ಬೈಕ್ ಅಪಘಾತವಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ರೋಗಿಯನ್ನು ಮಾಹಿತಿ ಬಂದ ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದಲ್ಲದೆ, ಅಪಘಾತಕ್ಕೆ ಒಳಗಾಗಿದ್ದ ವ್ಯಕ್ತಿ ಜೇಬಿನಲ್ಲಿದ್ದ ಹಣ, ಪರ್ಸ್, ಮೊಬೈಲ್ ನ್ನು ಸಂಬಂಧಿಕರಿಗೆ ತಲುಪಿಸುವ ಮೂಲಕ ದೊಡ್ಡಬಳ್ಳಾಪುರದಲ್ಲಿನ 108 ಆಂಬುಲೆನ್ಸ್ ಚಾಲಕ ನರಸಿಂಹಮೂರ್ತಿ ಪ್ರಮಾಣಿಕತೆ ತೋರಿದ್ದಾರೆ.
ಶುಕ್ತವಾರ ಮಧ್ಯಾಹ್ನ ತಾಲ್ಲೂಕಿನ ಗೌರಿಬಿದನೂರು ರಸ್ತೆಯ ಗುಂಡಮಗೆರೆ ಕ್ರಾಸ್ ನಲ್ಲಿ ಲೇಪಾಕ್ಷಿಗೆ ಹೋಗುತ್ತಿದ್ದ ಮಂಜುನಾಥ್ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಇವರ ಜೇಬಿನಲ್ಲಿದ್ದ ಪರ್ಸ್ ನಲ್ಲಿ 9,100 ಹಣ, ಮೊಬೈಲ್ ಸಹ ಇತ್ತು. ದೊಡ್ಡಬಳ್ಳಾಪುರದಲ್ಲಿ ಚಿಕಿತ್ಸೆ ನೀಡುವುದು ಕಷ್ಟ ಎಂದು ವೈದ್ಯರು ಹೇಳಿದ್ದರಿಂದ ತಕ್ಷಣವೆ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೂ ಕರೆದೊಯ್ದಿದ್ದಾರೆ. ಇದರ ಜೊತೆಗೆ ಮಂಜುನಾಥ್ ಬಳಿ ಇದ್ದ ಹಣ, ಮೊಬೈಲ್ ಹಾಗೂ ಪರ್ಸ್ ಅಪಘಾತ ಸ್ಥಳದಲ್ಲಿ ಬಿದ್ದು ಹೋಗಿತ್ತು. ಹಣ ಮತ್ತು ವಸ್ತುಗಳನ್ನು ಜೋಪಾನವಾಗಿ ಮಂಜುನಾಥ್ ಅವರ ಕುಟುಂಬ ಸದಸ್ಯರಿಗೆ ತಲುಪಿಸಿರುವ ಆಂಬುಲೆನ್ಸ್ ಚಾಲಕ ಹಾಗೂ ಆಂಬುಲೆನ್ಸ್ ನಲ್ಲಿದ್ದ ನರ್ಸ್ ಹೇಮಾವತಿ. ಇವರ ಪ್ರಾಮಾಣಿಕತೆಗೆ ಎಲ್ಲರೂ ಕೃತಜ್ಞತೆ ಸಲ್ಲಿಸಿದ್ದಾರೆ.
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…