Categories: Home

ಅಪರೂಪದ ಪಾದದ ವಿರೂಪತೆ ಹೊಂದಿದ್ದ ಸೌದಿ ಅರೇಬಿಯಾದ 52 ವರ್ಷದ ಮಹಿಳೆಯರಿಗೆ ಫೋರ್ಟಿಸ್ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ

ಬೆಂಗಳೂರು: ಚಾರ್ಕೋಟ್ಸ್ ಪಾದ (ಪಾದದ ವಿರೂಪತೆ)ದಿಂದ ಬಳಲುತ್ತಿರುವ ಸೌದಿ ಅರೇಬಿಯಾದ 52 ವರ್ಷದ ಮಹಿಳೆಗೆ ಫೋರ್ಟಿಸ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಯಿತು .

ಚಾರ್ಕೋಟ್‌ ಪಾದ ಎಂದರೆ, ನರಗಳಿಗೆ ಹಾನಿಯುಂಟು ಮಾಡುವ ಅಪರೂಪದ ಸ್ಥಿತಿಯಿಂದ ಪಾದದ ಮೂಳೆಗಳು ಮತ್ತು ಕೀಲುಗಳನ್ನು ದುರ್ಬಲಗೊಳಿಸಿ, ಪಾದವನ್ನು ವಿರೂಪಗೊಳಿಸುತ್ತದೆ. ಫೋರ್ಟಿಸ್ ಆಸ್ಪತ್ರೆಯ ಆರ್ಥೋಪೆಡಿಕ್ ಸರ್ಜನ್ ಡಾ. ಮೋಹನ್ ಪುಟ್ಟಸ್ವಾಮಿ ಅವರ ಪರಿಣಿತ ಆರೈಕೆಯಲ್ಲಿ, ರೋಗಿಯು ಇಲಿಜಾರೋವ್ ಎಂಬ ಉಪಕರಣದ ಸಹಾಯದಿಂದ ಚಿಕಿತ್ಸೆ ನೀಡಲಾಯಿತು. ಈ ಪ್ರಕ್ರಿಯೆಯು ಅವರ ಪಾದವನ್ನು ಸ್ಥಿರಗೊಳಿಸಿ, ಚಲನಶೀಲತೆಯನ್ನು ಪುನಃಸ್ಥಾಪಿಸಲು ಸಹಾಯ ಮಾಡಿತು. ಈ ಶಸ್ತ್ರಚಿಕಿತ್ಸೆಯು ಸುಮಾರು 8 ಗಂಟೆಗಳ ಕಾಲ ನಡೆಯಿತು, ರೋಗಿಯನ್ನು 7 ದಿನಗಳ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.
ರೀಟಾ (ಹೆಸರು ಬದಲಾಯಿಸಲಾಗಿದೆ) ಎಂಬ ರೋಗಿಯು ಸುಮಾರು ಒಂಬತ್ತು ವರ್ಷಗಳ ಕಾಲ ತನ್ನ ಎಡ ಪಾದದ ದೀರ್ಘಕಾಲದ ನೋವು, ಊತ ಮತ್ತು ವಿರೂಪತೆಯಿಂದ ಬಳಲುತ್ತಿದ್ದರು. ಈ ಸ್ಥಿತಿಯು ಆಕೆಯ ಚಲನಶೀಲತೆಯ ಮೇಲೆ ತೀವ್ರ ಪರಿಣಾಮ ಬೀರಿತ್ತು, ಇದರಿಂದ ಅವರು ಕುಂಟುತ್ತಾ ನಡೆಯಬೇಕಿತ್ತು. ಕಾಲಕ್ರಮೇಣ ಈ ಆರೋಗ್ಯ ಸ್ಥಿತಿ ಇನ್ನಷ್ಟು ಜಟಿಲಗೊಂಡ ಕಾರಣ ಅವರು ನಡೆಯಲು ಸಹ ಸಾಧ್ಯವಾಗದೇ, ಅವರ ಕಾಲನ್ನೇ ಕಳೆದುಕೊಳ್ಳುವ ಸ್ಥಿತಿಗೆ ತೆರಳಿದರು. ಕೂಡಲೇ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಈ ಆರೋಗ್ಯ ಸಮಸ್ಯೆ ಜೊತೆಗೆ ಅವರು ದೀರ್ಘಕಾಲದ ಮೂತ್ರಪಿಂಡ ಕಾಯಿಲೆ (CKD) ಯಿಂದಲೂ ಬಳಲುತ್ತಿರುವುದು ಸಂಪೂರ್ಣ ತಪಾಸಣೆಯಿಂದ ತಿಳಿದುಬಂತು.

ಡಾ. ಪುಟ್ಟಸ್ವಾಮಿ ಅವರ ನೃತೃತ್ವದಲ್ಲಿ ಇಲಿಜರೋವ್ ಎಂಬ ಉಪಕರಣದ (ಮುರಿದ ಮೂಳೆ, ವಿರೂಪತೆ ಮತ್ತು ಇತರ ಪರಿಸ್ಥಿತಿಗಳಿಗೆ ಚಿಕಿತ್ಸೆ ನೀಡಲು ಬಳಸುವ ಉಂಗುರದ ಆಕಾರದ ಬ್ರೇಸ್ ಉಪಕರಣ) ಸಹಾಯದಿಂದ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಈ ಶಸ್ತ್ರಚಿಕಿತ್ಸೆಯಿಂದ ಭವಿಷ್ಯದಲ್ಲಿ ಅವರ ಕಾಲನ್ನು ಕಳೆದುಕೊಳ್ಳುವ ಅಪಾಯವೂ ತಪ್ಪಲಿದೆ.
ಈ ಕುರಿತು ಮಾತನಾಡಿದ ಡಾ. ಮೋಹನ್‌ ಪುಟ್ಟಸ್ವಾಮಿ, ರೀಟಾ ಅವರ ಸಂಕೀರ್ಣ ಪ್ರಕರಣವು ದೀರ್ಘಕಾಲದ ಪಾದದ ವಿರೂಪತೆಯ ಜೊತೆಗೆ CKD ​​ಸೋಂಕು ಅವರನ್ನು ಹೆಚ್ಚು ಬಾಧಿಸುತ್ತಿತ್ತು. ಕೂಡಲೇ ಅವರಿಗೆ ಮೂತ್ರಪಿಂಡದ ಕಾಯಿಲೆಗೆ ಸೂಕ್ತ ಚಿಕಿತ್ಸೆ ಒದಗಿಸಿದ ಬಳಿಕ ಅವರ ಕಾಲಿನ ಸಮಸ್ಯೆಗೆ ಶಸ್ತ್ರಚಿಕಿತ್ಸೆ ನೀಡಿದೆವು. ಈ ರೀತಿಯ ಪ್ರಕರಣವು ಪ್ರತಿ ವರ್ಷ 10 ಸಾವಿರ ವ್ಯಕ್ತಿಗಳಲ್ಲಿ 7 ಜನರಲ್ಲಿ ಕಂಡು ಬರಲಿದೆ. ಇಂತಹ ಆರೋಗ್ಯ ಸಮಸ್ಯೆಯನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು. ಇದರಿಂದ ಕಾಲನ್ನೇ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚು. ಪ್ರಸ್ತುತ ರೋಗಿಯು ಸಂಪೂರ್ಣವಾಗಿ ಗುಣವಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದರು.

Ramesh Babu

Journalist

Recent Posts

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

1 hour ago

ಬಾಗಲಕೋಟೆಯಲ್ಲಿ ಕಲ್ಲುತೂರಾಟ ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…

1 hour ago

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

8 hours ago

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

18 hours ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

19 hours ago

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

1 day ago