Categories: Home

ಅಪರೂಪದ ಪಾದದ ವಿರೂಪತೆ ಹೊಂದಿದ್ದ ಸೌದಿ ಅರೇಬಿಯಾದ 52 ವರ್ಷದ ಮಹಿಳೆಯರಿಗೆ ಫೋರ್ಟಿಸ್ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ

ಬೆಂಗಳೂರು: ಚಾರ್ಕೋಟ್ಸ್ ಪಾದ (ಪಾದದ ವಿರೂಪತೆ)ದಿಂದ ಬಳಲುತ್ತಿರುವ ಸೌದಿ ಅರೇಬಿಯಾದ 52 ವರ್ಷದ ಮಹಿಳೆಗೆ ಫೋರ್ಟಿಸ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಯಿತು .

ಚಾರ್ಕೋಟ್‌ ಪಾದ ಎಂದರೆ, ನರಗಳಿಗೆ ಹಾನಿಯುಂಟು ಮಾಡುವ ಅಪರೂಪದ ಸ್ಥಿತಿಯಿಂದ ಪಾದದ ಮೂಳೆಗಳು ಮತ್ತು ಕೀಲುಗಳನ್ನು ದುರ್ಬಲಗೊಳಿಸಿ, ಪಾದವನ್ನು ವಿರೂಪಗೊಳಿಸುತ್ತದೆ. ಫೋರ್ಟಿಸ್ ಆಸ್ಪತ್ರೆಯ ಆರ್ಥೋಪೆಡಿಕ್ ಸರ್ಜನ್ ಡಾ. ಮೋಹನ್ ಪುಟ್ಟಸ್ವಾಮಿ ಅವರ ಪರಿಣಿತ ಆರೈಕೆಯಲ್ಲಿ, ರೋಗಿಯು ಇಲಿಜಾರೋವ್ ಎಂಬ ಉಪಕರಣದ ಸಹಾಯದಿಂದ ಚಿಕಿತ್ಸೆ ನೀಡಲಾಯಿತು. ಈ ಪ್ರಕ್ರಿಯೆಯು ಅವರ ಪಾದವನ್ನು ಸ್ಥಿರಗೊಳಿಸಿ, ಚಲನಶೀಲತೆಯನ್ನು ಪುನಃಸ್ಥಾಪಿಸಲು ಸಹಾಯ ಮಾಡಿತು. ಈ ಶಸ್ತ್ರಚಿಕಿತ್ಸೆಯು ಸುಮಾರು 8 ಗಂಟೆಗಳ ಕಾಲ ನಡೆಯಿತು, ರೋಗಿಯನ್ನು 7 ದಿನಗಳ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.
ರೀಟಾ (ಹೆಸರು ಬದಲಾಯಿಸಲಾಗಿದೆ) ಎಂಬ ರೋಗಿಯು ಸುಮಾರು ಒಂಬತ್ತು ವರ್ಷಗಳ ಕಾಲ ತನ್ನ ಎಡ ಪಾದದ ದೀರ್ಘಕಾಲದ ನೋವು, ಊತ ಮತ್ತು ವಿರೂಪತೆಯಿಂದ ಬಳಲುತ್ತಿದ್ದರು. ಈ ಸ್ಥಿತಿಯು ಆಕೆಯ ಚಲನಶೀಲತೆಯ ಮೇಲೆ ತೀವ್ರ ಪರಿಣಾಮ ಬೀರಿತ್ತು, ಇದರಿಂದ ಅವರು ಕುಂಟುತ್ತಾ ನಡೆಯಬೇಕಿತ್ತು. ಕಾಲಕ್ರಮೇಣ ಈ ಆರೋಗ್ಯ ಸ್ಥಿತಿ ಇನ್ನಷ್ಟು ಜಟಿಲಗೊಂಡ ಕಾರಣ ಅವರು ನಡೆಯಲು ಸಹ ಸಾಧ್ಯವಾಗದೇ, ಅವರ ಕಾಲನ್ನೇ ಕಳೆದುಕೊಳ್ಳುವ ಸ್ಥಿತಿಗೆ ತೆರಳಿದರು. ಕೂಡಲೇ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಈ ಆರೋಗ್ಯ ಸಮಸ್ಯೆ ಜೊತೆಗೆ ಅವರು ದೀರ್ಘಕಾಲದ ಮೂತ್ರಪಿಂಡ ಕಾಯಿಲೆ (CKD) ಯಿಂದಲೂ ಬಳಲುತ್ತಿರುವುದು ಸಂಪೂರ್ಣ ತಪಾಸಣೆಯಿಂದ ತಿಳಿದುಬಂತು.

ಡಾ. ಪುಟ್ಟಸ್ವಾಮಿ ಅವರ ನೃತೃತ್ವದಲ್ಲಿ ಇಲಿಜರೋವ್ ಎಂಬ ಉಪಕರಣದ (ಮುರಿದ ಮೂಳೆ, ವಿರೂಪತೆ ಮತ್ತು ಇತರ ಪರಿಸ್ಥಿತಿಗಳಿಗೆ ಚಿಕಿತ್ಸೆ ನೀಡಲು ಬಳಸುವ ಉಂಗುರದ ಆಕಾರದ ಬ್ರೇಸ್ ಉಪಕರಣ) ಸಹಾಯದಿಂದ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಈ ಶಸ್ತ್ರಚಿಕಿತ್ಸೆಯಿಂದ ಭವಿಷ್ಯದಲ್ಲಿ ಅವರ ಕಾಲನ್ನು ಕಳೆದುಕೊಳ್ಳುವ ಅಪಾಯವೂ ತಪ್ಪಲಿದೆ.
ಈ ಕುರಿತು ಮಾತನಾಡಿದ ಡಾ. ಮೋಹನ್‌ ಪುಟ್ಟಸ್ವಾಮಿ, ರೀಟಾ ಅವರ ಸಂಕೀರ್ಣ ಪ್ರಕರಣವು ದೀರ್ಘಕಾಲದ ಪಾದದ ವಿರೂಪತೆಯ ಜೊತೆಗೆ CKD ​​ಸೋಂಕು ಅವರನ್ನು ಹೆಚ್ಚು ಬಾಧಿಸುತ್ತಿತ್ತು. ಕೂಡಲೇ ಅವರಿಗೆ ಮೂತ್ರಪಿಂಡದ ಕಾಯಿಲೆಗೆ ಸೂಕ್ತ ಚಿಕಿತ್ಸೆ ಒದಗಿಸಿದ ಬಳಿಕ ಅವರ ಕಾಲಿನ ಸಮಸ್ಯೆಗೆ ಶಸ್ತ್ರಚಿಕಿತ್ಸೆ ನೀಡಿದೆವು. ಈ ರೀತಿಯ ಪ್ರಕರಣವು ಪ್ರತಿ ವರ್ಷ 10 ಸಾವಿರ ವ್ಯಕ್ತಿಗಳಲ್ಲಿ 7 ಜನರಲ್ಲಿ ಕಂಡು ಬರಲಿದೆ. ಇಂತಹ ಆರೋಗ್ಯ ಸಮಸ್ಯೆಯನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು. ಇದರಿಂದ ಕಾಲನ್ನೇ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚು. ಪ್ರಸ್ತುತ ರೋಗಿಯು ಸಂಪೂರ್ಣವಾಗಿ ಗುಣವಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದರು.

Ramesh Babu

Journalist

Recent Posts

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

2 hours ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

12 hours ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

23 hours ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

1 day ago

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

2 days ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

2 days ago