Categories: ಲೇಖನ

ಅಪರೂಪದ ದುಬಾರಿ ಖಾಯಿಲೆಗಳು…:ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ

ಅಪರೂಪದ ದುಬಾರಿ ಖಾಯಿಲೆಗಳು……….

ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ ಘಾಸಿ ಮಾಡುತ್ತದೆ. ಅದರಲ್ಲಿ ಒಂದು ಅಪರೂಪದ ದುಬಾರಿ ಖಾಯಿಲೆಗಳು…

ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಪತ್ರಿಕೆಗಳಲ್ಲಿ ಈ ರೀತಿಯ ಮನವಿಗಳನ್ನು ನೋಡುತ್ತೇವೆ..

” ನನಗೆ ತುಂಬಾ ಗಂಭೀರ ಮತ್ತು ಅಪರೂಪದ ಖಾಯಿಲೆ ಬಂದಿದೆ. ಅದಕ್ಕೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ ಎಂದು ವೈದ್ಯರು ಹೇಳಿದ್ದಾರೆ. ಅದಕ್ಕೆ ಸುಮಾರು 10/20/30…… ಲಕ್ಷಗಳಷ್ಟು ಹಣ ಬೇಕಾಗಿದೆ. ಒಂದು ಇಂಜೆಕ್ಷನ್ ಬೆಲೆ 50000/100000/200000…..
ನಾವು ಬಡವರು. ನಮ್ಮ ಬಳಿ ಅಷ್ಟು ಹಣವಿಲ್ಲ. ಆದ್ದರಿಂದ ಯಾರಾದರೂ ದಾನಿಗಳು ದಯವಿಟ್ಟು ಕೆಳಕಂಡ ಬ್ಯಾಂಕ್ ಅಕೌಂಟಿಂಗೆ ಹಣ ಸಹಾಯ ಮಾಡಿ ” ಎಂಬ ನಿಜವಾದ ನತದೃಷ್ಟರ ಮನವಿಗಳು ಕರುಳು ಕಿವುಚಿದಂತೆ ಮಾಡುತ್ತದೆ. ( ಸುಳ್ಳು – ವಂಚನೆಗಳನ್ನು ಹೊರತುಪಡಿಸಿ )….

ಇಂತಹ ಪ್ರಕರಣಗಳಲ್ಲಿ ಆರೋಗ್ಯ ವಿಮೆ, ಮುಖ್ಯಮಂತ್ರಿಗಳ ಪರಿಹಾರ ನಿಧಿ ಮುಂತಾದ ಯೋಜನೆಗಳು ಹೆಚ್ಚು ‌ಉಪಯೋಗ ಆಗುವುದಿಲ್ಲ. ಒಂದು ವೇಳೆ ಆಗುವುದಾದರು ಸರ್ಕಾರದ ಸವಲತ್ತುಗಳನ್ನು ಪಡೆಯಲು ತುಂಬಾ ತುಂಬಾ ಶ್ರಮಪಡಬೇಕು ಮತ್ತು ಸಾಕಷ್ಟು ಸಮಯ ಬೇಕಾಗುತ್ತದೆ. ರೋಗಿಯ ಅಥವಾ ಅವರ ಹತ್ತಿರದ ಸಂಬಂಧಿಕರ ಬಳಿ ಅಷ್ಟು ಚೈತನ್ಯವೇ ಉಳಿದಿರುವುದಿಲ್ಲ….

ಗಂಡ ಹೆಂಡತಿ ಅಪ್ಪ ಅಮ್ಮ ಮಗ ಮಗಳು ಯಾರು ಬೇಕಾದರೂ ಈ ಪರಿಸ್ಥಿತಿಯಲ್ಲಿ ಇರಬಹುದು. ಸಾವಿನ ನಿರೀಕ್ಷೆಯ ಆ ಮನೆಯ ವಾತಾವರಣ ಕಲ್ಪಿಸಿಕೊಳ್ಳುವುದರಿಂದ ನಮ್ಮ ನೋವಿನ ಪ್ರಮಾಣ ಹೆಚ್ಚಾಗುತ್ತದೆ….

ರೋಗಿಯ ಸಂಕಟ, ಅವಲಂಬಿತರ ನರಳಾಟ, ಪ್ರೀತಿ ಪಾತ್ರರ ಗೋಳಾಟ, ವಿಧಿಯ ಅಸಹಾಯಕತೆ ಎಲ್ಲವೂ ನರಕಯಾತನೆ. ಇಂತಹ ಬಹುತೇಕ ಘಟನೆಗಳಲ್ಲಿ ರೋಗಿಯೂ ಉಳಿಯುವ ಸಾಧ್ಯತೆ ಕಡಿಮೆ. ಹಣವೂ ಖರ್ಚು. ಉಳಿದರು ಎಂದಿನ ಬದುಕು ಸಾಧ್ಯವಿಲ್ಲ…..

ರೋಗ ಬಂದಿರುವುದು ಒಬ್ಬರಿಗೆ. ಆದರೆ ನರಳುವುದು ಮಾತ್ರ ಇಡೀ ಕುಟುಂಬ. ಹಾಗೆಂದು ರೋಗಿಯನ್ನು ನಿರ್ಲಕ್ಷಿಸುವುದು ಸಾಧ್ಯವಿಲ್ಲ ಮತ್ತು ಅದು ಅಮಾನವೀಯ. ಬಹುಶಃ ಇದಕ್ಕೊಂದು ಕ್ರಮಬದ್ಧ ಯೋಜನೆ ಸರ್ಕಾರ ರೂಪಿಸಬೇಕಿದೆ….

ಯಾವುದೇ ವ್ಯಕ್ತಿ ಹಣದ ಕಾರಣದಿಂದ ವೈದ್ಯಕೀಯ ಚಿಕಿತ್ಸೆ ಪಡೆಯದೆ ಸಾಯಲು ಸಮಾಜ ಮತ್ತು ಸರ್ಕಾರ ಬಿಡಬಾರದು. ಅದು ಎಷ್ಟೇ ವೆಚ್ಚದ್ದಾಗಿದ್ದರು ವ್ಯಕ್ತಿಗಳಿಗೆ ಸಿಗಬೇಕು. ಅವಕಾಶ ಇದ್ದರೂ ಮನುಷ್ಯರ ಜೀವ ಉಳಿಸಲಾಗದ ಸರ್ಕಾರ ಮತ್ತು ಆಡಳಿತ ವ್ಯವಸ್ಥೆ ಬೇಜವಾಬ್ದಾರಿಯಿಂದ ನಡೆದುಕೊಳ್ಳಬಾರದು….

ಇದಕ್ಕಾಗಿ ಒಂದು ಕ್ರಿಯಾ ಯೋಜನೆ ರೂಪಿಸಬಹುದು. ಯಾವುದಾದರೂ ಸಣ್ಣ ಪ್ರಮಾಣದ ತೆರಿಗೆ ಮತ್ತು ದಾನಿಗಳ ಸಹಾಯದಿಂದ ಒಂದು ಶಾಶ್ವತ ನಿಧಿ ಸ್ಥಾಪಿಸಬಹುದು. ಅಪರೂಪದ ಖಾಯಿಲೆಗಳಿಗೆ ವೈದ್ಯಕೀಯ ವಿನಾಯಿತಿ ಘೋಷಿಸಬಹುದು. ಖಾಯಿಲೆಗಳ ವಿಷಯದಲ್ಲಿ ಮನುಷ್ಯ ಸುಳ್ಳು ಹೇಳುವುದು ಆಗುವುದಿಲ್ಲ. ಆದ್ದರಿಂದ ಇದರಲ್ಲಿ ಹೆಚ್ಚು ಪಾರದರ್ಶಕತೆ ಕಾಪಾಡಬಹುದು…..

ಆದರೆ ಸಮಸ್ಯೆ ಇರುವುದು ಅದರ ನಿರ್ವಹಣೆಯಲ್ಲಿ. ಎಲ್ಲವೂ ಭ್ರಷ್ಟ ಅಪ್ರಾಮಾಣಿಕ ವ್ಯವಸ್ಥೆಯಲ್ಲಿ ಇದು ಮತ್ತೊಂದು ಸಂಸ್ಥೆಯಾಗುತ್ತದೆಯೇ ಹೊರತು ನಿಜವಾದ ಅಸಹಾಯಕರಿಗೆ ಸಹಾಯವಾಗುವುದಿಲ್ಲ. ಈಗಾಗಲೇ ಈ ಕೆಲವು ಈ ರೀತಿಯ ವ್ಯವಸ್ಥೆ ಇದೆ.
ಅದು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿಲ್ಲ…..

ನಮಗೆ ನೋವಾದಾಗ ನಾವು ಪ್ರತಿಕ್ರಿಯಿಸುತ್ತೇ‌ವೆ. ಇತರರ ನೋವಿಗೆ ನಾವು ಸ್ಪಂದಿಸದೆ ನಿರ್ಲಕ್ಷಿಸುತ್ತೇವೆ. ಇಡೀ ವ್ಯವಸ್ಥೆಗೆ ಆ ಜಿಡ್ಡುಗಟ್ಟಿದ ಮನಸ್ಥಿತಿ ಇದೆ. ಅದನ್ನು ಆಳುವ ವರ್ಗ ತಮ್ಮ ಲಾಭಕ್ಕಾಗಿ ಉಪಯೋಗಿಸಿಕೊಳ್ಳುತ್ತಿದೆ….

ಆಸ್ಪತ್ರೆಗಳು ಜೈಲಿಗಿಂತ ದೊಡ್ಡ ನರಕದ ಕೂಪಗಳಾಗಿವೆ. ಒಂದೊಂದು ರೋಗಿಯ ಮತ್ತು ಅವರ ಕುಟುಂಬದವರ ಕಥೆ ಕೇಳಿದಾಗಲು ದುಃಖ, ಆಘಾತ ಮತ್ತು ವ್ಯವಸ್ಥೆಯ ಬಗ್ಗೆ ಆಕ್ರೋಶ ಉಂಟಾಗುತ್ತದೆ….

ಆಹಾರ ನೀರು ಗಾಳಿಯ ಮಲಿನತೆಯ ಜೊತೆಗೆ, ಸರ್ಕಾರಗಳು ಮಲಿನವಾಗಿ ಕೊನೆಗೆ ಮನುಷ್ಯರ ದೇಹ ಮನಸ್ಸುಗಳು ಸಹ ಕೆಟ್ಟದಾಗಿ ಹೋಗಿವೆ. ಅದಕ್ಕೆ ಕಳಸವಿಟ್ಟಂತೆ ಈಗ ಸಾಮಾನ್ಯ ವೈದ್ಯಕೀಯ ಸೌಕರ್ಯಗಳಿಗೇ ಕೊರತೆಯಾಗಿದೆ…..

ಈಗಲಾದರು ಎಚ್ಚೆತ್ತುಕೊಂಡು ಭ್ರಷ್ಟಾಚಾರ ರಹಿತ, ಜನಸ್ನೇಹಿ, ಪಾರದರ್ಶಕ ಆಡಳಿತಾತ್ಮಕ ವ್ಯವಸ್ಥೆ ರೂಪಿಸಿಕೊಳ್ಳಬೇಕಿದೆ. ಸಾಮಾನ್ಯ ಜನರಿಗು ಎಲ್ಲಾ ರೀತಿಯ ಮಾಹಿತಿ ಸಿಗುವಂತೆ ಮಾಡಬೇಕಾಗಿದೆ. ಇಲ್ಲದಿದ್ದರೆ ಮುಂದಿನ ದಿನಗಳು ಇನ್ನಷ್ಟು ಕಠಿಣವಾಗಬಹುದು…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

6 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago