ಅಪರಾಧಿಗಳಿಗೆ ಭಯದ ವಾತಾವರಣ: ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸುವುದು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯ- ಸಿಎಂ‌ ಸಿದ್ದರಾಮಯ್ಯ

ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸುವುದು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಜ್ಯದ ಜನಸಂಖ್ಯೆ 7 ಕೋಟಿ ದಾಟಿ ಹೋಗುತ್ತಿದೆ. ಇವರೆಲ್ಲರ ರಕ್ಷಣೆ, ಆಸ್ತಿ ಪಾಸ್ತಿ, ಮಾನ, ಪ್ರಾಣ ರಕ್ಷಿಸಿ ನೆಮ್ಮದಿಯ ಬದುಕಿಗೆ ಸುರಕ್ಷಿತ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ. ಇದಕ್ಕಾಗಿ ಇಲಾಖೆಗೆ ಅಗತ್ಯವಾದ ಸವಲತ್ತು ಮತ್ತು ನೂತನ ಠಾಣೆಗಳನ್ನು ಒದಗಿಸಲು ಸರ್ಕಾರ ಸದಾ ಸಿದ್ಧವಿದೆ ಎಂದರು.

ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಇದ್ದಾಗ ಅಭಿವೃದ್ಧಿಯ ವೇಗ ಹೆಚ್ಚುತ್ತದೆ. ಹೀಗಾಗಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಿ ಠಾಣೆಗೆ ಬರುವವರನ್ನು ಆರೋಗ್ಯಕರವಾಗಿ ನಡೆಸಿಕೊಳ್ಳಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗುತ್ತಿರುವುದು ನೆಮ್ಮದಿಯ ಸಂಗತಿ. ಆದರೆ ಪೊಲೀಸರು ಚಾಪೆ ಕೆಳಗೆ ತೂರಿದರೆ ಅಪರಾಧಿಗಳು ರಂಗೋಲಿ ಕೆಳಗೆ ತೂರಿ, ಕಾನೂನಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಾರೆ. ಇದಕ್ಕೆ ಅವಕಾಶ ಆಗಬಾರದು ಎಂದು ತಿಳಿಸಿದರು.

ಜನರಿಗೆ ಉದ್ಯೋಗ ಇಲ್ಲದಿರುವುದು, ಬದುಕಿಗೆ ಅವಕಾಶ ಇಲ್ಲದಿರುವಾಗ ಅಪರಾಧ ಜಗತ್ತಿನ ಕಡೆಗೆ ಆಕರ್ಷಿತರಾಗುತ್ತಾರೆ. ನಗರದಲ್ಲಿ ರಿಯಲ್ ಎಸ್ಟೇಟ್ ದಂಧೆ ಕಾರಣದಿಂದ ಅಪರಾಧಗಳು ಹೆಚ್ಚಾಗುತ್ತಿವೆ. ಪೊಲೀಸರು ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಕೈ ಜೋಡಿಸಿದರೆ ಸಹಿಸಲ್ಲ. ಯಾವುದೇ ಕಾರಣಕ್ಕೂ ಅಕ್ರಮ ರಿಯಲ್ ಎಸ್ಟೇಟ್ ಗೆ ಬೆಂಬಲ ನೀಡುಬಾರದು. ಬೆಂಬಲ ಕೊಡುವ ಕೆಲಸ ಮಾಡಿದರೆ ಸರ್ಕಾರ ಸಹಿಸಲ್ಲ ಎಂದರು.

ಪೇದೆಗಳು, ಎಸ್.ಐ ಗಳು, ಇನ್ಸ್‌ಪೆಕ್ಟರ್‌ಗಳೇ ಹೆಚ್ಚೆಚ್ಚು ಕೆಲಸ ಮಾಡುತ್ತಾರೆ. ಇವರ ಯೋಗಕ್ಷೇಮ ಕೂಡ ನಮ್ಮ ಜವಾಬ್ದಾರಿ. ಪೊಲೀಸ್ ಸಿಬ್ಬಂದಿಯ ಗೃಹ ಯೋಜನೆಯನ್ನು ಸರ್ಕಾರ ಮುಂದುವರೆಸುತ್ತದೆ ಎಂದು ಹೇಳಿದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…

4 hours ago

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

16 hours ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

16 hours ago

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

21 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

1 day ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

2 days ago