Categories: ರಾಜ್ಯ

ಅಪಘಾತ ಪರಿಹಾರ ಮೊತ್ತ ಹೆಚ್ಚಿಸಿದ ಕೆಎಸ್ಆರ್ ಟಿಸಿ: ಪರಿಹಾರ ಮೊತ್ತದ ಮಾಹಿತಿ ಇಲ್ಲಿದೆ…

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC)ದ ಬಸ್ಸುಗಳು ಅಪಘಾತಕ್ಕೀಡಾದಾಗ, ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ದುರದೃಷ್ಟವಶಾತ್ ಮೃತಪಟ್ಟಲ್ಲಿ ಮೃತ ಪ್ರಯಾಣಿಕರ ಅವಲಂವಿತರಿಗೆ ಹೆಚ್ಚಿನ ಆರ್ಥಿಕ ಸದುದ್ದೇಶದಿಂದ ಪ್ರಯಾಣಿಕರ ಅಪಘಾತ ಪರಿಹಾರ ನಿಧಿ ಟ್ರಸ್ಟ್ ವತಿಯಿಂದ ಪ್ರಸ್ತುತ ನೀಡಲಾಗುತ್ತಿರುವ ಆರ್ಥಿಕ ಪರಿಹಾರ ಮೊತ್ತವನ್ನು 3 ಲಕ್ಷದಿಂದ 10ಲಕ್ಷಗಳಿಗೆ 2024ರ ಜನವರಿ 1ರಿಂದ ಜಾರಿಗೆ ಬರುವಂತೆ ಹೆಚ್ಚಿಸಲಾಗಿದೆ.

ಮೃತರ ಕುಟುಂಬಕ್ಕೆ ಹೆಚ್ಚುವರಿ ಪರಿಹಾರ ಮೊತ್ತವನ್ನ ನೀಡುವ ಸಲುವಾಗಿ ರೂ.50 ರಿಂದ 99ರವರೆಗಿನ ಮುಖ‌ಬೆಲೆಯ ಟಿಕೆಟ್ ಪಡೆದು ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಂದ ತಲಾ 1ರೂ. ಮತ್ತು 100ರೂ. ಹಾಗೂ ಹೆಚ್ಚಿನ ಬೆಲೆಯ ಟಿಕೆಟ್ ಪಡೆದು ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವವರ ಪ್ರಯಾಣಿಕರಿಂದ ತಲಾ 2ರೂ. ರಂತೆ ಅಪಘಾತ ಪರಿಹಾರ ನಿಧಿ ವಂತಿಕೆ ಸಂಗ್ರಹಣೆಯನ್ನೂ ಸಹ ಪಡೆದುಕೊಳ್ಳಲಾಗುವುದು.

ರೂ. 1ರಿಂದ 49ರವರೆಗಿನ ಮುಖ ಬೆಲೆಯ ಟಿಕೆಟ್ ಪಡೆದು ಪ್ರಯಾಣಿಸುವವರ ಪ್ರಯಾಣಿಕರಿಗೆ ಯಾವುದೇ ಅಪಘಾತ ಪರಿಹಾರ ನಿಧಿ ವಂತಿಕೆ ಇರುವುದಿಲ್ಲ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Ramesh Babu

Journalist

Recent Posts

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

2 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

12 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

23 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

1 day ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

1 day ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

1 day ago