ಅಪ್ಪಯ್ಯಣ್ಣ ಸೇವೆ ಅವಿಸ್ಮರಣೀಯ- ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಸಾಮಾಜಿಕ ನ್ಯಾಯದ ಪರವಾಗಿ ರಾಜಕೀಯ ಹೋರಾಟ ನಡೆಸಿ, ಸಹಕಾರ ಹಾಗೂ ಸಾರ್ವಜನಿಕ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದ ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ದಿವಂಗತ ಹಾಡೋನಹಳ್ಳಿ ಎಚ್. ಅಪ್ಪಯ್ಯಣ್ಣ ಅವರ ನಿಧನವು ನನ್ನಂತಹವರ ಅಪಾರ ಅಭಿಮಾನಿ ಬಳಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.

ತಾಲೂಕಿನ ಹಾಡೋನಹಳ್ಳಿ ಚೌಡೇಶ್ವರಿ ದೇವಾಲಯದ ಆವರಣದಲ್ಲಿ ಆಯೋಜಿಸಿದ್ದ ದಿವಂಗತ ಅಪ್ಪಯ್ಯಣ್ಣ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಪ್ಪಯ್ಯಣ್ಣ ಅವರ ಜೀವನ ಶೈಲಿ ಹಾಗೂ ಸೇವಾ ಮನೋಭಾವ ಇಂದಿನ ರಾಜಕೀಯಕ್ಕೆ ಮಾದರಿಯಾಗಬೇಕಾದದ್ದು ಎಂದು ಅಭಿಪ್ರಾಯಪಟ್ಟರು.

ಒಂದು ವರ್ಷದ ಹಿಂದೆ ಅವರ ನಿಧನದ ಸುದ್ದಿ ತಿಳಿದಾಗ ನಂಬಲಾಗದೆ ಹೋಯಿತು. ಇದು ತಪ್ಪು ಮಾಹಿತಿ ಇರಬಹುದೆಂದು ಭಾವಿಸಿದ್ದೆ. ಸದಾ ಚುರುಕಾಗಿ ಸಮಾಜಸೇವೆಯಲ್ಲಿ ತೊಡಗಿದ್ದ, ಉತ್ತಮ ಆರೋಗ್ಯ ಹೊಂದಿದ್ದ ವ್ಯಕ್ತಿಯ ಅಕಾಲಿಕ ನಿಧನ ಅತೀವ ಅನಿರೀಕ್ಷಿತವಾಗಿತ್ತು ಎಂದು ಅವರು ವಿಷಾದ ವ್ಯಕ್ತಪಡಿಸಿದರು.

 

ನಮ್ಮ ಒಡನಾಟ ತಂದೆ–ಮಗನ ಸಂಬಂಧದಂತಿತ್ತು. ಸಣ್ಣ ಹಳ್ಳಿಯ ರೈತನ ಮಗನಾಗಿ ಜನಿಸಿ, ತಾಲೂಕು ಮಟ್ಟದ ನಾಯಕನಾಗಿ ಬೆಳೆದ ಅವರ ಜೀವನ ಪಯಣ ಸುಲಭವಾಗಿರಲಿಲ್ಲ. ರೈತರ ಶಕ್ತಿವರ್ಧನೆಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ ಕೀರ್ತಿ ಅವರದ್ದು. ಸಹಕಾರ ಕ್ಷೇತ್ರದಲ್ಲಿ ವಿಶೇಷವಾಗಿ ರೈತ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಲು ಅವರು ಸಲ್ಲಿಸಿದ ಪ್ರಾಮಾಣಿಕ ಸೇವೆಯೇ ಅವರ ವ್ಯಕ್ತಿತ್ವವನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ ಎಂದು ನಿಸರ್ಗ ನಾರಾಯಣಸ್ವಾಮಿ ಹೇಳಿದರು.

ಇದೇ ಸಂದರ್ಭದಲ್ಲಿ ದಿವಂಗತ ಅಪ್ಪಯ್ಯಣ್ಣ ಅವರ ಸವಿ ನೆನಪಿಗಾಗಿ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಬೆಳಿಗ್ಗೆ 9ರಿಂದ ಮಧ್ಯಾಹ್ನ 3ರವರೆಗೆ ನೂರಾರು ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಪ್ರದೇಶದ ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ರಕ್ತದಾನ ಶಿಬಿರಕ್ಕೂ ಉತ್ತಮ ಸ್ಪಂದನೆ ದೊರೆಯಿತು.

ಅಪ್ಪಯ್ಯಣ್ಣನವರ ಅಭಿಮಾನಿಗಳಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಅಲ್ಲದೆ ವೃದ್ಧರಿಗೆ ಊರುಗೋಲು ಹಾಗೂ ಕಂಬಳಿ ವಿತರಣೆಯೂ ನಡೆಯಿತು.

ಕಾರ್ಯಕ್ರಮದಲ್ಲಿ ಖ್ಯಾತ ವೈದ್ಯರಾದ ಡಾ. ಆಂಜಿನಪ್ಪ, ಡಾ. ವಿಜಯಕುಮಾರ್, ಅಪ್ಪಯ್ಯಣ್ಣನವರ ಪುತ್ರ ನಾಗರಾಜು, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಿ. ಮುನೇಗೌಡ, ಮಾಜಿ ಎಂಎಲ್‌ಸಿ ರಮೇಶ್ ಗೌಡ, ಮಾಜಿ ಶಾಸಕರಾದ ಗಂಟಿಗಾನಹಳ್ಳಿ ಕೃಷ್ಣಪ್ಪ, ಚಂದ್ರಣ್ಣ, ಹಿರಿಯ ಬಿಜೆಪಿ ಮುಖಂಡ ಹನುಮಂತರಾಯಪ್ಪ, ತೆಂಗು ನಾರು ಮಂಡಳಿ ಅಧ್ಯಕ್ಷ ವೆಂಕಟೇಶ್ ಬಾಬು, ಟಿಎಪಿಸಿಎಂಎಸ್ ಸದಸ್ಯ ಪುರೋಷೋತ್ತಮ, ಜೆಡಿಎಸ್ ಮುಖಂಡರಾದ ಹರೀಶ್ ಗೌಡ, ಹುಸ್ಕೂರು ಆನಂದ್, ಜಗನ್ನಾಥ್, ಮುದ್ದಣ್ಣ, ಬಚ್ಚಳ್ಳಿ ನಾಗರಾಜು, ಗೌರೀಶ್, ಯುವ ಮುಖಂಡ ಉದಯ ಆರಾಧ್ಯ ಸೇರಿದಂತೆ ಹಲವರು ಮುಖಂಡರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

9 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

16 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

16 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago