ಅಪಾರ ಮೌಲ್ಯದ ಎಚ್ ಎಫ್ ಸೀಮೆ ಹಸು ಹಾಗೂ ಜರ್ಸಿ ಹಸುಗಳನ್ನು ಕದ್ದೊಯ್ದ ಕಳ್ಳರು: ಸಂಕಷ್ಟದಲ್ಲಿ ರೈತ

ಮನೆ ಪಕ್ಕದ ಶೆಡ್ ನಲ್ಲಿ ಬಿಟ್ಟಿದ್ದ ಅಪಾರ ಮೌಲ್ಯದ ಎಚ್ ಎಫ್ ಸೀಮೆ ಹಸು ಹಾಗೂ ಜರ್ಸಿ ಹಸುಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.

ಈ ಘಟನೆ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದಲ್ಲಿ ಸೆ.14ರ ರಾತ್ರಿ ನಡೆದಿದೆ. ಈ ಕುರಿತು ಅ.04ರಂದು ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ನಾನು ಹೈನುಗಾರಿಕೆ ಮತ್ತು ವ್ಯವಸಾಯ ಮಾಡಿಕೊಂಡು ಜೀವನ ಮಾಡುತ್ತಿರುತ್ತೇನೆ. ನಾನು ಜೀವನೋಪಾಯಕ್ಕಾಗಿ ಒಂದು HF ಸೀಮೆ ಹಸು ಮತ್ತು ಜರ್ಸಿ ಹಸುಗಳನ್ನು ಸಾಕಿಕೊಂಡಿರುತ್ತೇನೆ. ನಮ್ಮ ಮನೆ ಪಕ್ಕದಲ್ಲಿರುವ ಹಸುಗಳನ್ನು ಕಟ್ಟಿ ಹಾಕುವ ಶೆಡ್ ನಲ್ಲಿ ಎಚ್ ಎಫ್ ಸೀಮೆ ಹಸು ಹಾಗೂ ಜರ್ಸಿ ಹಸುಗಳನ್ನು ಕಟ್ಟಿ ಹಾಕಿ ಮನೆಗೆ ಬರಲಾಗಿತ್ತು. ದಿನಾಂಕ 14/09/2024 ರಂದು ಬೆಳಗಿನ ಜಾವ 2-00 ಗಂಟೆ ಸಮಯದಲ್ಲಿ ನಾನು ದನದ ಶೆಡ್ಡಿಗೆ ಹೋಗಿ ನೋಡಿದಾಗ ನಮ್ಮ ಹಸುಗಳು ಶೆಡ್ಡಿನಲ್ಲಿ ಇರಲಿಲ್ಲ, ಯಾರೋ ಕಳ್ಳರು ನಾವು ಶೆಡ್ ನ ಬೀಗ ಹಾಕದೇ ಇರುವುದನ್ನು ಗಮನಿಸಿ ಶೆಡ್ ಗೆ ನುಗ್ಗಿ, ಶೆಡ್ ನಲ್ಲಿದ್ದ 80 ಸಾವಿರ ರೂ. ಮೌಲ್ಯದ HF ಸೀಮೆ ಹಸು ಮತ್ತು 60 ಸಾವಿರ‌ ರೂ. ಮೌಲ್ಯದ ಜೆರ್ಸಿ ಸೀಮೆ ಹಸುಗಳು ಕಾಣೆಯಾಗಿರುವುದು ಕಂಡುಬಂದಿದೆ. ಎರಡು ಹಸುಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ನಾವು ಎಲ್ಲ ಕಡೆ ಹುಡುಕಾಡಿದ್ದರೂ ಸಿಗದ ಕಾರಣ ಅ.4ರಂದು ದೊಡ್ಡಬೆಳವಂಗಲ ಠಾಣೆಗೆ ದೂರು ನೀಡಲಾಗಿದೆ ಎಂದು ಹಸುಗಳ ಮಾಲೀಕರು ತಿಳಿಸಿದ್ದಾರೆ.

HF ಹಸು ಬಿಳಿ ಮತ್ತು ಕಪ್ಪು ಬಣ್ಣದಾಗಿದ್ದು, ಜೆರ್ಸಿ ಹಸು ಕಪ್ಪು ಬಣ್ಣದಾಗಿರುತ್ತೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

11 minutes ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

11 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

11 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

12 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

14 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

15 hours ago