ಮನೆ ಪಕ್ಕದ ಶೆಡ್ ನಲ್ಲಿ ಬಿಟ್ಟಿದ್ದ ಅಪಾರ ಮೌಲ್ಯದ ಎಚ್ ಎಫ್ ಸೀಮೆ ಹಸು ಹಾಗೂ ಜರ್ಸಿ ಹಸುಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.
ಈ ಘಟನೆ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದಲ್ಲಿ ಸೆ.14ರ ರಾತ್ರಿ ನಡೆದಿದೆ. ಈ ಕುರಿತು ಅ.04ರಂದು ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ನಾನು ಹೈನುಗಾರಿಕೆ ಮತ್ತು ವ್ಯವಸಾಯ ಮಾಡಿಕೊಂಡು ಜೀವನ ಮಾಡುತ್ತಿರುತ್ತೇನೆ. ನಾನು ಜೀವನೋಪಾಯಕ್ಕಾಗಿ ಒಂದು HF ಸೀಮೆ ಹಸು ಮತ್ತು ಜರ್ಸಿ ಹಸುಗಳನ್ನು ಸಾಕಿಕೊಂಡಿರುತ್ತೇನೆ. ನಮ್ಮ ಮನೆ ಪಕ್ಕದಲ್ಲಿರುವ ಹಸುಗಳನ್ನು ಕಟ್ಟಿ ಹಾಕುವ ಶೆಡ್ ನಲ್ಲಿ ಎಚ್ ಎಫ್ ಸೀಮೆ ಹಸು ಹಾಗೂ ಜರ್ಸಿ ಹಸುಗಳನ್ನು ಕಟ್ಟಿ ಹಾಕಿ ಮನೆಗೆ ಬರಲಾಗಿತ್ತು. ದಿನಾಂಕ 14/09/2024 ರಂದು ಬೆಳಗಿನ ಜಾವ 2-00 ಗಂಟೆ ಸಮಯದಲ್ಲಿ ನಾನು ದನದ ಶೆಡ್ಡಿಗೆ ಹೋಗಿ ನೋಡಿದಾಗ ನಮ್ಮ ಹಸುಗಳು ಶೆಡ್ಡಿನಲ್ಲಿ ಇರಲಿಲ್ಲ, ಯಾರೋ ಕಳ್ಳರು ನಾವು ಶೆಡ್ ನ ಬೀಗ ಹಾಕದೇ ಇರುವುದನ್ನು ಗಮನಿಸಿ ಶೆಡ್ ಗೆ ನುಗ್ಗಿ, ಶೆಡ್ ನಲ್ಲಿದ್ದ 80 ಸಾವಿರ ರೂ. ಮೌಲ್ಯದ HF ಸೀಮೆ ಹಸು ಮತ್ತು 60 ಸಾವಿರ ರೂ. ಮೌಲ್ಯದ ಜೆರ್ಸಿ ಸೀಮೆ ಹಸುಗಳು ಕಾಣೆಯಾಗಿರುವುದು ಕಂಡುಬಂದಿದೆ. ಎರಡು ಹಸುಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ನಾವು ಎಲ್ಲ ಕಡೆ ಹುಡುಕಾಡಿದ್ದರೂ ಸಿಗದ ಕಾರಣ ಅ.4ರಂದು ದೊಡ್ಡಬೆಳವಂಗಲ ಠಾಣೆಗೆ ದೂರು ನೀಡಲಾಗಿದೆ ಎಂದು ಹಸುಗಳ ಮಾಲೀಕರು ತಿಳಿಸಿದ್ದಾರೆ.
HF ಹಸು ಬಿಳಿ ಮತ್ತು ಕಪ್ಪು ಬಣ್ಣದಾಗಿದ್ದು, ಜೆರ್ಸಿ ಹಸು ಕಪ್ಪು ಬಣ್ಣದಾಗಿರುತ್ತೆ ಎಂದು ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…