Categories: ರಾಜ್ಯ

ಅಪಘಾತ ಪರಿಹಾರ ಮೊತ್ತ ಹೆಚ್ಚಿಸಿದ ಕೆಎಸ್ಆರ್ ಟಿಸಿ: ಪರಿಹಾರ ಮೊತ್ತದ ಮಾಹಿತಿ ಇಲ್ಲಿದೆ…

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC)ದ ಬಸ್ಸುಗಳು ಅಪಘಾತಕ್ಕೀಡಾದಾಗ, ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ದುರದೃಷ್ಟವಶಾತ್ ಮೃತಪಟ್ಟಲ್ಲಿ ಮೃತ ಪ್ರಯಾಣಿಕರ ಅವಲಂವಿತರಿಗೆ ಹೆಚ್ಚಿನ ಆರ್ಥಿಕ ಸದುದ್ದೇಶದಿಂದ ಪ್ರಯಾಣಿಕರ ಅಪಘಾತ ಪರಿಹಾರ ನಿಧಿ ಟ್ರಸ್ಟ್ ವತಿಯಿಂದ ಪ್ರಸ್ತುತ ನೀಡಲಾಗುತ್ತಿರುವ ಆರ್ಥಿಕ ಪರಿಹಾರ ಮೊತ್ತವನ್ನು 3 ಲಕ್ಷದಿಂದ 10ಲಕ್ಷಗಳಿಗೆ 2024ರ ಜನವರಿ 1ರಿಂದ ಜಾರಿಗೆ ಬರುವಂತೆ ಹೆಚ್ಚಿಸಲಾಗಿದೆ.

ಮೃತರ ಕುಟುಂಬಕ್ಕೆ ಹೆಚ್ಚುವರಿ ಪರಿಹಾರ ಮೊತ್ತವನ್ನ ನೀಡುವ ಸಲುವಾಗಿ ರೂ.50 ರಿಂದ 99ರವರೆಗಿನ ಮುಖ‌ಬೆಲೆಯ ಟಿಕೆಟ್ ಪಡೆದು ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಂದ ತಲಾ 1ರೂ. ಮತ್ತು 100ರೂ. ಹಾಗೂ ಹೆಚ್ಚಿನ ಬೆಲೆಯ ಟಿಕೆಟ್ ಪಡೆದು ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವವರ ಪ್ರಯಾಣಿಕರಿಂದ ತಲಾ 2ರೂ. ರಂತೆ ಅಪಘಾತ ಪರಿಹಾರ ನಿಧಿ ವಂತಿಕೆ ಸಂಗ್ರಹಣೆಯನ್ನೂ ಸಹ ಪಡೆದುಕೊಳ್ಳಲಾಗುವುದು.

ರೂ. 1ರಿಂದ 49ರವರೆಗಿನ ಮುಖ ಬೆಲೆಯ ಟಿಕೆಟ್ ಪಡೆದು ಪ್ರಯಾಣಿಸುವವರ ಪ್ರಯಾಣಿಕರಿಗೆ ಯಾವುದೇ ಅಪಘಾತ ಪರಿಹಾರ ನಿಧಿ ವಂತಿಕೆ ಇರುವುದಿಲ್ಲ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

17 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

20 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

21 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

24 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago