ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ ಪರಾರಿಯಾದ ವ್ಯಕ್ತಿಗಳ ಬಂಧನ ಮಾಡಲಾಗಿದೆ…
ಅಪಘಾತದಲ್ಲಿ ಸಿಲುಕಿ ಪ್ರಜ್ಞೆ ತಪ್ಪಿ ಬಿದ್ದ ವ್ಯಕ್ತಿಯನ್ನ ಆಸ್ಪತ್ರೆಗೆ ಸೇರಿಸುವುದಾಗಿ ನಂಬಿಸಿ ಆತನ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ವರ್ಗಾಯಿಸಿಕೊಂಡು ಆಸ್ಪತ್ರೆಗೆ ದಾಖಲಿಸದೆ ಪರಾರಿಯಾಗಿದ್ದ ಇಬ್ಬರು ಐನಾತಿಗಳನ್ನ ಬಂಧಿಸುವಲ್ಲಿ ಜಿಲ್ಲಾ ಸೈಬರ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಘಟನೆ ನಡೆದ ಕೆಲವೇ ದಿನಗಳಲ್ಲಿ ಆರೋಪಿಗಳನ್ನ ಬಂಧಿಸಿದ್ದಾರೆ.
ಮಹದೇವಪುರ ನಿವಾಸಿ ರಮೇಶ್(25) ಹಾಗೂ ರಮಾಬಾಯಿ ನಗರದ ಮನು(25) ಬಂಧಿತ ಆರೋಪಿಗಳು.ಬಂಧಿತರಿಂದ 80 ಸಾವಿರ ನಗದು ಹಾಗೂ ಎರಡು ಮೊಬೈಲ್ ಗಳನ್ನ ಅಮಾನತುಪಡಿಸಿಕೊಳ್ಳಲಾಗಿದೆ.
ಡಿ.16 ರಂದು ಗಣೇಶ್ ಎಂಬುವರು ಕಡಕೊಳ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುವ ವೇಳೆ ನಾಯಿ ಅಡ್ಡ ಬಂದ ಪರಿಣಾಮ ಆಯತಪ್ಪಿಬಿದ್ದು ಪ್ರಜ್ಞಾಹೀನರಾಗಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಖದೀಮರು ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವರ್ಗಾಯಿಸಿಕೊಂಡು ಆಸ್ಪತ್ರೆಗೂ ದಾಖಲಿಸದೆ ಪರಾರಿಯಾಗಿದ್ದರು. ಈ ಸಂಬಂಧ ಗಾಯಗೊಂಡ ವ್ಯಕ್ತಿ ಸಹೋದರ ದೂರು ನೀಡಿದ್ದರು. ಕೂಡಲೇ ಎಚ್ಚೆತ್ತ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ.
ಎಸ್ಪಿ ಎನ್.ವಿಷ್ಣುವರ್ಧನ್,ಅಡಿಷನಲ್ ಎಸ್ಪಿ ಸಿ ಮಲ್ಲಿಕ್ ಹಾಗೂ ಎಲ್ ನಾಗೇಶ್ ಮಾರ್ಗದರ್ಶನದಲ್ಲಿ ಸೈಬರ್ ಠಾಣೆಯ ಡಿವೈಎಸ್ಪಿ ಆರ್.ಶ್ರೀಕಾಂತ್ ರವರ ನೇತೃತ್ವದಲ್ಲಿ ನಿರೀಕ್ಷಕರಾದ ಸುನಿಲ್,ಎಸ್ಸೈ ಸುರೇಶ್ ಬೋಪಣ್ಣ, ಸಿಬ್ಬಂದಿ ಮಂಜುನಾಥ್, ರಂಗಸ್ವಾಮಿ, ಬಸವರಾಜ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…