆಯಾಗುವುದಾಗಿ ಪಟ್ಟು ಹಿಡಿದಿದ್ದಳು. ಇದಾದ ಕೆಲ ದಿನಗಳ ಬಳಿಕ ಹನುಮಂತ ಜಾಮೀನಿನ ಮೇಲೆ ಹೊರಬಂದಿದ್ದ. ಹೀಗಾಗಿ ರೇಣುಕಾ ಮತ್ತೆ ಹನುಮಂತನೊಂದಿಗೆ ಓಡಾಡುವುದನ್ನು ಪ್ರಾರಂಭಿಸಿದ್ದಳು.
ರೇಣುಕಾಗೆ ತಂದೆ ಎಷ್ಟೇ ಬುದ್ದಿ ಹೇಳಿದರೂ ಹನುಮಂತನನ್ನೇ ಮದುವೆಯಾಗುವುದಾಗಿ ಪಟ್ಟು ಹಿಡಿದಿದ್ದರಿಂದ ಕೋಪಗೊಂಡ ಲಕ್ಕಪ್ಪ ಮಗಳನ್ನು ಕೊಲೆ ಮಾಡಿ, ಶವವನ್ನು ಮೂಟೆ ಕಟ್ಟಿ ಕೃಷ್ಣಾ ನದಿಗೆ ಎಸೆದಿದ್ದಾನೆ. ಈ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಪೋಕ್ಸೋ ಪ್ರಕರಣದ ವಿಚಾರಣೆ ವೇಳೆ ಲಕ್ಕಪ್ಪ ತಪ್ಪೊಪ್ಪಿಗೆ ಮಾಡಿದ್ದಾರೆ.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…