Categories: Home

ಅಪರೂಪದ ಪಾದದ ವಿರೂಪತೆ ಹೊಂದಿದ್ದ ಸೌದಿ ಅರೇಬಿಯಾದ 52 ವರ್ಷದ ಮಹಿಳೆಯರಿಗೆ ಫೋರ್ಟಿಸ್ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ

ಬೆಂಗಳೂರು: ಚಾರ್ಕೋಟ್ಸ್ ಪಾದ (ಪಾದದ ವಿರೂಪತೆ)ದಿಂದ ಬಳಲುತ್ತಿರುವ ಸೌದಿ ಅರೇಬಿಯಾದ 52 ವರ್ಷದ ಮಹಿಳೆಗೆ ಫೋರ್ಟಿಸ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಯಿತು .

ಚಾರ್ಕೋಟ್‌ ಪಾದ ಎಂದರೆ, ನರಗಳಿಗೆ ಹಾನಿಯುಂಟು ಮಾಡುವ ಅಪರೂಪದ ಸ್ಥಿತಿಯಿಂದ ಪಾದದ ಮೂಳೆಗಳು ಮತ್ತು ಕೀಲುಗಳನ್ನು ದುರ್ಬಲಗೊಳಿಸಿ, ಪಾದವನ್ನು ವಿರೂಪಗೊಳಿಸುತ್ತದೆ. ಫೋರ್ಟಿಸ್ ಆಸ್ಪತ್ರೆಯ ಆರ್ಥೋಪೆಡಿಕ್ ಸರ್ಜನ್ ಡಾ. ಮೋಹನ್ ಪುಟ್ಟಸ್ವಾಮಿ ಅವರ ಪರಿಣಿತ ಆರೈಕೆಯಲ್ಲಿ, ರೋಗಿಯು ಇಲಿಜಾರೋವ್ ಎಂಬ ಉಪಕರಣದ ಸಹಾಯದಿಂದ ಚಿಕಿತ್ಸೆ ನೀಡಲಾಯಿತು. ಈ ಪ್ರಕ್ರಿಯೆಯು ಅವರ ಪಾದವನ್ನು ಸ್ಥಿರಗೊಳಿಸಿ, ಚಲನಶೀಲತೆಯನ್ನು ಪುನಃಸ್ಥಾಪಿಸಲು ಸಹಾಯ ಮಾಡಿತು. ಈ ಶಸ್ತ್ರಚಿಕಿತ್ಸೆಯು ಸುಮಾರು 8 ಗಂಟೆಗಳ ಕಾಲ ನಡೆಯಿತು, ರೋಗಿಯನ್ನು 7 ದಿನಗಳ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.
ರೀಟಾ (ಹೆಸರು ಬದಲಾಯಿಸಲಾಗಿದೆ) ಎಂಬ ರೋಗಿಯು ಸುಮಾರು ಒಂಬತ್ತು ವರ್ಷಗಳ ಕಾಲ ತನ್ನ ಎಡ ಪಾದದ ದೀರ್ಘಕಾಲದ ನೋವು, ಊತ ಮತ್ತು ವಿರೂಪತೆಯಿಂದ ಬಳಲುತ್ತಿದ್ದರು. ಈ ಸ್ಥಿತಿಯು ಆಕೆಯ ಚಲನಶೀಲತೆಯ ಮೇಲೆ ತೀವ್ರ ಪರಿಣಾಮ ಬೀರಿತ್ತು, ಇದರಿಂದ ಅವರು ಕುಂಟುತ್ತಾ ನಡೆಯಬೇಕಿತ್ತು. ಕಾಲಕ್ರಮೇಣ ಈ ಆರೋಗ್ಯ ಸ್ಥಿತಿ ಇನ್ನಷ್ಟು ಜಟಿಲಗೊಂಡ ಕಾರಣ ಅವರು ನಡೆಯಲು ಸಹ ಸಾಧ್ಯವಾಗದೇ, ಅವರ ಕಾಲನ್ನೇ ಕಳೆದುಕೊಳ್ಳುವ ಸ್ಥಿತಿಗೆ ತೆರಳಿದರು. ಕೂಡಲೇ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಈ ಆರೋಗ್ಯ ಸಮಸ್ಯೆ ಜೊತೆಗೆ ಅವರು ದೀರ್ಘಕಾಲದ ಮೂತ್ರಪಿಂಡ ಕಾಯಿಲೆ (CKD) ಯಿಂದಲೂ ಬಳಲುತ್ತಿರುವುದು ಸಂಪೂರ್ಣ ತಪಾಸಣೆಯಿಂದ ತಿಳಿದುಬಂತು.

ಡಾ. ಪುಟ್ಟಸ್ವಾಮಿ ಅವರ ನೃತೃತ್ವದಲ್ಲಿ ಇಲಿಜರೋವ್ ಎಂಬ ಉಪಕರಣದ (ಮುರಿದ ಮೂಳೆ, ವಿರೂಪತೆ ಮತ್ತು ಇತರ ಪರಿಸ್ಥಿತಿಗಳಿಗೆ ಚಿಕಿತ್ಸೆ ನೀಡಲು ಬಳಸುವ ಉಂಗುರದ ಆಕಾರದ ಬ್ರೇಸ್ ಉಪಕರಣ) ಸಹಾಯದಿಂದ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಈ ಶಸ್ತ್ರಚಿಕಿತ್ಸೆಯಿಂದ ಭವಿಷ್ಯದಲ್ಲಿ ಅವರ ಕಾಲನ್ನು ಕಳೆದುಕೊಳ್ಳುವ ಅಪಾಯವೂ ತಪ್ಪಲಿದೆ.
ಈ ಕುರಿತು ಮಾತನಾಡಿದ ಡಾ. ಮೋಹನ್‌ ಪುಟ್ಟಸ್ವಾಮಿ, ರೀಟಾ ಅವರ ಸಂಕೀರ್ಣ ಪ್ರಕರಣವು ದೀರ್ಘಕಾಲದ ಪಾದದ ವಿರೂಪತೆಯ ಜೊತೆಗೆ CKD ​​ಸೋಂಕು ಅವರನ್ನು ಹೆಚ್ಚು ಬಾಧಿಸುತ್ತಿತ್ತು. ಕೂಡಲೇ ಅವರಿಗೆ ಮೂತ್ರಪಿಂಡದ ಕಾಯಿಲೆಗೆ ಸೂಕ್ತ ಚಿಕಿತ್ಸೆ ಒದಗಿಸಿದ ಬಳಿಕ ಅವರ ಕಾಲಿನ ಸಮಸ್ಯೆಗೆ ಶಸ್ತ್ರಚಿಕಿತ್ಸೆ ನೀಡಿದೆವು. ಈ ರೀತಿಯ ಪ್ರಕರಣವು ಪ್ರತಿ ವರ್ಷ 10 ಸಾವಿರ ವ್ಯಕ್ತಿಗಳಲ್ಲಿ 7 ಜನರಲ್ಲಿ ಕಂಡು ಬರಲಿದೆ. ಇಂತಹ ಆರೋಗ್ಯ ಸಮಸ್ಯೆಯನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು. ಇದರಿಂದ ಕಾಲನ್ನೇ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚು. ಪ್ರಸ್ತುತ ರೋಗಿಯು ಸಂಪೂರ್ಣವಾಗಿ ಗುಣವಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

22 hours ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

2 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago