ಬೈಕ್ ಅಪಘಾತವಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ರೋಗಿಯನ್ನು ಮಾಹಿತಿ ಬಂದ ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದಲ್ಲದೆ, ಅಪಘಾತಕ್ಕೆ ಒಳಗಾಗಿದ್ದ ವ್ಯಕ್ತಿ ಜೇಬಿನಲ್ಲಿದ್ದ ಹಣ, ಪರ್ಸ್, ಮೊಬೈಲ್ ನ್ನು ಸಂಬಂಧಿಕರಿಗೆ ತಲುಪಿಸುವ ಮೂಲಕ ದೊಡ್ಡಬಳ್ಳಾಪುರದಲ್ಲಿನ 108 ಆಂಬುಲೆನ್ಸ್ ಚಾಲಕ ನರಸಿಂಹಮೂರ್ತಿ ಪ್ರಮಾಣಿಕತೆ ತೋರಿದ್ದಾರೆ.
ಶುಕ್ತವಾರ ಮಧ್ಯಾಹ್ನ ತಾಲ್ಲೂಕಿನ ಗೌರಿಬಿದನೂರು ರಸ್ತೆಯ ಗುಂಡಮಗೆರೆ ಕ್ರಾಸ್ ನಲ್ಲಿ ಲೇಪಾಕ್ಷಿಗೆ ಹೋಗುತ್ತಿದ್ದ ಮಂಜುನಾಥ್ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಇವರ ಜೇಬಿನಲ್ಲಿದ್ದ ಪರ್ಸ್ ನಲ್ಲಿ 9,100 ಹಣ, ಮೊಬೈಲ್ ಸಹ ಇತ್ತು. ದೊಡ್ಡಬಳ್ಳಾಪುರದಲ್ಲಿ ಚಿಕಿತ್ಸೆ ನೀಡುವುದು ಕಷ್ಟ ಎಂದು ವೈದ್ಯರು ಹೇಳಿದ್ದರಿಂದ ತಕ್ಷಣವೆ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೂ ಕರೆದೊಯ್ದಿದ್ದಾರೆ. ಇದರ ಜೊತೆಗೆ ಮಂಜುನಾಥ್ ಬಳಿ ಇದ್ದ ಹಣ, ಮೊಬೈಲ್ ಹಾಗೂ ಪರ್ಸ್ ಅಪಘಾತ ಸ್ಥಳದಲ್ಲಿ ಬಿದ್ದು ಹೋಗಿತ್ತು. ಹಣ ಮತ್ತು ವಸ್ತುಗಳನ್ನು ಜೋಪಾನವಾಗಿ ಮಂಜುನಾಥ್ ಅವರ ಕುಟುಂಬ ಸದಸ್ಯರಿಗೆ ತಲುಪಿಸಿರುವ ಆಂಬುಲೆನ್ಸ್ ಚಾಲಕ ಹಾಗೂ ಆಂಬುಲೆನ್ಸ್ ನಲ್ಲಿದ್ದ ನರ್ಸ್ ಹೇಮಾವತಿ. ಇವರ ಪ್ರಾಮಾಣಿಕತೆಗೆ ಎಲ್ಲರೂ ಕೃತಜ್ಞತೆ ಸಲ್ಲಿಸಿದ್ದಾರೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…