Categories: Crime

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ ಪರಾರಿಯಾದ ವ್ಯಕ್ತಿಗಳ ಬಂಧನ ಮಾಡಲಾಗಿದೆ…

ಅಪಘಾತದಲ್ಲಿ ಸಿಲುಕಿ ಪ್ರಜ್ಞೆ ತಪ್ಪಿ ಬಿದ್ದ ವ್ಯಕ್ತಿಯನ್ನ ಆಸ್ಪತ್ರೆಗೆ ಸೇರಿಸುವುದಾಗಿ ನಂಬಿಸಿ ಆತನ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ವರ್ಗಾಯಿಸಿಕೊಂಡು ಆಸ್ಪತ್ರೆಗೆ ದಾಖಲಿಸದೆ ಪರಾರಿಯಾಗಿದ್ದ ಇಬ್ಬರು ಐನಾತಿಗಳನ್ನ ಬಂಧಿಸುವಲ್ಲಿ ಜಿಲ್ಲಾ ಸೈಬರ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಘಟನೆ ನಡೆದ ಕೆಲವೇ ದಿನಗಳಲ್ಲಿ ಆರೋಪಿಗಳನ್ನ ಬಂಧಿಸಿದ್ದಾರೆ.

ಮಹದೇವಪುರ ನಿವಾಸಿ ರಮೇಶ್(25) ಹಾಗೂ ರಮಾಬಾಯಿ ನಗರದ ಮನು(25) ಬಂಧಿತ ಆರೋಪಿಗಳು.ಬಂಧಿತರಿಂದ 80 ಸಾವಿರ ನಗದು ಹಾಗೂ ಎರಡು ಮೊಬೈಲ್ ಗಳನ್ನ ಅಮಾನತುಪಡಿಸಿಕೊಳ್ಳಲಾಗಿದೆ.

ಡಿ.16 ರಂದು ಗಣೇಶ್ ಎಂಬುವರು ಕಡಕೊಳ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುವ ವೇಳೆ ನಾಯಿ ಅಡ್ಡ ಬಂದ ಪರಿಣಾಮ ಆಯತಪ್ಪಿಬಿದ್ದು ಪ್ರಜ್ಞಾಹೀನರಾಗಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಖದೀಮರು ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವರ್ಗಾಯಿಸಿಕೊಂಡು ಆಸ್ಪತ್ರೆಗೂ ದಾಖಲಿಸದೆ ಪರಾರಿಯಾಗಿದ್ದರು. ಈ ಸಂಬಂಧ ಗಾಯಗೊಂಡ ವ್ಯಕ್ತಿ ಸಹೋದರ ದೂರು ನೀಡಿದ್ದರು. ಕೂಡಲೇ ಎಚ್ಚೆತ್ತ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ.

ಎಸ್ಪಿ ಎನ್.ವಿಷ್ಣುವರ್ಧನ್,ಅಡಿಷನಲ್ ಎಸ್ಪಿ ಸಿ ಮಲ್ಲಿಕ್ ಹಾಗೂ ಎಲ್ ನಾಗೇಶ್ ಮಾರ್ಗದರ್ಶನದಲ್ಲಿ ಸೈಬರ್ ಠಾಣೆಯ ಡಿವೈಎಸ್ಪಿ ಆರ್.ಶ್ರೀಕಾಂತ್ ರವರ ನೇತೃತ್ವದಲ್ಲಿ ನಿರೀಕ್ಷಕರಾದ ಸುನಿಲ್,ಎಸ್ಸೈ ಸುರೇಶ್ ಬೋಪಣ್ಣ, ಸಿಬ್ಬಂದಿ ಮಂಜುನಾಥ್, ರಂಗಸ್ವಾಮಿ, ಬಸವರಾಜ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

1 hour ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

3 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

8 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

1 day ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

1 day ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago