ಬೈಕ್ ಅಪಘಾತವಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ರೋಗಿಯನ್ನು ಮಾಹಿತಿ ಬಂದ ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದಲ್ಲದೆ, ಅಪಘಾತಕ್ಕೆ ಒಳಗಾಗಿದ್ದ ವ್ಯಕ್ತಿ ಜೇಬಿನಲ್ಲಿದ್ದ ಹಣ, ಪರ್ಸ್, ಮೊಬೈಲ್ ನ್ನು ಸಂಬಂಧಿಕರಿಗೆ ತಲುಪಿಸುವ ಮೂಲಕ ದೊಡ್ಡಬಳ್ಳಾಪುರದಲ್ಲಿನ 108 ಆಂಬುಲೆನ್ಸ್ ಚಾಲಕ ನರಸಿಂಹಮೂರ್ತಿ ಪ್ರಮಾಣಿಕತೆ ತೋರಿದ್ದಾರೆ.
ಶುಕ್ತವಾರ ಮಧ್ಯಾಹ್ನ ತಾಲ್ಲೂಕಿನ ಗೌರಿಬಿದನೂರು ರಸ್ತೆಯ ಗುಂಡಮಗೆರೆ ಕ್ರಾಸ್ ನಲ್ಲಿ ಲೇಪಾಕ್ಷಿಗೆ ಹೋಗುತ್ತಿದ್ದ ಮಂಜುನಾಥ್ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಇವರ ಜೇಬಿನಲ್ಲಿದ್ದ ಪರ್ಸ್ ನಲ್ಲಿ 9,100 ಹಣ, ಮೊಬೈಲ್ ಸಹ ಇತ್ತು. ದೊಡ್ಡಬಳ್ಳಾಪುರದಲ್ಲಿ ಚಿಕಿತ್ಸೆ ನೀಡುವುದು ಕಷ್ಟ ಎಂದು ವೈದ್ಯರು ಹೇಳಿದ್ದರಿಂದ ತಕ್ಷಣವೆ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೂ ಕರೆದೊಯ್ದಿದ್ದಾರೆ. ಇದರ ಜೊತೆಗೆ ಮಂಜುನಾಥ್ ಬಳಿ ಇದ್ದ ಹಣ, ಮೊಬೈಲ್ ಹಾಗೂ ಪರ್ಸ್ ಅಪಘಾತ ಸ್ಥಳದಲ್ಲಿ ಬಿದ್ದು ಹೋಗಿತ್ತು. ಹಣ ಮತ್ತು ವಸ್ತುಗಳನ್ನು ಜೋಪಾನವಾಗಿ ಮಂಜುನಾಥ್ ಅವರ ಕುಟುಂಬ ಸದಸ್ಯರಿಗೆ ತಲುಪಿಸಿರುವ ಆಂಬುಲೆನ್ಸ್ ಚಾಲಕ ಹಾಗೂ ಆಂಬುಲೆನ್ಸ್ ನಲ್ಲಿದ್ದ ನರ್ಸ್ ಹೇಮಾವತಿ. ಇವರ ಪ್ರಾಮಾಣಿಕತೆಗೆ ಎಲ್ಲರೂ ಕೃತಜ್ಞತೆ ಸಲ್ಲಿಸಿದ್ದಾರೆ.
ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…
ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…
Blackjack is one of the most prominent gambling enterprise video games on the planet. It's…
Ставки на спорт UA: советы и стратегии для успеха Ставки на спорт в Украине: основы…
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಯಾಗಿದ್ದ ಎನ್ ದುರ್ಗಶ್ರೀ ಅವರನ್ನು ಇಂದು ವರ್ಗಾವಣೆ ಮಾಡಲಾಗಿತ್ತು. ಇವರ ಜಾಗಕ್ಕೆ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಿ…
ನಾಳೆ (ಏ.23) ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…