ಅಪ್ಪಯ್ಯಣ್ಣ ಸೇವೆ ಅವಿಸ್ಮರಣೀಯ- ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಸಾಮಾಜಿಕ ನ್ಯಾಯದ ಪರವಾಗಿ ರಾಜಕೀಯ ಹೋರಾಟ ನಡೆಸಿ, ಸಹಕಾರ ಹಾಗೂ ಸಾರ್ವಜನಿಕ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದ ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ದಿವಂಗತ ಹಾಡೋನಹಳ್ಳಿ ಎಚ್. ಅಪ್ಪಯ್ಯಣ್ಣ ಅವರ ನಿಧನವು ನನ್ನಂತಹವರ ಅಪಾರ ಅಭಿಮಾನಿ ಬಳಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.

ತಾಲೂಕಿನ ಹಾಡೋನಹಳ್ಳಿ ಚೌಡೇಶ್ವರಿ ದೇವಾಲಯದ ಆವರಣದಲ್ಲಿ ಆಯೋಜಿಸಿದ್ದ ದಿವಂಗತ ಅಪ್ಪಯ್ಯಣ್ಣ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಪ್ಪಯ್ಯಣ್ಣ ಅವರ ಜೀವನ ಶೈಲಿ ಹಾಗೂ ಸೇವಾ ಮನೋಭಾವ ಇಂದಿನ ರಾಜಕೀಯಕ್ಕೆ ಮಾದರಿಯಾಗಬೇಕಾದದ್ದು ಎಂದು ಅಭಿಪ್ರಾಯಪಟ್ಟರು.

ಒಂದು ವರ್ಷದ ಹಿಂದೆ ಅವರ ನಿಧನದ ಸುದ್ದಿ ತಿಳಿದಾಗ ನಂಬಲಾಗದೆ ಹೋಯಿತು. ಇದು ತಪ್ಪು ಮಾಹಿತಿ ಇರಬಹುದೆಂದು ಭಾವಿಸಿದ್ದೆ. ಸದಾ ಚುರುಕಾಗಿ ಸಮಾಜಸೇವೆಯಲ್ಲಿ ತೊಡಗಿದ್ದ, ಉತ್ತಮ ಆರೋಗ್ಯ ಹೊಂದಿದ್ದ ವ್ಯಕ್ತಿಯ ಅಕಾಲಿಕ ನಿಧನ ಅತೀವ ಅನಿರೀಕ್ಷಿತವಾಗಿತ್ತು ಎಂದು ಅವರು ವಿಷಾದ ವ್ಯಕ್ತಪಡಿಸಿದರು.

 

ನಮ್ಮ ಒಡನಾಟ ತಂದೆ–ಮಗನ ಸಂಬಂಧದಂತಿತ್ತು. ಸಣ್ಣ ಹಳ್ಳಿಯ ರೈತನ ಮಗನಾಗಿ ಜನಿಸಿ, ತಾಲೂಕು ಮಟ್ಟದ ನಾಯಕನಾಗಿ ಬೆಳೆದ ಅವರ ಜೀವನ ಪಯಣ ಸುಲಭವಾಗಿರಲಿಲ್ಲ. ರೈತರ ಶಕ್ತಿವರ್ಧನೆಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ ಕೀರ್ತಿ ಅವರದ್ದು. ಸಹಕಾರ ಕ್ಷೇತ್ರದಲ್ಲಿ ವಿಶೇಷವಾಗಿ ರೈತ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಲು ಅವರು ಸಲ್ಲಿಸಿದ ಪ್ರಾಮಾಣಿಕ ಸೇವೆಯೇ ಅವರ ವ್ಯಕ್ತಿತ್ವವನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ ಎಂದು ನಿಸರ್ಗ ನಾರಾಯಣಸ್ವಾಮಿ ಹೇಳಿದರು.

ಇದೇ ಸಂದರ್ಭದಲ್ಲಿ ದಿವಂಗತ ಅಪ್ಪಯ್ಯಣ್ಣ ಅವರ ಸವಿ ನೆನಪಿಗಾಗಿ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಬೆಳಿಗ್ಗೆ 9ರಿಂದ ಮಧ್ಯಾಹ್ನ 3ರವರೆಗೆ ನೂರಾರು ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಪ್ರದೇಶದ ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ರಕ್ತದಾನ ಶಿಬಿರಕ್ಕೂ ಉತ್ತಮ ಸ್ಪಂದನೆ ದೊರೆಯಿತು.

ಅಪ್ಪಯ್ಯಣ್ಣನವರ ಅಭಿಮಾನಿಗಳಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಅಲ್ಲದೆ ವೃದ್ಧರಿಗೆ ಊರುಗೋಲು ಹಾಗೂ ಕಂಬಳಿ ವಿತರಣೆಯೂ ನಡೆಯಿತು.

ಕಾರ್ಯಕ್ರಮದಲ್ಲಿ ಖ್ಯಾತ ವೈದ್ಯರಾದ ಡಾ. ಆಂಜಿನಪ್ಪ, ಡಾ. ವಿಜಯಕುಮಾರ್, ಅಪ್ಪಯ್ಯಣ್ಣನವರ ಪುತ್ರ ನಾಗರಾಜು, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಿ. ಮುನೇಗೌಡ, ಮಾಜಿ ಎಂಎಲ್‌ಸಿ ರಮೇಶ್ ಗೌಡ, ಮಾಜಿ ಶಾಸಕರಾದ ಗಂಟಿಗಾನಹಳ್ಳಿ ಕೃಷ್ಣಪ್ಪ, ಚಂದ್ರಣ್ಣ, ಹಿರಿಯ ಬಿಜೆಪಿ ಮುಖಂಡ ಹನುಮಂತರಾಯಪ್ಪ, ತೆಂಗು ನಾರು ಮಂಡಳಿ ಅಧ್ಯಕ್ಷ ವೆಂಕಟೇಶ್ ಬಾಬು, ಟಿಎಪಿಸಿಎಂಎಸ್ ಸದಸ್ಯ ಪುರೋಷೋತ್ತಮ, ಜೆಡಿಎಸ್ ಮುಖಂಡರಾದ ಹರೀಶ್ ಗೌಡ, ಹುಸ್ಕೂರು ಆನಂದ್, ಜಗನ್ನಾಥ್, ಮುದ್ದಣ್ಣ, ಬಚ್ಚಳ್ಳಿ ನಾಗರಾಜು, ಗೌರೀಶ್, ಯುವ ಮುಖಂಡ ಉದಯ ಆರಾಧ್ಯ ಸೇರಿದಂತೆ ಹಲವರು ಮುಖಂಡರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

18 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago