ಅಪ್ಪು ಪುಣ್ಯ ಸ್ಮರಣೆ: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ತೂಬಗೆರೆ: ಯುವಕರು ರಕ್ತದಾನಕ್ಕೆ ಸ್ವಯಂ ಪ್ರೇರಿತರಾಗಿ ಮುಂದಾಗಬೇಕು, ರಕ್ತದ ಅನಿವಾರ್ಯತೆ ಮತ್ತು ಮಹತ್ವ ಅರಿತು ಆರೋಗ್ಯವಂತ ಪ್ರತಿಯೊಬ್ಬರೂ ರಕ್ತದಾನ ಮಾಡಬೇಕು ಎಂದು ಲಯನ್ಸ್ ಕ್ಲಬ್ ರಕ್ತದಾನ ಜಿಲ್ಲಾ ಸಂಯೋಜಕರಾದ ಲಯನ್ ಜಿ.ವೆಂಕಟೇಶ್ ಹೇಳಿದರು.

ಲಯನ್ಸ್ ರಕ್ತ ನಿಧಿ, ಲಯನ್ಸ್ ಕ್ಲಬ್ ದೊಡ್ಡಬಳ್ಳಾಪುರ ಮತ್ತು ಬೆಂಗಳೂರಿನ ಮಹಾವೀರ ಜೈನ್ ಆಸ್ಪತ್ರೆ ವತಿಯಿಂದ ಡಾ. ಪುನೀತ್ ರಾಜಕುಮಾರ್ ರವರ ಎರಡನೇ ವರ್ಷದ ಪುಣ್ಯ ಸ್ಮರಣೆ ಪ್ರಯುಕ್ತ ತೂಬಗೆರೆ ಗ್ರಾಮದಲ್ಲಿ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ರಕ್ತವನ್ನು ಕೃತಕವಾಗಿ ಸೃಷ್ಟಿಸುವುದಕ್ಕಾಗುವುದಿಲ್ಲ, ಆದ್ದರಿಂದ ರಕ್ತಕ್ಕೆ ಪರ್ಯಾಯ ಯಾವುದು ಇಲ್ಲ. ಇತ್ತೀಚಿಗೆ  ಅಪಘಾತ, ಅವಘಡಗಳು ಸಂಭವಿಸಿದಾಗ ರಕ್ತಕ್ಕಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಜಾಗತಿಕ ಮಟ್ಟದಲ್ಲಿ ರಕ್ತದ ಬೇಡಿಕೆ ಹೆಚ್ಚಾಗಿದೆ. ಆದ್ದರಿಂದ ರಕ್ತದಾನದ ಕುರಿತು ಜನರಲ್ಲಿ ಅರಿವು ಮೂಡಿಸಬೇಕಾಗಿದೆ ಹಾಗೂ ರಕ್ತದಾನದಿಂದ ಆಗುವ ಪ್ರಯೋಜನಗಳು ಮತ್ತು ದಾನದಿಂದ  ಲಶೇಖರಣೆಯಾಗುವ ರಕ್ತದ ಸದುಪಯೋಗಗಳನ್ನು ಸಾರ್ವಜನಿಕರಿಗೆ ತಿಳಿಸಬೇಕಾಗಿದೆ ಎಂದರು.

ಶಿಬಿರದ ಪ್ರಾಯೋಜಕರಾದ ಗ್ರಾಮ ಪಂಚಾಯಿತಿ ಸದಸ್ಯ ಟಿ.ಎನ್.ಕೃಷ್ಣಪ್ಪ ಮಾತನಾಡಿ ಎಲ್ಲಾ ದಾನಗಳಿಗಿಂತ ರಕ್ತದಾನ ಶ್ರೇಷ್ಠವಾಗಿದ್ದು, ತುರ್ತು ಸಂದರ್ಭದಲ್ಲಿ ರಕ್ತದಾನ ಮಾಡಿ ಪ್ರಾಣ ಉಳಿಸಬಹುದು. ಲಯನ್ಸ್ ಕ್ಲಬ್ ಸಂಸ್ಥೆಯಿಂದ ನಮ್ಮೆಲ್ಲರ ನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಸ್ಮರಣೆಯ ದಿನ ರಕ್ತದಾನ ಶಿಬಿರ ಹಮ್ಮಿಕೊಂಡಿರುವುದು ಅರ್ಥಪೂರ್ಣವಾಗಿದೆ ಎಂದರು.

ರಕ್ತದಾನ ಶಿಬಿರದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಲಯನ್ ದೀಪಕ್ ಸುಮನ್, ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ರಾಜಶೇಖರ್, ಲಯನ್ಸ್ ಚಾರಿಟೀಸ್ ಟ್ರಸ್ಟ್  ಉಪಾಧ್ಯಕ್ಷ ಲಯನ್ ಡಾಕ್ಟರ್ ಹುಲಿಕಲ್ ನಟರಾಜ್, ಕಾರ್ಯದರ್ಶಿ ರಮಕಾಂತ್, ತೂಬಗೆರೆ ಗ್ರಾಮ ಪಂಚಾಯಿತಿ ಸದಸ್ಯ ಗಂಗಾಧರ್, ತೂಬಗೆರೆ ಹಿತರಕ್ಷಣ ಸಮಿತಿ ಅಧ್ಯಕ್ಷ ರವಿ ಸಿದ್ದಪ್ಪ, ಯುವ ಮುಖಂಡ ಉದಯ ಆರಾಧ್ಯ  ವಕೀಲ ಪ್ರತಾಪ್, ಪುನೀತ್ ರಾಜಕುಮಾರ್ ಅಭಿಮಾನಿ ಸಂಘದ  ಅಧ್ಯಕ್ಷ ಗಂಗಾಧರ್, ಸೋತೆನಹಳ್ಳಿ ಹರೀಶ್, ಗ್ರಾಮಸ್ಥರಾದ ಮೋಟರ್ ಮಂಜಣ್ಣ, ಸುಧೀರ್, ಸುನಿಲ್,  ಮಧು ಮತ್ತು ಸಾರ್ವಜನಿಕರು ಹಾಜರಿದ್ದರು.

Ramesh Babu

Journalist

Recent Posts

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…

52 minutes ago

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

15 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

16 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

24 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 days ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago