ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸುವುದು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ರಾಜ್ಯದ ಜನಸಂಖ್ಯೆ 7 ಕೋಟಿ ದಾಟಿ ಹೋಗುತ್ತಿದೆ. ಇವರೆಲ್ಲರ ರಕ್ಷಣೆ, ಆಸ್ತಿ ಪಾಸ್ತಿ, ಮಾನ, ಪ್ರಾಣ ರಕ್ಷಿಸಿ ನೆಮ್ಮದಿಯ ಬದುಕಿಗೆ ಸುರಕ್ಷಿತ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ. ಇದಕ್ಕಾಗಿ ಇಲಾಖೆಗೆ ಅಗತ್ಯವಾದ ಸವಲತ್ತು ಮತ್ತು ನೂತನ ಠಾಣೆಗಳನ್ನು ಒದಗಿಸಲು ಸರ್ಕಾರ ಸದಾ ಸಿದ್ಧವಿದೆ ಎಂದರು.
ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಇದ್ದಾಗ ಅಭಿವೃದ್ಧಿಯ ವೇಗ ಹೆಚ್ಚುತ್ತದೆ. ಹೀಗಾಗಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಿ ಠಾಣೆಗೆ ಬರುವವರನ್ನು ಆರೋಗ್ಯಕರವಾಗಿ ನಡೆಸಿಕೊಳ್ಳಬೇಕು ಎಂದು ಹೇಳಿದರು.
ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗುತ್ತಿರುವುದು ನೆಮ್ಮದಿಯ ಸಂಗತಿ. ಆದರೆ ಪೊಲೀಸರು ಚಾಪೆ ಕೆಳಗೆ ತೂರಿದರೆ ಅಪರಾಧಿಗಳು ರಂಗೋಲಿ ಕೆಳಗೆ ತೂರಿ, ಕಾನೂನಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಾರೆ. ಇದಕ್ಕೆ ಅವಕಾಶ ಆಗಬಾರದು ಎಂದು ತಿಳಿಸಿದರು.
ಜನರಿಗೆ ಉದ್ಯೋಗ ಇಲ್ಲದಿರುವುದು, ಬದುಕಿಗೆ ಅವಕಾಶ ಇಲ್ಲದಿರುವಾಗ ಅಪರಾಧ ಜಗತ್ತಿನ ಕಡೆಗೆ ಆಕರ್ಷಿತರಾಗುತ್ತಾರೆ. ನಗರದಲ್ಲಿ ರಿಯಲ್ ಎಸ್ಟೇಟ್ ದಂಧೆ ಕಾರಣದಿಂದ ಅಪರಾಧಗಳು ಹೆಚ್ಚಾಗುತ್ತಿವೆ. ಪೊಲೀಸರು ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಕೈ ಜೋಡಿಸಿದರೆ ಸಹಿಸಲ್ಲ. ಯಾವುದೇ ಕಾರಣಕ್ಕೂ ಅಕ್ರಮ ರಿಯಲ್ ಎಸ್ಟೇಟ್ ಗೆ ಬೆಂಬಲ ನೀಡುಬಾರದು. ಬೆಂಬಲ ಕೊಡುವ ಕೆಲಸ ಮಾಡಿದರೆ ಸರ್ಕಾರ ಸಹಿಸಲ್ಲ ಎಂದರು.
ಪೇದೆಗಳು, ಎಸ್.ಐ ಗಳು, ಇನ್ಸ್ಪೆಕ್ಟರ್ಗಳೇ ಹೆಚ್ಚೆಚ್ಚು ಕೆಲಸ ಮಾಡುತ್ತಾರೆ. ಇವರ ಯೋಗಕ್ಷೇಮ ಕೂಡ ನಮ್ಮ ಜವಾಬ್ದಾರಿ. ಪೊಲೀಸ್ ಸಿಬ್ಬಂದಿಯ ಗೃಹ ಯೋಜನೆಯನ್ನು ಸರ್ಕಾರ ಮುಂದುವರೆಸುತ್ತದೆ ಎಂದು ಹೇಳಿದರು.
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…
ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…
ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…