ರಾಯಚೂರು: ಬೇರೆ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಪಾಪಿ ತಂದೆಯೊಬ್ಬ ಹೆತ್ತ ಮಗಳನ್ನೇ ಕೊಲೆ ಮಾಡಿ ಶವವನ್ನು ನದಿಗೆ ಎಸೆದಂತಹ ಶಾಕಿಂಗ್ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
2024ರ ಸೆಪ್ಟೆಂಬರ್ 29ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ.
ಲಕ್ಕಪ್ಪ ಕಂಬಳಿ ಪುತ್ರಿಯನ್ನು ಕೊಲೆ ಮಾಡಿದ ಆರೋಪಿಯಾದರೆ ರೇಣುಕಾ (18) ಕೊಲೆಯಾದ ಮಗಳು.
ಗ್ರಾಮದ ಅನ್ಯ ಜಾತಿಯ ಯುವಕ ಹನುಮಂತನನ್ನು ರೇಣುಕಾ ಪ್ರೀತಿಸಿದ್ದಳು. ಮದುವೆಗೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಇಬ್ಬರೂ ಓಡಿಹೋಗಿದ್ದರು. ಆಗ ರೇಣುಕಾಗೆ 17 ವರ್ಷವಾಗಿದ್ದು, ಅಪ್ರಾಪ್ತ ವಯಸ್ಕಳಾಗಿದ್ದರಿಂದ ಆಕೆಯ ತಂದೆ ಲಕ್ಕಪ್ಪ ಪೊಲೀಸರಿಗೆ ದೂರು ನೀಡಿದ್ದರು. ಜೊತೆಗೆ ಹನುಮಂತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿತ್ತು.
ಪೋಕ್ಸೋ ಪ್ರಕರಣದಡಿ ಆರೋಪಿಯಾಗಿದ್ದ ಹನುಮಂತನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದರೆ ಇತ್ತ ರೇಣುಕಾ ಅದೇ ಹುಡುಗನನ್ನು ಮದುವೆಯಾಗುವುದಾಗಿ ಪಟ್ಟು ಹಿಡಿದಿದ್ದಳು. ಇದಾದ ಕೆಲ ದಿನಗಳ ಬಳಿಕ ಹನುಮಂತ ಜಾಮೀನಿನ ಮೇಲೆ ಹೊರಬಂದಿದ್ದ. ಹೀಗಾಗಿ ರೇಣುಕಾ ಮತ್ತೆ ಹನುಮಂತನೊಂದಿಗೆ ಓಡಾಡುವುದನ್ನು ಪ್ರಾರಂಭಿಸಿದ್ದಳು.
ರೇಣುಕಾಗೆ ತಂದೆ ಎಷ್ಟೇ ಬುದ್ದಿ ಹೇಳಿದರೂ ಹನುಮಂತನನ್ನೇ ಮದುವೆಯಾಗುವುದಾಗಿ ಪಟ್ಟು ಹಿಡಿದಿದ್ದರಿಂದ ಕೋಪಗೊಂಡ ಲಕ್ಕಪ್ಪ ಮಗಳನ್ನು ಕೊಲೆ ಮಾಡಿ, ಶವವನ್ನು ಮೂಟೆ ಕಟ್ಟಿ ಕೃಷ್ಣಾ ನದಿಗೆ ಎಸೆದಿದ್ದಾನೆ. ಈ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಪೋಕ್ಸೋ ಪ್ರಕರಣದ ವಿಚಾರಣೆ ವೇಳೆ ಲಕ್ಕಪ್ಪ ತಪ್ಪೊಪ್ಪಿಗೆ ಮಾಡಿದ್ದಾರೆ.
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ "ದೊಡ್ಡಬಳ್ಳಾಪುರ…
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.…
ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…
ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…