ಅಪ್ಪಯ್ಯಣ್ಣ ಸೇವೆ ಅವಿಸ್ಮರಣೀಯ- ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಸಾಮಾಜಿಕ ನ್ಯಾಯದ ಪರವಾಗಿ ರಾಜಕೀಯ ಹೋರಾಟ ನಡೆಸಿ, ಸಹಕಾರ ಹಾಗೂ ಸಾರ್ವಜನಿಕ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದ ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ದಿವಂಗತ ಹಾಡೋನಹಳ್ಳಿ ಎಚ್. ಅಪ್ಪಯ್ಯಣ್ಣ ಅವರ ನಿಧನವು ನನ್ನಂತಹವರ ಅಪಾರ ಅಭಿಮಾನಿ ಬಳಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.

ತಾಲೂಕಿನ ಹಾಡೋನಹಳ್ಳಿ ಚೌಡೇಶ್ವರಿ ದೇವಾಲಯದ ಆವರಣದಲ್ಲಿ ಆಯೋಜಿಸಿದ್ದ ದಿವಂಗತ ಅಪ್ಪಯ್ಯಣ್ಣ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಪ್ಪಯ್ಯಣ್ಣ ಅವರ ಜೀವನ ಶೈಲಿ ಹಾಗೂ ಸೇವಾ ಮನೋಭಾವ ಇಂದಿನ ರಾಜಕೀಯಕ್ಕೆ ಮಾದರಿಯಾಗಬೇಕಾದದ್ದು ಎಂದು ಅಭಿಪ್ರಾಯಪಟ್ಟರು.

ಒಂದು ವರ್ಷದ ಹಿಂದೆ ಅವರ ನಿಧನದ ಸುದ್ದಿ ತಿಳಿದಾಗ ನಂಬಲಾಗದೆ ಹೋಯಿತು. ಇದು ತಪ್ಪು ಮಾಹಿತಿ ಇರಬಹುದೆಂದು ಭಾವಿಸಿದ್ದೆ. ಸದಾ ಚುರುಕಾಗಿ ಸಮಾಜಸೇವೆಯಲ್ಲಿ ತೊಡಗಿದ್ದ, ಉತ್ತಮ ಆರೋಗ್ಯ ಹೊಂದಿದ್ದ ವ್ಯಕ್ತಿಯ ಅಕಾಲಿಕ ನಿಧನ ಅತೀವ ಅನಿರೀಕ್ಷಿತವಾಗಿತ್ತು ಎಂದು ಅವರು ವಿಷಾದ ವ್ಯಕ್ತಪಡಿಸಿದರು.

 

ನಮ್ಮ ಒಡನಾಟ ತಂದೆ–ಮಗನ ಸಂಬಂಧದಂತಿತ್ತು. ಸಣ್ಣ ಹಳ್ಳಿಯ ರೈತನ ಮಗನಾಗಿ ಜನಿಸಿ, ತಾಲೂಕು ಮಟ್ಟದ ನಾಯಕನಾಗಿ ಬೆಳೆದ ಅವರ ಜೀವನ ಪಯಣ ಸುಲಭವಾಗಿರಲಿಲ್ಲ. ರೈತರ ಶಕ್ತಿವರ್ಧನೆಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ ಕೀರ್ತಿ ಅವರದ್ದು. ಸಹಕಾರ ಕ್ಷೇತ್ರದಲ್ಲಿ ವಿಶೇಷವಾಗಿ ರೈತ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಲು ಅವರು ಸಲ್ಲಿಸಿದ ಪ್ರಾಮಾಣಿಕ ಸೇವೆಯೇ ಅವರ ವ್ಯಕ್ತಿತ್ವವನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ ಎಂದು ನಿಸರ್ಗ ನಾರಾಯಣಸ್ವಾಮಿ ಹೇಳಿದರು.

ಇದೇ ಸಂದರ್ಭದಲ್ಲಿ ದಿವಂಗತ ಅಪ್ಪಯ್ಯಣ್ಣ ಅವರ ಸವಿ ನೆನಪಿಗಾಗಿ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಬೆಳಿಗ್ಗೆ 9ರಿಂದ ಮಧ್ಯಾಹ್ನ 3ರವರೆಗೆ ನೂರಾರು ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಪ್ರದೇಶದ ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ರಕ್ತದಾನ ಶಿಬಿರಕ್ಕೂ ಉತ್ತಮ ಸ್ಪಂದನೆ ದೊರೆಯಿತು.

ಅಪ್ಪಯ್ಯಣ್ಣನವರ ಅಭಿಮಾನಿಗಳಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಅಲ್ಲದೆ ವೃದ್ಧರಿಗೆ ಊರುಗೋಲು ಹಾಗೂ ಕಂಬಳಿ ವಿತರಣೆಯೂ ನಡೆಯಿತು.

ಕಾರ್ಯಕ್ರಮದಲ್ಲಿ ಖ್ಯಾತ ವೈದ್ಯರಾದ ಡಾ. ಆಂಜಿನಪ್ಪ, ಡಾ. ವಿಜಯಕುಮಾರ್, ಅಪ್ಪಯ್ಯಣ್ಣನವರ ಪುತ್ರ ನಾಗರಾಜು, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಿ. ಮುನೇಗೌಡ, ಮಾಜಿ ಎಂಎಲ್‌ಸಿ ರಮೇಶ್ ಗೌಡ, ಮಾಜಿ ಶಾಸಕರಾದ ಗಂಟಿಗಾನಹಳ್ಳಿ ಕೃಷ್ಣಪ್ಪ, ಚಂದ್ರಣ್ಣ, ಹಿರಿಯ ಬಿಜೆಪಿ ಮುಖಂಡ ಹನುಮಂತರಾಯಪ್ಪ, ತೆಂಗು ನಾರು ಮಂಡಳಿ ಅಧ್ಯಕ್ಷ ವೆಂಕಟೇಶ್ ಬಾಬು, ಟಿಎಪಿಸಿಎಂಎಸ್ ಸದಸ್ಯ ಪುರೋಷೋತ್ತಮ, ಜೆಡಿಎಸ್ ಮುಖಂಡರಾದ ಹರೀಶ್ ಗೌಡ, ಹುಸ್ಕೂರು ಆನಂದ್, ಜಗನ್ನಾಥ್, ಮುದ್ದಣ್ಣ, ಬಚ್ಚಳ್ಳಿ ನಾಗರಾಜು, ಗೌರೀಶ್, ಯುವ ಮುಖಂಡ ಉದಯ ಆರಾಧ್ಯ ಸೇರಿದಂತೆ ಹಲವರು ಮುಖಂಡರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

9 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

10 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

11 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

12 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

20 hours ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

1 day ago