ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸುವುದು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ರಾಜ್ಯದ ಜನಸಂಖ್ಯೆ 7 ಕೋಟಿ ದಾಟಿ ಹೋಗುತ್ತಿದೆ. ಇವರೆಲ್ಲರ ರಕ್ಷಣೆ, ಆಸ್ತಿ ಪಾಸ್ತಿ, ಮಾನ, ಪ್ರಾಣ ರಕ್ಷಿಸಿ ನೆಮ್ಮದಿಯ ಬದುಕಿಗೆ ಸುರಕ್ಷಿತ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ. ಇದಕ್ಕಾಗಿ ಇಲಾಖೆಗೆ ಅಗತ್ಯವಾದ ಸವಲತ್ತು ಮತ್ತು ನೂತನ ಠಾಣೆಗಳನ್ನು ಒದಗಿಸಲು ಸರ್ಕಾರ ಸದಾ ಸಿದ್ಧವಿದೆ ಎಂದರು.
ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಇದ್ದಾಗ ಅಭಿವೃದ್ಧಿಯ ವೇಗ ಹೆಚ್ಚುತ್ತದೆ. ಹೀಗಾಗಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಿ ಠಾಣೆಗೆ ಬರುವವರನ್ನು ಆರೋಗ್ಯಕರವಾಗಿ ನಡೆಸಿಕೊಳ್ಳಬೇಕು ಎಂದು ಹೇಳಿದರು.
ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗುತ್ತಿರುವುದು ನೆಮ್ಮದಿಯ ಸಂಗತಿ. ಆದರೆ ಪೊಲೀಸರು ಚಾಪೆ ಕೆಳಗೆ ತೂರಿದರೆ ಅಪರಾಧಿಗಳು ರಂಗೋಲಿ ಕೆಳಗೆ ತೂರಿ, ಕಾನೂನಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಾರೆ. ಇದಕ್ಕೆ ಅವಕಾಶ ಆಗಬಾರದು ಎಂದು ತಿಳಿಸಿದರು.
ಜನರಿಗೆ ಉದ್ಯೋಗ ಇಲ್ಲದಿರುವುದು, ಬದುಕಿಗೆ ಅವಕಾಶ ಇಲ್ಲದಿರುವಾಗ ಅಪರಾಧ ಜಗತ್ತಿನ ಕಡೆಗೆ ಆಕರ್ಷಿತರಾಗುತ್ತಾರೆ. ನಗರದಲ್ಲಿ ರಿಯಲ್ ಎಸ್ಟೇಟ್ ದಂಧೆ ಕಾರಣದಿಂದ ಅಪರಾಧಗಳು ಹೆಚ್ಚಾಗುತ್ತಿವೆ. ಪೊಲೀಸರು ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಕೈ ಜೋಡಿಸಿದರೆ ಸಹಿಸಲ್ಲ. ಯಾವುದೇ ಕಾರಣಕ್ಕೂ ಅಕ್ರಮ ರಿಯಲ್ ಎಸ್ಟೇಟ್ ಗೆ ಬೆಂಬಲ ನೀಡುಬಾರದು. ಬೆಂಬಲ ಕೊಡುವ ಕೆಲಸ ಮಾಡಿದರೆ ಸರ್ಕಾರ ಸಹಿಸಲ್ಲ ಎಂದರು.
ಪೇದೆಗಳು, ಎಸ್.ಐ ಗಳು, ಇನ್ಸ್ಪೆಕ್ಟರ್ಗಳೇ ಹೆಚ್ಚೆಚ್ಚು ಕೆಲಸ ಮಾಡುತ್ತಾರೆ. ಇವರ ಯೋಗಕ್ಷೇಮ ಕೂಡ ನಮ್ಮ ಜವಾಬ್ದಾರಿ. ಪೊಲೀಸ್ ಸಿಬ್ಬಂದಿಯ ಗೃಹ ಯೋಜನೆಯನ್ನು ಸರ್ಕಾರ ಮುಂದುವರೆಸುತ್ತದೆ ಎಂದು ಹೇಳಿದರು.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…