ಬೈಕ್ ಅಪಘಾತವಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ರೋಗಿಯನ್ನು ಮಾಹಿತಿ ಬಂದ ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದಲ್ಲದೆ, ಅಪಘಾತಕ್ಕೆ ಒಳಗಾಗಿದ್ದ ವ್ಯಕ್ತಿ ಜೇಬಿನಲ್ಲಿದ್ದ ಹಣ, ಪರ್ಸ್, ಮೊಬೈಲ್ ನ್ನು ಸಂಬಂಧಿಕರಿಗೆ ತಲುಪಿಸುವ ಮೂಲಕ ದೊಡ್ಡಬಳ್ಳಾಪುರದಲ್ಲಿನ 108 ಆಂಬುಲೆನ್ಸ್ ಚಾಲಕ ನರಸಿಂಹಮೂರ್ತಿ ಪ್ರಮಾಣಿಕತೆ ತೋರಿದ್ದಾರೆ.
ಶುಕ್ತವಾರ ಮಧ್ಯಾಹ್ನ ತಾಲ್ಲೂಕಿನ ಗೌರಿಬಿದನೂರು ರಸ್ತೆಯ ಗುಂಡಮಗೆರೆ ಕ್ರಾಸ್ ನಲ್ಲಿ ಲೇಪಾಕ್ಷಿಗೆ ಹೋಗುತ್ತಿದ್ದ ಮಂಜುನಾಥ್ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಇವರ ಜೇಬಿನಲ್ಲಿದ್ದ ಪರ್ಸ್ ನಲ್ಲಿ 9,100 ಹಣ, ಮೊಬೈಲ್ ಸಹ ಇತ್ತು. ದೊಡ್ಡಬಳ್ಳಾಪುರದಲ್ಲಿ ಚಿಕಿತ್ಸೆ ನೀಡುವುದು ಕಷ್ಟ ಎಂದು ವೈದ್ಯರು ಹೇಳಿದ್ದರಿಂದ ತಕ್ಷಣವೆ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೂ ಕರೆದೊಯ್ದಿದ್ದಾರೆ. ಇದರ ಜೊತೆಗೆ ಮಂಜುನಾಥ್ ಬಳಿ ಇದ್ದ ಹಣ, ಮೊಬೈಲ್ ಹಾಗೂ ಪರ್ಸ್ ಅಪಘಾತ ಸ್ಥಳದಲ್ಲಿ ಬಿದ್ದು ಹೋಗಿತ್ತು. ಹಣ ಮತ್ತು ವಸ್ತುಗಳನ್ನು ಜೋಪಾನವಾಗಿ ಮಂಜುನಾಥ್ ಅವರ ಕುಟುಂಬ ಸದಸ್ಯರಿಗೆ ತಲುಪಿಸಿರುವ ಆಂಬುಲೆನ್ಸ್ ಚಾಲಕ ಹಾಗೂ ಆಂಬುಲೆನ್ಸ್ ನಲ್ಲಿದ್ದ ನರ್ಸ್ ಹೇಮಾವತಿ. ಇವರ ಪ್ರಾಮಾಣಿಕತೆಗೆ ಎಲ್ಲರೂ ಕೃತಜ್ಞತೆ ಸಲ್ಲಿಸಿದ್ದಾರೆ.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…