Categories: Home

ಅಪರೂಪದ ಪಾದದ ವಿರೂಪತೆ ಹೊಂದಿದ್ದ ಸೌದಿ ಅರೇಬಿಯಾದ 52 ವರ್ಷದ ಮಹಿಳೆಯರಿಗೆ ಫೋರ್ಟಿಸ್ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ

ಬೆಂಗಳೂರು: ಚಾರ್ಕೋಟ್ಸ್ ಪಾದ (ಪಾದದ ವಿರೂಪತೆ)ದಿಂದ ಬಳಲುತ್ತಿರುವ ಸೌದಿ ಅರೇಬಿಯಾದ 52 ವರ್ಷದ ಮಹಿಳೆಗೆ ಫೋರ್ಟಿಸ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಯಿತು .

ಚಾರ್ಕೋಟ್‌ ಪಾದ ಎಂದರೆ, ನರಗಳಿಗೆ ಹಾನಿಯುಂಟು ಮಾಡುವ ಅಪರೂಪದ ಸ್ಥಿತಿಯಿಂದ ಪಾದದ ಮೂಳೆಗಳು ಮತ್ತು ಕೀಲುಗಳನ್ನು ದುರ್ಬಲಗೊಳಿಸಿ, ಪಾದವನ್ನು ವಿರೂಪಗೊಳಿಸುತ್ತದೆ. ಫೋರ್ಟಿಸ್ ಆಸ್ಪತ್ರೆಯ ಆರ್ಥೋಪೆಡಿಕ್ ಸರ್ಜನ್ ಡಾ. ಮೋಹನ್ ಪುಟ್ಟಸ್ವಾಮಿ ಅವರ ಪರಿಣಿತ ಆರೈಕೆಯಲ್ಲಿ, ರೋಗಿಯು ಇಲಿಜಾರೋವ್ ಎಂಬ ಉಪಕರಣದ ಸಹಾಯದಿಂದ ಚಿಕಿತ್ಸೆ ನೀಡಲಾಯಿತು. ಈ ಪ್ರಕ್ರಿಯೆಯು ಅವರ ಪಾದವನ್ನು ಸ್ಥಿರಗೊಳಿಸಿ, ಚಲನಶೀಲತೆಯನ್ನು ಪುನಃಸ್ಥಾಪಿಸಲು ಸಹಾಯ ಮಾಡಿತು. ಈ ಶಸ್ತ್ರಚಿಕಿತ್ಸೆಯು ಸುಮಾರು 8 ಗಂಟೆಗಳ ಕಾಲ ನಡೆಯಿತು, ರೋಗಿಯನ್ನು 7 ದಿನಗಳ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.
ರೀಟಾ (ಹೆಸರು ಬದಲಾಯಿಸಲಾಗಿದೆ) ಎಂಬ ರೋಗಿಯು ಸುಮಾರು ಒಂಬತ್ತು ವರ್ಷಗಳ ಕಾಲ ತನ್ನ ಎಡ ಪಾದದ ದೀರ್ಘಕಾಲದ ನೋವು, ಊತ ಮತ್ತು ವಿರೂಪತೆಯಿಂದ ಬಳಲುತ್ತಿದ್ದರು. ಈ ಸ್ಥಿತಿಯು ಆಕೆಯ ಚಲನಶೀಲತೆಯ ಮೇಲೆ ತೀವ್ರ ಪರಿಣಾಮ ಬೀರಿತ್ತು, ಇದರಿಂದ ಅವರು ಕುಂಟುತ್ತಾ ನಡೆಯಬೇಕಿತ್ತು. ಕಾಲಕ್ರಮೇಣ ಈ ಆರೋಗ್ಯ ಸ್ಥಿತಿ ಇನ್ನಷ್ಟು ಜಟಿಲಗೊಂಡ ಕಾರಣ ಅವರು ನಡೆಯಲು ಸಹ ಸಾಧ್ಯವಾಗದೇ, ಅವರ ಕಾಲನ್ನೇ ಕಳೆದುಕೊಳ್ಳುವ ಸ್ಥಿತಿಗೆ ತೆರಳಿದರು. ಕೂಡಲೇ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಈ ಆರೋಗ್ಯ ಸಮಸ್ಯೆ ಜೊತೆಗೆ ಅವರು ದೀರ್ಘಕಾಲದ ಮೂತ್ರಪಿಂಡ ಕಾಯಿಲೆ (CKD) ಯಿಂದಲೂ ಬಳಲುತ್ತಿರುವುದು ಸಂಪೂರ್ಣ ತಪಾಸಣೆಯಿಂದ ತಿಳಿದುಬಂತು.

ಡಾ. ಪುಟ್ಟಸ್ವಾಮಿ ಅವರ ನೃತೃತ್ವದಲ್ಲಿ ಇಲಿಜರೋವ್ ಎಂಬ ಉಪಕರಣದ (ಮುರಿದ ಮೂಳೆ, ವಿರೂಪತೆ ಮತ್ತು ಇತರ ಪರಿಸ್ಥಿತಿಗಳಿಗೆ ಚಿಕಿತ್ಸೆ ನೀಡಲು ಬಳಸುವ ಉಂಗುರದ ಆಕಾರದ ಬ್ರೇಸ್ ಉಪಕರಣ) ಸಹಾಯದಿಂದ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಈ ಶಸ್ತ್ರಚಿಕಿತ್ಸೆಯಿಂದ ಭವಿಷ್ಯದಲ್ಲಿ ಅವರ ಕಾಲನ್ನು ಕಳೆದುಕೊಳ್ಳುವ ಅಪಾಯವೂ ತಪ್ಪಲಿದೆ.
ಈ ಕುರಿತು ಮಾತನಾಡಿದ ಡಾ. ಮೋಹನ್‌ ಪುಟ್ಟಸ್ವಾಮಿ, ರೀಟಾ ಅವರ ಸಂಕೀರ್ಣ ಪ್ರಕರಣವು ದೀರ್ಘಕಾಲದ ಪಾದದ ವಿರೂಪತೆಯ ಜೊತೆಗೆ CKD ​​ಸೋಂಕು ಅವರನ್ನು ಹೆಚ್ಚು ಬಾಧಿಸುತ್ತಿತ್ತು. ಕೂಡಲೇ ಅವರಿಗೆ ಮೂತ್ರಪಿಂಡದ ಕಾಯಿಲೆಗೆ ಸೂಕ್ತ ಚಿಕಿತ್ಸೆ ಒದಗಿಸಿದ ಬಳಿಕ ಅವರ ಕಾಲಿನ ಸಮಸ್ಯೆಗೆ ಶಸ್ತ್ರಚಿಕಿತ್ಸೆ ನೀಡಿದೆವು. ಈ ರೀತಿಯ ಪ್ರಕರಣವು ಪ್ರತಿ ವರ್ಷ 10 ಸಾವಿರ ವ್ಯಕ್ತಿಗಳಲ್ಲಿ 7 ಜನರಲ್ಲಿ ಕಂಡು ಬರಲಿದೆ. ಇಂತಹ ಆರೋಗ್ಯ ಸಮಸ್ಯೆಯನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು. ಇದರಿಂದ ಕಾಲನ್ನೇ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚು. ಪ್ರಸ್ತುತ ರೋಗಿಯು ಸಂಪೂರ್ಣವಾಗಿ ಗುಣವಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

17 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

21 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago