ದೊಡ್ಡಬಳ್ಳಾಪುರ ಮತ್ತು ವಡ್ಡರಹಳ್ಳಿ ರೈಲು ನಿಲ್ದಾಣಗಳ ಮಾರ್ಗ ಮಧ್ಯೆ ಅಪರಿಚಿತ ವ್ಯಕ್ತಿಯೊಬ್ಬ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.
ಮೃತ ವ್ಯಕ್ತಿಗೆ ಸುಮಾರು 70 ರಿಂದ 75 ವರ್ಷವಾಗಿದ್ದು, ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ.
ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ಯು.ಡಿ ಆರ್.ನಂ. 190/2024 ಕಲಂ 194 BNSS ರೀತ್ಯಾ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
*ಚಹರೆ* – 5.5ಅಡಿ ಎತ್ತರ, ಕಪ್ಪು ಬಿಳಿ ಮಿಶ್ರಿತ ಬಣ್ಣ, ತಲೆಯಲ್ಲಿ ಸುಮಾರು 1.5 ಇಂಚು ಉದ್ದದ ಬಿಳಿ ಕೂದಲು, ದುಂಡು ಮುಖ ಇದ್ದು, ಸಾಧಾರಣವಾದ ಮೈಕಟ್ಟು ಹೊಂದಿರುತ್ತಾರೆ. ಬಿಳಿ ಗಡ್ಡಾ ಮೀಸೆ ಹೊಂದಿರುತ್ತಾನೆ.
*ಬಟ್ಟೆಗಳು* – ಬಿಳಿ ಬಣ್ಣದ ಚೌಕಲಿ ಶರ್ಟ್, ಕಪ್ಪುಬಣ್ಣದ ಪ್ಯಾಂಟ್, ಸೊಂಟದಲ್ಲಿ ಕಪ್ಪು ನೈಲಾನ್ ಉಡದಾರ, ಕಪ್ಪು ಸ್ವೆಟ್ಟರ್, ಕಡು ಹಸಿರು ಒಳಚಡ್ಡಿ ಮತ್ತು ಕಂದು ಮತ್ತು ಕ್ರೀಂ ಮಿಶ್ರಿತ ಮಂಕಿ ಕ್ಯಾಪ್, ತಿಳಿ ಕಂದು ಬಣ್ಣದ ಕೆಂಪನಯ ಬಾರ್ಡರ್ ಇರುವ ಶಾಲು, ಕಪ್ಪು ಬಣ್ಣದ ಬೆಲ್ಟ್ ಚಪ್ಪಲಿ ಇದ್ದು ವಾರಸುದಾರರು ಯಾರಾದರು ಕಂಡು ಬಂದಲ್ಲಿ ರೈಲ್ವೆ PSI 9480802118/ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ 9480802143 ಸಂಖ್ಯೆಯನ್ನು ಸಂಪರ್ಕಿಸಲು ಕೋರಲಾಗಿದೆ.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…