ಮನೆ ಪಕ್ಕದ ಶೆಡ್ ನಲ್ಲಿ ಬಿಟ್ಟಿದ್ದ ಅಪಾರ ಮೌಲ್ಯದ ಎಚ್ ಎಫ್ ಸೀಮೆ ಹಸು ಹಾಗೂ ಜರ್ಸಿ ಹಸುಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.
ಈ ಘಟನೆ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದಲ್ಲಿ ಸೆ.14ರ ರಾತ್ರಿ ನಡೆದಿದೆ. ಈ ಕುರಿತು ಅ.04ರಂದು ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ನಾನು ಹೈನುಗಾರಿಕೆ ಮತ್ತು ವ್ಯವಸಾಯ ಮಾಡಿಕೊಂಡು ಜೀವನ ಮಾಡುತ್ತಿರುತ್ತೇನೆ. ನಾನು ಜೀವನೋಪಾಯಕ್ಕಾಗಿ ಒಂದು HF ಸೀಮೆ ಹಸು ಮತ್ತು ಜರ್ಸಿ ಹಸುಗಳನ್ನು ಸಾಕಿಕೊಂಡಿರುತ್ತೇನೆ. ನಮ್ಮ ಮನೆ ಪಕ್ಕದಲ್ಲಿರುವ ಹಸುಗಳನ್ನು ಕಟ್ಟಿ ಹಾಕುವ ಶೆಡ್ ನಲ್ಲಿ ಎಚ್ ಎಫ್ ಸೀಮೆ ಹಸು ಹಾಗೂ ಜರ್ಸಿ ಹಸುಗಳನ್ನು ಕಟ್ಟಿ ಹಾಕಿ ಮನೆಗೆ ಬರಲಾಗಿತ್ತು. ದಿನಾಂಕ 14/09/2024 ರಂದು ಬೆಳಗಿನ ಜಾವ 2-00 ಗಂಟೆ ಸಮಯದಲ್ಲಿ ನಾನು ದನದ ಶೆಡ್ಡಿಗೆ ಹೋಗಿ ನೋಡಿದಾಗ ನಮ್ಮ ಹಸುಗಳು ಶೆಡ್ಡಿನಲ್ಲಿ ಇರಲಿಲ್ಲ, ಯಾರೋ ಕಳ್ಳರು ನಾವು ಶೆಡ್ ನ ಬೀಗ ಹಾಕದೇ ಇರುವುದನ್ನು ಗಮನಿಸಿ ಶೆಡ್ ಗೆ ನುಗ್ಗಿ, ಶೆಡ್ ನಲ್ಲಿದ್ದ 80 ಸಾವಿರ ರೂ. ಮೌಲ್ಯದ HF ಸೀಮೆ ಹಸು ಮತ್ತು 60 ಸಾವಿರ ರೂ. ಮೌಲ್ಯದ ಜೆರ್ಸಿ ಸೀಮೆ ಹಸುಗಳು ಕಾಣೆಯಾಗಿರುವುದು ಕಂಡುಬಂದಿದೆ. ಎರಡು ಹಸುಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ನಾವು ಎಲ್ಲ ಕಡೆ ಹುಡುಕಾಡಿದ್ದರೂ ಸಿಗದ ಕಾರಣ ಅ.4ರಂದು ದೊಡ್ಡಬೆಳವಂಗಲ ಠಾಣೆಗೆ ದೂರು ನೀಡಲಾಗಿದೆ ಎಂದು ಹಸುಗಳ ಮಾಲೀಕರು ತಿಳಿಸಿದ್ದಾರೆ.
HF ಹಸು ಬಿಳಿ ಮತ್ತು ಕಪ್ಪು ಬಣ್ಣದಾಗಿದ್ದು, ಜೆರ್ಸಿ ಹಸು ಕಪ್ಪು ಬಣ್ಣದಾಗಿರುತ್ತೆ ಎಂದು ಹೇಳಿದ್ದಾರೆ.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…