ಬೈಕ್ ಅಪಘಾತವಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ರೋಗಿಯನ್ನು ಮಾಹಿತಿ ಬಂದ ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದಲ್ಲದೆ, ಅಪಘಾತಕ್ಕೆ ಒಳಗಾಗಿದ್ದ ವ್ಯಕ್ತಿ ಜೇಬಿನಲ್ಲಿದ್ದ ಹಣ, ಪರ್ಸ್, ಮೊಬೈಲ್ ನ್ನು ಸಂಬಂಧಿಕರಿಗೆ ತಲುಪಿಸುವ ಮೂಲಕ ದೊಡ್ಡಬಳ್ಳಾಪುರದಲ್ಲಿನ 108 ಆಂಬುಲೆನ್ಸ್ ಚಾಲಕ ನರಸಿಂಹಮೂರ್ತಿ ಪ್ರಮಾಣಿಕತೆ ತೋರಿದ್ದಾರೆ.
ಶುಕ್ತವಾರ ಮಧ್ಯಾಹ್ನ ತಾಲ್ಲೂಕಿನ ಗೌರಿಬಿದನೂರು ರಸ್ತೆಯ ಗುಂಡಮಗೆರೆ ಕ್ರಾಸ್ ನಲ್ಲಿ ಲೇಪಾಕ್ಷಿಗೆ ಹೋಗುತ್ತಿದ್ದ ಮಂಜುನಾಥ್ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಇವರ ಜೇಬಿನಲ್ಲಿದ್ದ ಪರ್ಸ್ ನಲ್ಲಿ 9,100 ಹಣ, ಮೊಬೈಲ್ ಸಹ ಇತ್ತು. ದೊಡ್ಡಬಳ್ಳಾಪುರದಲ್ಲಿ ಚಿಕಿತ್ಸೆ ನೀಡುವುದು ಕಷ್ಟ ಎಂದು ವೈದ್ಯರು ಹೇಳಿದ್ದರಿಂದ ತಕ್ಷಣವೆ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೂ ಕರೆದೊಯ್ದಿದ್ದಾರೆ. ಇದರ ಜೊತೆಗೆ ಮಂಜುನಾಥ್ ಬಳಿ ಇದ್ದ ಹಣ, ಮೊಬೈಲ್ ಹಾಗೂ ಪರ್ಸ್ ಅಪಘಾತ ಸ್ಥಳದಲ್ಲಿ ಬಿದ್ದು ಹೋಗಿತ್ತು. ಹಣ ಮತ್ತು ವಸ್ತುಗಳನ್ನು ಜೋಪಾನವಾಗಿ ಮಂಜುನಾಥ್ ಅವರ ಕುಟುಂಬ ಸದಸ್ಯರಿಗೆ ತಲುಪಿಸಿರುವ ಆಂಬುಲೆನ್ಸ್ ಚಾಲಕ ಹಾಗೂ ಆಂಬುಲೆನ್ಸ್ ನಲ್ಲಿದ್ದ ನರ್ಸ್ ಹೇಮಾವತಿ. ಇವರ ಪ್ರಾಮಾಣಿಕತೆಗೆ ಎಲ್ಲರೂ ಕೃತಜ್ಞತೆ ಸಲ್ಲಿಸಿದ್ದಾರೆ.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…