ದೊಡ್ಡಬಳ್ಳಾಪುರ: ಸಾಮಾಜಿಕ ನ್ಯಾಯದ ಪರವಾಗಿ ರಾಜಕೀಯ ಹೋರಾಟ ನಡೆಸಿ, ಸಹಕಾರ ಹಾಗೂ ಸಾರ್ವಜನಿಕ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದ ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ದಿವಂಗತ ಹಾಡೋನಹಳ್ಳಿ ಎಚ್. ಅಪ್ಪಯ್ಯಣ್ಣ ಅವರ ನಿಧನವು ನನ್ನಂತಹವರ ಅಪಾರ ಅಭಿಮಾನಿ ಬಳಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.
ತಾಲೂಕಿನ ಹಾಡೋನಹಳ್ಳಿ ಚೌಡೇಶ್ವರಿ ದೇವಾಲಯದ ಆವರಣದಲ್ಲಿ ಆಯೋಜಿಸಿದ್ದ ದಿವಂಗತ ಅಪ್ಪಯ್ಯಣ್ಣ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಪ್ಪಯ್ಯಣ್ಣ ಅವರ ಜೀವನ ಶೈಲಿ ಹಾಗೂ ಸೇವಾ ಮನೋಭಾವ ಇಂದಿನ ರಾಜಕೀಯಕ್ಕೆ ಮಾದರಿಯಾಗಬೇಕಾದದ್ದು ಎಂದು ಅಭಿಪ್ರಾಯಪಟ್ಟರು.
ಒಂದು ವರ್ಷದ ಹಿಂದೆ ಅವರ ನಿಧನದ ಸುದ್ದಿ ತಿಳಿದಾಗ ನಂಬಲಾಗದೆ ಹೋಯಿತು. ಇದು ತಪ್ಪು ಮಾಹಿತಿ ಇರಬಹುದೆಂದು ಭಾವಿಸಿದ್ದೆ. ಸದಾ ಚುರುಕಾಗಿ ಸಮಾಜಸೇವೆಯಲ್ಲಿ ತೊಡಗಿದ್ದ, ಉತ್ತಮ ಆರೋಗ್ಯ ಹೊಂದಿದ್ದ ವ್ಯಕ್ತಿಯ ಅಕಾಲಿಕ ನಿಧನ ಅತೀವ ಅನಿರೀಕ್ಷಿತವಾಗಿತ್ತು ಎಂದು ಅವರು ವಿಷಾದ ವ್ಯಕ್ತಪಡಿಸಿದರು.
ನಮ್ಮ ಒಡನಾಟ ತಂದೆ–ಮಗನ ಸಂಬಂಧದಂತಿತ್ತು. ಸಣ್ಣ ಹಳ್ಳಿಯ ರೈತನ ಮಗನಾಗಿ ಜನಿಸಿ, ತಾಲೂಕು ಮಟ್ಟದ ನಾಯಕನಾಗಿ ಬೆಳೆದ ಅವರ ಜೀವನ ಪಯಣ ಸುಲಭವಾಗಿರಲಿಲ್ಲ. ರೈತರ ಶಕ್ತಿವರ್ಧನೆಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ ಕೀರ್ತಿ ಅವರದ್ದು. ಸಹಕಾರ ಕ್ಷೇತ್ರದಲ್ಲಿ ವಿಶೇಷವಾಗಿ ರೈತ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಲು ಅವರು ಸಲ್ಲಿಸಿದ ಪ್ರಾಮಾಣಿಕ ಸೇವೆಯೇ ಅವರ ವ್ಯಕ್ತಿತ್ವವನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ ಎಂದು ನಿಸರ್ಗ ನಾರಾಯಣಸ್ವಾಮಿ ಹೇಳಿದರು.
ಇದೇ ಸಂದರ್ಭದಲ್ಲಿ ದಿವಂಗತ ಅಪ್ಪಯ್ಯಣ್ಣ ಅವರ ಸವಿ ನೆನಪಿಗಾಗಿ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಬೆಳಿಗ್ಗೆ 9ರಿಂದ ಮಧ್ಯಾಹ್ನ 3ರವರೆಗೆ ನೂರಾರು ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಪ್ರದೇಶದ ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ರಕ್ತದಾನ ಶಿಬಿರಕ್ಕೂ ಉತ್ತಮ ಸ್ಪಂದನೆ ದೊರೆಯಿತು.
ಅಪ್ಪಯ್ಯಣ್ಣನವರ ಅಭಿಮಾನಿಗಳಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಅಲ್ಲದೆ ವೃದ್ಧರಿಗೆ ಊರುಗೋಲು ಹಾಗೂ ಕಂಬಳಿ ವಿತರಣೆಯೂ ನಡೆಯಿತು.
ಕಾರ್ಯಕ್ರಮದಲ್ಲಿ ಖ್ಯಾತ ವೈದ್ಯರಾದ ಡಾ. ಆಂಜಿನಪ್ಪ, ಡಾ. ವಿಜಯಕುಮಾರ್, ಅಪ್ಪಯ್ಯಣ್ಣನವರ ಪುತ್ರ ನಾಗರಾಜು, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಿ. ಮುನೇಗೌಡ, ಮಾಜಿ ಎಂಎಲ್ಸಿ ರಮೇಶ್ ಗೌಡ, ಮಾಜಿ ಶಾಸಕರಾದ ಗಂಟಿಗಾನಹಳ್ಳಿ ಕೃಷ್ಣಪ್ಪ, ಚಂದ್ರಣ್ಣ, ಹಿರಿಯ ಬಿಜೆಪಿ ಮುಖಂಡ ಹನುಮಂತರಾಯಪ್ಪ, ತೆಂಗು ನಾರು ಮಂಡಳಿ ಅಧ್ಯಕ್ಷ ವೆಂಕಟೇಶ್ ಬಾಬು, ಟಿಎಪಿಸಿಎಂಎಸ್ ಸದಸ್ಯ ಪುರೋಷೋತ್ತಮ, ಜೆಡಿಎಸ್ ಮುಖಂಡರಾದ ಹರೀಶ್ ಗೌಡ, ಹುಸ್ಕೂರು ಆನಂದ್, ಜಗನ್ನಾಥ್, ಮುದ್ದಣ್ಣ, ಬಚ್ಚಳ್ಳಿ ನಾಗರಾಜು, ಗೌರೀಶ್, ಯುವ ಮುಖಂಡ ಉದಯ ಆರಾಧ್ಯ ಸೇರಿದಂತೆ ಹಲವರು ಮುಖಂಡರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…