ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸುವುದು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ರಾಜ್ಯದ ಜನಸಂಖ್ಯೆ 7 ಕೋಟಿ ದಾಟಿ ಹೋಗುತ್ತಿದೆ. ಇವರೆಲ್ಲರ ರಕ್ಷಣೆ, ಆಸ್ತಿ ಪಾಸ್ತಿ, ಮಾನ, ಪ್ರಾಣ ರಕ್ಷಿಸಿ ನೆಮ್ಮದಿಯ ಬದುಕಿಗೆ ಸುರಕ್ಷಿತ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ. ಇದಕ್ಕಾಗಿ ಇಲಾಖೆಗೆ ಅಗತ್ಯವಾದ ಸವಲತ್ತು ಮತ್ತು ನೂತನ ಠಾಣೆಗಳನ್ನು ಒದಗಿಸಲು ಸರ್ಕಾರ ಸದಾ ಸಿದ್ಧವಿದೆ ಎಂದರು.
ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಇದ್ದಾಗ ಅಭಿವೃದ್ಧಿಯ ವೇಗ ಹೆಚ್ಚುತ್ತದೆ. ಹೀಗಾಗಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಿ ಠಾಣೆಗೆ ಬರುವವರನ್ನು ಆರೋಗ್ಯಕರವಾಗಿ ನಡೆಸಿಕೊಳ್ಳಬೇಕು ಎಂದು ಹೇಳಿದರು.
ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗುತ್ತಿರುವುದು ನೆಮ್ಮದಿಯ ಸಂಗತಿ. ಆದರೆ ಪೊಲೀಸರು ಚಾಪೆ ಕೆಳಗೆ ತೂರಿದರೆ ಅಪರಾಧಿಗಳು ರಂಗೋಲಿ ಕೆಳಗೆ ತೂರಿ, ಕಾನೂನಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಾರೆ. ಇದಕ್ಕೆ ಅವಕಾಶ ಆಗಬಾರದು ಎಂದು ತಿಳಿಸಿದರು.
ಜನರಿಗೆ ಉದ್ಯೋಗ ಇಲ್ಲದಿರುವುದು, ಬದುಕಿಗೆ ಅವಕಾಶ ಇಲ್ಲದಿರುವಾಗ ಅಪರಾಧ ಜಗತ್ತಿನ ಕಡೆಗೆ ಆಕರ್ಷಿತರಾಗುತ್ತಾರೆ. ನಗರದಲ್ಲಿ ರಿಯಲ್ ಎಸ್ಟೇಟ್ ದಂಧೆ ಕಾರಣದಿಂದ ಅಪರಾಧಗಳು ಹೆಚ್ಚಾಗುತ್ತಿವೆ. ಪೊಲೀಸರು ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಕೈ ಜೋಡಿಸಿದರೆ ಸಹಿಸಲ್ಲ. ಯಾವುದೇ ಕಾರಣಕ್ಕೂ ಅಕ್ರಮ ರಿಯಲ್ ಎಸ್ಟೇಟ್ ಗೆ ಬೆಂಬಲ ನೀಡುಬಾರದು. ಬೆಂಬಲ ಕೊಡುವ ಕೆಲಸ ಮಾಡಿದರೆ ಸರ್ಕಾರ ಸಹಿಸಲ್ಲ ಎಂದರು.
ಪೇದೆಗಳು, ಎಸ್.ಐ ಗಳು, ಇನ್ಸ್ಪೆಕ್ಟರ್ಗಳೇ ಹೆಚ್ಚೆಚ್ಚು ಕೆಲಸ ಮಾಡುತ್ತಾರೆ. ಇವರ ಯೋಗಕ್ಷೇಮ ಕೂಡ ನಮ್ಮ ಜವಾಬ್ದಾರಿ. ಪೊಲೀಸ್ ಸಿಬ್ಬಂದಿಯ ಗೃಹ ಯೋಜನೆಯನ್ನು ಸರ್ಕಾರ ಮುಂದುವರೆಸುತ್ತದೆ ಎಂದು ಹೇಳಿದರು.
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…