Categories: ರಾಯಚೂರು

ಅನ್ಯ ಕೋಮಿನ ಯುವಕನನ್ನು ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಲೆ ಮಾಡಿ ನದಿಗೆಸೆದ ಕ್ರೂರಿ ತಂದೆ

ರಾಯಚೂರು: ಬೇರೆ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಪಾಪಿ ತಂದೆಯೊಬ್ಬ ಹೆತ್ತ ಮಗಳನ್ನೇ ಕೊಲೆ ಮಾಡಿ ಶವವನ್ನು ನದಿಗೆ ಎಸೆದಂತಹ ಶಾಕಿಂಗ್‌ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

2024ರ ಸೆಪ್ಟೆಂಬರ್ 29ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ.

ಲಕ್ಕಪ್ಪ ಕಂಬಳಿ ಪುತ್ರಿಯನ್ನು ಕೊಲೆ ಮಾಡಿದ ಆರೋಪಿಯಾದರೆ ರೇಣುಕಾ (18) ಕೊಲೆಯಾದ ಮಗಳು.

ಗ್ರಾಮದ ಅನ್ಯ ಜಾತಿಯ ಯುವಕ ಹನುಮಂತನನ್ನು ರೇಣುಕಾ ಪ್ರೀತಿಸಿದ್ದಳು. ಮದುವೆಗೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಇಬ್ಬರೂ ಓಡಿಹೋಗಿದ್ದರು. ಆಗ ರೇಣುಕಾಗೆ 17 ವರ್ಷವಾಗಿದ್ದು, ಅಪ್ರಾಪ್ತ ವಯಸ್ಕಳಾಗಿದ್ದರಿಂದ ಆಕೆಯ ತಂದೆ ಲಕ್ಕಪ್ಪ ಪೊಲೀಸರಿಗೆ ದೂರು ನೀಡಿದ್ದರು. ಜೊತೆಗೆ ಹನುಮಂತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿತ್ತು.

ಪೋಕ್ಸೋ ಪ್ರಕರಣದಡಿ ಆರೋಪಿಯಾಗಿದ್ದ ಹನುಮಂತನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದರೆ ಇತ್ತ ರೇಣುಕಾ ಅದೇ ಹುಡುಗನನ್ನು ಮದುವೆಯಾಗುವುದಾಗಿ ಪಟ್ಟು ಹಿಡಿದಿದ್ದಳು. ಇದಾದ ಕೆಲ ದಿನಗಳ ಬಳಿಕ ಹನುಮಂತ ಜಾಮೀನಿನ ಮೇಲೆ ಹೊರಬಂದಿದ್ದ. ಹೀಗಾಗಿ ರೇಣುಕಾ ಮತ್ತೆ ಹನುಮಂತನೊಂದಿಗೆ ಓಡಾಡುವುದನ್ನು ಪ್ರಾರಂಭಿಸಿದ್ದಳು.

ರೇಣುಕಾಗೆ ತಂದೆ ಎಷ್ಟೇ ಬುದ್ದಿ ಹೇಳಿದರೂ ಹನುಮಂತನನ್ನೇ ಮದುವೆಯಾಗುವುದಾಗಿ ಪಟ್ಟು ಹಿಡಿದಿದ್ದರಿಂದ ಕೋಪಗೊಂಡ ಲಕ್ಕಪ್ಪ ಮಗಳನ್ನು ಕೊಲೆ ಮಾಡಿ, ಶವವನ್ನು ಮೂಟೆ ಕಟ್ಟಿ ಕೃಷ್ಣಾ ನದಿಗೆ ಎಸೆದಿದ್ದಾನೆ. ಈ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಪೋಕ್ಸೋ ಪ್ರಕರಣದ ವಿಚಾರಣೆ ವೇಳೆ ಲಕ್ಕಪ್ಪ ತಪ್ಪೊಪ್ಪಿಗೆ ಮಾಡಿದ್ದಾರೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

1 hour ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

1 hour ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

4 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

5 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

9 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

13 hours ago