ನ.11ರಂದು ತಾಲೂಕಿನ ಎಸ್ಎಸ್ ಘಾಟಿ ಹಾಗೂ ಮಾಕಳಿದುರ್ಗ ಮಾರ್ಗ ಮಧ್ಯೆ ಅಪರಿಚಿತ ವೃದ್ಧೆಯೊಬ್ಬರು ಮುಖದ ತುಂಬಾ ಗಾಯಗಳ ಗುರುತುಗಳಿಂದ ರಕ್ತದ ಮಡುವಿನಲ್ಲಿ ರಸ್ತೆಯಲ್ಲಿ ಬಿದ್ದಿದ್ದರು.
ರಸ್ತೆಯಲ್ಲಿ ಕುಸಿದು ಬಿದ್ದಿದ್ದ ವೃದ್ಧೆಯನ್ನು ಕಂಡ ವಾಹನ ಸವಾರರು ಕೂಡಲೇ ಆಂಬ್ಯುಲೆನ್ಸ್ ಗೆ ಕರೆ ಮಾಡಿ ನಗರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆಸ್ಪತ್ರೆಯಲ್ಲಿ ವೈದ್ಯರಿಂದ ಸೂಕ್ತ ಚಿಕಿತ್ಸೆ ದೊರಕಿದ ನಂತರ ಅಜ್ಜಿಯ ಆರೋಗ್ಯ ಸ್ಥಿತಿ ಉತ್ತಮ ರೀತಿಯಲ್ಲಿದೆ. ಸದ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿ ನಗರದ ಡಿಕ್ರಾಸ್ ರಸ್ತೆಯಲ್ಲಿರುವ ಮಾರುತಿ ನಗರದಲ್ಲಿರುವ ಪವಿತ್ರ ನಿರಾಶ್ರಿತರ ವೃದ್ಧಾಶ್ರಮಕ್ಕೆ ಸೇರಿಸಲಾಗಿದೆ.
ವೃದ್ಧೆಗೆ ಸೂಕ್ತ ಚಿಕಿತ್ಸೆ ನೀಡಿ ಪ್ರಾಣ ಉಳಿಸಿದ ವೃದ್ಯರಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ….
ಸದ್ಯ ವೃದ್ದೆಯ ಹೆಸರು, ವಿಳಾಸ, ಸಂಬಂಧಿಕರ ಮಾಹಿತಿ ತಿಳಿದುಬಂದಿರುವುದಿಲ್ಲ. ವಾರಸುದಾರರು ಕಂಡುಬಂದಲ್ಲಿ ಪವಿತ್ರ ನಿರಾಶ್ರಿತರ ವೃದ್ಧಾಶ್ರಮವನ್ನು ಸಂಪರ್ಕಿಸಬಹುದಾಗಿದೆ….
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…
ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…