Categories: Crime

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ ಪರಾರಿಯಾದ ವ್ಯಕ್ತಿಗಳ ಬಂಧನ ಮಾಡಲಾಗಿದೆ…

ಅಪಘಾತದಲ್ಲಿ ಸಿಲುಕಿ ಪ್ರಜ್ಞೆ ತಪ್ಪಿ ಬಿದ್ದ ವ್ಯಕ್ತಿಯನ್ನ ಆಸ್ಪತ್ರೆಗೆ ಸೇರಿಸುವುದಾಗಿ ನಂಬಿಸಿ ಆತನ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ವರ್ಗಾಯಿಸಿಕೊಂಡು ಆಸ್ಪತ್ರೆಗೆ ದಾಖಲಿಸದೆ ಪರಾರಿಯಾಗಿದ್ದ ಇಬ್ಬರು ಐನಾತಿಗಳನ್ನ ಬಂಧಿಸುವಲ್ಲಿ ಜಿಲ್ಲಾ ಸೈಬರ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಘಟನೆ ನಡೆದ ಕೆಲವೇ ದಿನಗಳಲ್ಲಿ ಆರೋಪಿಗಳನ್ನ ಬಂಧಿಸಿದ್ದಾರೆ.

ಮಹದೇವಪುರ ನಿವಾಸಿ ರಮೇಶ್(25) ಹಾಗೂ ರಮಾಬಾಯಿ ನಗರದ ಮನು(25) ಬಂಧಿತ ಆರೋಪಿಗಳು.ಬಂಧಿತರಿಂದ 80 ಸಾವಿರ ನಗದು ಹಾಗೂ ಎರಡು ಮೊಬೈಲ್ ಗಳನ್ನ ಅಮಾನತುಪಡಿಸಿಕೊಳ್ಳಲಾಗಿದೆ.

ಡಿ.16 ರಂದು ಗಣೇಶ್ ಎಂಬುವರು ಕಡಕೊಳ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುವ ವೇಳೆ ನಾಯಿ ಅಡ್ಡ ಬಂದ ಪರಿಣಾಮ ಆಯತಪ್ಪಿಬಿದ್ದು ಪ್ರಜ್ಞಾಹೀನರಾಗಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಖದೀಮರು ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವರ್ಗಾಯಿಸಿಕೊಂಡು ಆಸ್ಪತ್ರೆಗೂ ದಾಖಲಿಸದೆ ಪರಾರಿಯಾಗಿದ್ದರು. ಈ ಸಂಬಂಧ ಗಾಯಗೊಂಡ ವ್ಯಕ್ತಿ ಸಹೋದರ ದೂರು ನೀಡಿದ್ದರು. ಕೂಡಲೇ ಎಚ್ಚೆತ್ತ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ.

ಎಸ್ಪಿ ಎನ್.ವಿಷ್ಣುವರ್ಧನ್,ಅಡಿಷನಲ್ ಎಸ್ಪಿ ಸಿ ಮಲ್ಲಿಕ್ ಹಾಗೂ ಎಲ್ ನಾಗೇಶ್ ಮಾರ್ಗದರ್ಶನದಲ್ಲಿ ಸೈಬರ್ ಠಾಣೆಯ ಡಿವೈಎಸ್ಪಿ ಆರ್.ಶ್ರೀಕಾಂತ್ ರವರ ನೇತೃತ್ವದಲ್ಲಿ ನಿರೀಕ್ಷಕರಾದ ಸುನಿಲ್,ಎಸ್ಸೈ ಸುರೇಶ್ ಬೋಪಣ್ಣ, ಸಿಬ್ಬಂದಿ ಮಂಜುನಾಥ್, ರಂಗಸ್ವಾಮಿ, ಬಸವರಾಜ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Ramesh Babu

Journalist

Recent Posts

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

13 hours ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

15 hours ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

16 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

1 day ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 day ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

1 day ago