Categories: ಲೇಖನ

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ……

ಅಪರೂಪದ ದುಬಾರಿ ಖಾಯಿಲೆಗಳು……….

ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ ಘಾಸಿ ಮಾಡುತ್ತದೆ. ಅದರಲ್ಲಿ ಒಂದು ಅಪರೂಪದ ದುಬಾರಿ ಖಾಯಿಲೆಗಳು…

ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಪತ್ರಿಕೆಗಳಲ್ಲಿ ಈ ರೀತಿಯ ಮನವಿಗಳನ್ನು ನೋಡುತ್ತೇವೆ..

” ನನಗೆ ತುಂಬಾ ಗಂಭೀರ ಮತ್ತು ಅಪರೂಪದ ಖಾಯಿಲೆ ಬಂದಿದೆ. ಅದಕ್ಕೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ ಎಂದು ವೈದ್ಯರು ಹೇಳಿದ್ದಾರೆ. ಅದಕ್ಕೆ ಸುಮಾರು 10/20/30…… ಲಕ್ಷಗಳಷ್ಟು ಹಣ ಬೇಕಾಗಿದೆ. ಒಂದು ಇಂಜೆಕ್ಷನ್ ಬೆಲೆ 50000/100000/200000…..
ನಾವು ಬಡವರು. ನಮ್ಮ ಬಳಿ ಅಷ್ಟು ಹಣವಿಲ್ಲ. ಆದ್ದರಿಂದ ಯಾರಾದರೂ ದಾನಿಗಳು ದಯವಿಟ್ಟು ಕೆಳಕಂಡ ಬ್ಯಾಂಕ್ ಅಕೌಂಟಿಂಗೆ ಹಣ ಸಹಾಯ ಮಾಡಿ ” ಎಂಬ ನಿಜವಾದ ನತದೃಷ್ಟರ ಮನವಿಗಳು ಕರುಳು ಕಿವುಚಿದಂತೆ ಮಾಡುತ್ತದೆ. ( ಸುಳ್ಳು – ವಂಚನೆಗಳನ್ನು ಹೊರತುಪಡಿಸಿ )….

ಇಂತಹ ಪ್ರಕರಣಗಳಲ್ಲಿ ಆರೋಗ್ಯ ವಿಮೆ, ಮುಖ್ಯಮಂತ್ರಿಗಳ ಪರಿಹಾರ ನಿಧಿ ಮುಂತಾದ ಯೋಜನೆಗಳು ಹೆಚ್ಚು ‌ಉಪಯೋಗ ಆಗುವುದಿಲ್ಲ. ಒಂದು ವೇಳೆ ಆಗುವುದಾದರು ಸರ್ಕಾರದ ಸವಲತ್ತುಗಳನ್ನು ಪಡೆಯಲು ತುಂಬಾ ತುಂಬಾ ಶ್ರಮಪಡಬೇಕು ಮತ್ತು ಸಾಕಷ್ಟು ಸಮಯ ಬೇಕಾಗುತ್ತದೆ. ರೋಗಿಯ ಅಥವಾ ಅವರ ಹತ್ತಿರದ ಸಂಬಂಧಿಕರ ಬಳಿ ಅಷ್ಟು ಚೈತನ್ಯವೇ ಉಳಿದಿರುವುದಿಲ್ಲ….

ಗಂಡ ಹೆಂಡತಿ ಅಪ್ಪ ಅಮ್ಮ ಮಗ ಮಗಳು ಯಾರು ಬೇಕಾದರೂ ಈ ಪರಿಸ್ಥಿತಿಯಲ್ಲಿ ಇರಬಹುದು. ಸಾವಿನ ನಿರೀಕ್ಷೆಯ ಆ ಮನೆಯ ವಾತಾವರಣ ಕಲ್ಪಿಸಿಕೊಳ್ಳುವುದರಿಂದ ನಮ್ಮ ನೋವಿನ ಪ್ರಮಾಣ ಹೆಚ್ಚಾಗುತ್ತದೆ….

ರೋಗಿಯ ಸಂಕಟ, ಅವಲಂಬಿತರ ನರಳಾಟ, ಪ್ರೀತಿ ಪಾತ್ರರ ಗೋಳಾಟ, ವಿಧಿಯ ಅಸಹಾಯಕತೆ ಎಲ್ಲವೂ ನರಕಯಾತನೆ. ಇಂತಹ ಬಹುತೇಕ ಘಟನೆಗಳಲ್ಲಿ ರೋಗಿಯೂ ಉಳಿಯುವ ಸಾಧ್ಯತೆ ಕಡಿಮೆ. ಹಣವೂ ಖರ್ಚು. ಉಳಿದರು ಎಂದಿನ ಬದುಕು ಸಾಧ್ಯವಿಲ್ಲ…..

ರೋಗ ಬಂದಿರುವುದು ಒಬ್ಬರಿಗೆ. ಆದರೆ ನರಳುವುದು ಮಾತ್ರ ಇಡೀ ಕುಟುಂಬ. ಹಾಗೆಂದು ರೋಗಿಯನ್ನು ನಿರ್ಲಕ್ಷಿಸುವುದು ಸಾಧ್ಯವಿಲ್ಲ ಮತ್ತು ಅದು ಅಮಾನವೀಯ. ಬಹುಶಃ ಇದಕ್ಕೊಂದು ಕ್ರಮಬದ್ಧ ಯೋಜನೆ ಸರ್ಕಾರ ರೂಪಿಸಬೇಕಿದೆ….

ಯಾವುದೇ ವ್ಯಕ್ತಿ ಹಣದ ಕಾರಣದಿಂದ ವೈದ್ಯಕೀಯ ಚಿಕಿತ್ಸೆ ಪಡೆಯದೆ ಸಾಯಲು ಸಮಾಜ ಮತ್ತು ಸರ್ಕಾರ ಬಿಡಬಾರದು. ಅದು ಎಷ್ಟೇ ವೆಚ್ಚದ್ದಾಗಿದ್ದರು ವ್ಯಕ್ತಿಗಳಿಗೆ ಸಿಗಬೇಕು. ಅವಕಾಶ ಇದ್ದರೂ ಮನುಷ್ಯರ ಜೀವ ಉಳಿಸಲಾಗದ ಸರ್ಕಾರ ಮತ್ತು ಆಡಳಿತ ವ್ಯವಸ್ಥೆ ಬೇಜವಾಬ್ದಾರಿಯಿಂದ ನಡೆದುಕೊಳ್ಳಬಾರದು….

ಇದಕ್ಕಾಗಿ ಒಂದು ಕ್ರಿಯಾ ಯೋಜನೆ ರೂಪಿಸಬಹುದು. ಯಾವುದಾದರೂ ಸಣ್ಣ ಪ್ರಮಾಣದ ತೆರಿಗೆ ಮತ್ತು ದಾನಿಗಳ ಸಹಾಯದಿಂದ ಒಂದು ಶಾಶ್ವತ ನಿಧಿ ಸ್ಥಾಪಿಸಬಹುದು. ಅಪರೂಪದ ಖಾಯಿಲೆಗಳಿಗೆ ವೈದ್ಯಕೀಯ ವಿನಾಯಿತಿ ಘೋಷಿಸಬಹುದು. ಖಾಯಿಲೆಗಳ ವಿಷಯದಲ್ಲಿ ಮನುಷ್ಯ ಸುಳ್ಳು ಹೇಳುಲು ಆಗುವುದಿಲ್ಲ. ಆದ್ದರಿಂದ ಇದರಲ್ಲಿ ಹೆಚ್ಚು ಪಾರದರ್ಶಕತೆ ಕಾಪಾಡಬಹುದು…..

ಆದರೆ ಸಮಸ್ಯೆ ಇರುವುದು ಅದರ ನಿರ್ವಹಣೆಯಲ್ಲಿ. ಎಲ್ಲವೂ ಭ್ರಷ್ಟ ಅಪ್ರಾಮಾಣಿಕ ವ್ಯವಸ್ಥೆಯಲ್ಲಿ ಇದು ಮತ್ತೊಂದು ಸಂಸ್ಥೆಯಾಗುತ್ತದೆಯೇ ಹೊರತು ನಿಜವಾದ ಅಸಹಾಯಕರಿಗೆ ಸಹಾಯವಾಗುವುದಿಲ್ಲ. ಈಗಾಗಲೇ ಈ ಕೆಲವು ಈ ರೀತಿಯ ವ್ಯವಸ್ಥೆ ಇದೆ.
ಅದು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿಲ್ಲ…..

ನಮಗೆ ನೋವಾದಾಗ ನಾವು ಪ್ರತಿಕ್ರಿಯಿಸುತ್ತೇ‌ವೆ. ಇತರರ ನೋವಿಗೆ ನಾವು ಸ್ಪಂದಿಸದೆ ನಿರ್ಲಕ್ಷಿಸುತ್ತೇವೆ. ಇಡೀ ವ್ಯವಸ್ಥೆಗೆ ಆ ಜಿಡ್ಡುಗಟ್ಟಿದ ಮನಸ್ಥಿತಿ ಇದೆ. ಅದನ್ನು ಆಳುವ ವರ್ಗ ತಮ್ಮ ಲಾಭಕ್ಕಾಗಿ ಉಪಯೋಗಿಸಿಕೊಳ್ಳುತ್ತಿದೆ….

ಆಸ್ಪತ್ರೆಗಳು ಜೈಲಿಗಿಂತ ದೊಡ್ಡ ನರಕದ ಕೂಪಗಳಾಗಿವೆ. ಒಂದೊಂದು ರೋಗಿಯ ಮತ್ತು ಅವರ ಕುಟುಂಬದವರ ಕಥೆ ಕೇಳಿದಾಗಲು ದುಃಖ, ಆಘಾತ ಮತ್ತು ವ್ಯವಸ್ಥೆಯ ಬಗ್ಗೆ ಆಕ್ರೋಶ ಉಂಟಾಗುತ್ತದೆ….

ಆಹಾರ ನೀರು ಗಾಳಿಯ ಮಲಿನತೆಯ ಜೊತೆಗೆ, ಸರ್ಕಾರಗಳು ಮಲಿನವಾಗಿ ಕೊನೆಗೆ ಮನುಷ್ಯರ ದೇಹ ಮನಸ್ಸುಗಳು ಸಹ ಕೆಟ್ಟದಾಗಿ ಹೋಗಿವೆ. ಅದಕ್ಕೆ ಕಳಸವಿಟ್ಟಂತೆ ಈಗ ಸಾಮಾನ್ಯ ವೈದ್ಯಕೀಯ ಸೌಕರ್ಯಗಳಿಗೇ ಕೊರತೆಯಾಗಿದೆ…..

ಈಗಲಾದರು ಎಚ್ಚೆತ್ತುಕೊಂಡು ಭ್ರಷ್ಟಾಚಾರ ರಹಿತ, ಜನಸ್ನೇಹಿ, ಪಾರದರ್ಶಕ ಆಡಳಿತಾತ್ಮಕ ವ್ಯವಸ್ಥೆ ರೂಪಿಸಿಕೊಳ್ಳಬೇಕಿದೆ. ಸಾಮಾನ್ಯ ಜನರಿಗು ಎಲ್ಲಾ ರೀತಿಯ ಮಾಹಿತಿ ಸಿಗುವಂತೆ ಮಾಡಬೇಕಾಗಿದೆ. ಇಲ್ಲದಿದ್ದರೆ ಮುಂದಿನ ದಿನಗಳು ಇನ್ನಷ್ಟು ಕಠಿಣವಾಗಬಹುದು…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

17 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

2 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

3 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

4 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

4 days ago