ಅಪರಿಚಿತ ವ್ಯಕ್ತಿ ಸ್ವಾಭಾವಿಕ ಸಾವು: ವಾರಸುದಾರರು‌ ಇದ್ದಲ್ಲಿ‌ ಈ ಮೊಬೈಲ್ ಸಂಖ್ಯೆಯನ್ನ ಸಂಪರ್ಕಿಸಿ

ಏ.2ರಂದು ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಫ್ಲಾಟ್ ಫಾರಂ ನಂಬರ್ ನಂ. 4, ಹಳೆಯ ರೈಲ್ವೆ ಪೊಲೀಸ್ ಹೊರ ಉಪ ಠಾಣೆಯ ಪಕ್ಕದ ಮರದ ನೆರಳಿನಲ್ಲಿ ಸ್ವಾಭಾವಿಕವಾಗಿ ಮೃತಪಟ್ಟಿದ್ದು, ಸದ್ಯ ವಾರಸುದಾರರು ಪತ್ತೆಯಾಗಿರುವುದಿಲ್ಲ.

*ಮೃತರ ಚಹರೆ* :- ಸುಮಾರು 160cm ಎತ್ತರ, ಸಾಧಾರಣ ಎಣ್ಣೆ ಕೆಂಪು ಮೈಬಣ್ಣ, ದುಂಡು ಮುಖ, ತಲೆಯಲ್ಲಿ ಎರಡು ಇಂಚು ಉದ್ದದ ಮಿಶ್ರಿತ ತಲೆಕೂದಲು, ಅರ್ಧ ಇಂಚು ಉದ್ದದ ಮಿಶ್ರಿತ ಗಡ್ಡ ಮೀಸೆ, ದಪ್ಪನೆಯ ಮೂಗು, ದೃಢ ಕಾಯ ಶರೀರವನ್ನು ಹೊಂದಿದ್ದು, ಬಲಗಾಲು ತೊಡೆಯ ಸಮಕ್ಕೆ ಕತ್ತರಿಸಿ ತೆಗೆದಿರುವ ಗುರುತು ಇದ್ದು, ಶವದ ಪಕ್ಕದಲ್ಲಿ ಕಬ್ಬಿಣದ ಊರುಗೋಲು ಇರುತ್ತದೆ.

*ಬಟ್ಟೆಗಳು*:- ಒಂದು ಬಿಳಿ ಬಣ್ಣದ ಉದ್ದನೆಯ ಗೆರೆಗಳಿರುವ ತುಂಬು ತೋಳಿನ ಶರ್ಟ್ ಧರಿಸಿದ್ದು, ಕಡು ಕಾಫಿ ಬಣ್ಣದ ಅರ್ಧ ತೋಳಿನ ಬನಿಯನ್ ಮತ್ತು ಕಡುಪಾಚಿ ಬಣ್ಣದ ಫ್ಯಾನ್ಸಿ ರೆಡಿಮೇಡ್ ನಿಕ್ಕರ್ ಧರಿಸಿರುತ್ತಾರೆ.

ವಾರಸುದಾರರು ಯಾರಾದರೂ ಇದ್ದಲ್ಲಿ ರೈಲ್ವೆ ಪೊಲೀಸ್ ಹೊರ ಉಪಠಾಣೆ ದೊಡ್ಡಬಳ್ಳಾಪುರ 9480802143 ಸಂಖ್ಯೆಯನ್ನು ಸಂಪರ್ಕಿಸಲು ಈ ಮೂಲಕ ಕೋರಲಾಗಿದೆ.

Ramesh Babu

Journalist

Recent Posts

ತಿರುಮಗೊಂಡಹಳ್ಳಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಘಾಟಿ ಪ್ರಾಧಿಕಾರದ ಸದಸ್ಯರ ಮನವಿ

ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ‌‌ ಗ್ರಾಮದ ಮೂಲಕ ಹಾದುಹೋಗುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥನ ರಸ್ತೆಗೆ ಅಡ್ಡಲಾಗಿ ರೈಲು ಹಳಿ ಹಾದುಹೋಗಿದ್ದು,…

5 hours ago

ಅಧಿಕಾರಿಗಳಲ್ಲಿ ಮಾಹಿತಿ ಕೊರತೆಯಿಂದ ಆರ್‌ಟಿಐ ಅರ್ಜಿಗಳ ವಿಲೇವಾರಿ ವಿಳಂಬ- ಮಾಹಿತಿ ಆಯುಕ್ತ ಹರೀಶ್ ಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ…

6 hours ago

ಧರ್ಮಸ್ಥಳ ಕೇಸ್ ವಿಚಾರ: ತನಿಖೆ ಬೇಗ ಮುಗಿಸಿ ನ್ಯಾಯ ಕೊಡಿಸಿ ಭಾರತೀಯ ಪರಂಪರೆಯನ್ನ ಉಳಿಸಬೇಕು- ಸಚಿವ ವಿ.ಸೋಮಣ್ಣ

ಧರ್ಮಸ್ಥಳ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿ, ಧರ್ಮಸ್ಥಳ ವಿಶ್ವದಲ್ಲೇ ಪವಿತ್ರವಾದ ಸ್ಥಳ. ಅವಷೇಶ ಮತ್ತೊಂದು…

7 hours ago

ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗೆ 20ನೇ ಕಂತಿನ ಹಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ…

7 hours ago

ಪ್ರಜ್ವಲ್ ರೇವಣ್ಣ ಕೇಸ್: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಜೀವನ‌ಪರ್ಯಂತ ಸೆರೆಮನೆ ವಾಸ

ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ದೋಷಿ ಎಂದು…

9 hours ago

ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ

ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ನಡೆದ ಕರ್ನಾಟಕ ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…

18 hours ago