ಅಪ್ಪು ಪುಣ್ಯ ಸ್ಮರಣೆ: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ತೂಬಗೆರೆ: ಯುವಕರು ರಕ್ತದಾನಕ್ಕೆ ಸ್ವಯಂ ಪ್ರೇರಿತರಾಗಿ ಮುಂದಾಗಬೇಕು, ರಕ್ತದ ಅನಿವಾರ್ಯತೆ ಮತ್ತು ಮಹತ್ವ ಅರಿತು ಆರೋಗ್ಯವಂತ ಪ್ರತಿಯೊಬ್ಬರೂ ರಕ್ತದಾನ ಮಾಡಬೇಕು ಎಂದು ಲಯನ್ಸ್ ಕ್ಲಬ್ ರಕ್ತದಾನ ಜಿಲ್ಲಾ ಸಂಯೋಜಕರಾದ ಲಯನ್ ಜಿ.ವೆಂಕಟೇಶ್ ಹೇಳಿದರು.

ಲಯನ್ಸ್ ರಕ್ತ ನಿಧಿ, ಲಯನ್ಸ್ ಕ್ಲಬ್ ದೊಡ್ಡಬಳ್ಳಾಪುರ ಮತ್ತು ಬೆಂಗಳೂರಿನ ಮಹಾವೀರ ಜೈನ್ ಆಸ್ಪತ್ರೆ ವತಿಯಿಂದ ಡಾ. ಪುನೀತ್ ರಾಜಕುಮಾರ್ ರವರ ಎರಡನೇ ವರ್ಷದ ಪುಣ್ಯ ಸ್ಮರಣೆ ಪ್ರಯುಕ್ತ ತೂಬಗೆರೆ ಗ್ರಾಮದಲ್ಲಿ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ರಕ್ತವನ್ನು ಕೃತಕವಾಗಿ ಸೃಷ್ಟಿಸುವುದಕ್ಕಾಗುವುದಿಲ್ಲ, ಆದ್ದರಿಂದ ರಕ್ತಕ್ಕೆ ಪರ್ಯಾಯ ಯಾವುದು ಇಲ್ಲ. ಇತ್ತೀಚಿಗೆ  ಅಪಘಾತ, ಅವಘಡಗಳು ಸಂಭವಿಸಿದಾಗ ರಕ್ತಕ್ಕಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಜಾಗತಿಕ ಮಟ್ಟದಲ್ಲಿ ರಕ್ತದ ಬೇಡಿಕೆ ಹೆಚ್ಚಾಗಿದೆ. ಆದ್ದರಿಂದ ರಕ್ತದಾನದ ಕುರಿತು ಜನರಲ್ಲಿ ಅರಿವು ಮೂಡಿಸಬೇಕಾಗಿದೆ ಹಾಗೂ ರಕ್ತದಾನದಿಂದ ಆಗುವ ಪ್ರಯೋಜನಗಳು ಮತ್ತು ದಾನದಿಂದ  ಲಶೇಖರಣೆಯಾಗುವ ರಕ್ತದ ಸದುಪಯೋಗಗಳನ್ನು ಸಾರ್ವಜನಿಕರಿಗೆ ತಿಳಿಸಬೇಕಾಗಿದೆ ಎಂದರು.

ಶಿಬಿರದ ಪ್ರಾಯೋಜಕರಾದ ಗ್ರಾಮ ಪಂಚಾಯಿತಿ ಸದಸ್ಯ ಟಿ.ಎನ್.ಕೃಷ್ಣಪ್ಪ ಮಾತನಾಡಿ ಎಲ್ಲಾ ದಾನಗಳಿಗಿಂತ ರಕ್ತದಾನ ಶ್ರೇಷ್ಠವಾಗಿದ್ದು, ತುರ್ತು ಸಂದರ್ಭದಲ್ಲಿ ರಕ್ತದಾನ ಮಾಡಿ ಪ್ರಾಣ ಉಳಿಸಬಹುದು. ಲಯನ್ಸ್ ಕ್ಲಬ್ ಸಂಸ್ಥೆಯಿಂದ ನಮ್ಮೆಲ್ಲರ ನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಸ್ಮರಣೆಯ ದಿನ ರಕ್ತದಾನ ಶಿಬಿರ ಹಮ್ಮಿಕೊಂಡಿರುವುದು ಅರ್ಥಪೂರ್ಣವಾಗಿದೆ ಎಂದರು.

ರಕ್ತದಾನ ಶಿಬಿರದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಲಯನ್ ದೀಪಕ್ ಸುಮನ್, ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ರಾಜಶೇಖರ್, ಲಯನ್ಸ್ ಚಾರಿಟೀಸ್ ಟ್ರಸ್ಟ್  ಉಪಾಧ್ಯಕ್ಷ ಲಯನ್ ಡಾಕ್ಟರ್ ಹುಲಿಕಲ್ ನಟರಾಜ್, ಕಾರ್ಯದರ್ಶಿ ರಮಕಾಂತ್, ತೂಬಗೆರೆ ಗ್ರಾಮ ಪಂಚಾಯಿತಿ ಸದಸ್ಯ ಗಂಗಾಧರ್, ತೂಬಗೆರೆ ಹಿತರಕ್ಷಣ ಸಮಿತಿ ಅಧ್ಯಕ್ಷ ರವಿ ಸಿದ್ದಪ್ಪ, ಯುವ ಮುಖಂಡ ಉದಯ ಆರಾಧ್ಯ  ವಕೀಲ ಪ್ರತಾಪ್, ಪುನೀತ್ ರಾಜಕುಮಾರ್ ಅಭಿಮಾನಿ ಸಂಘದ  ಅಧ್ಯಕ್ಷ ಗಂಗಾಧರ್, ಸೋತೆನಹಳ್ಳಿ ಹರೀಶ್, ಗ್ರಾಮಸ್ಥರಾದ ಮೋಟರ್ ಮಂಜಣ್ಣ, ಸುಧೀರ್, ಸುನಿಲ್,  ಮಧು ಮತ್ತು ಸಾರ್ವಜನಿಕರು ಹಾಜರಿದ್ದರು.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

8 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

10 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

10 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

11 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

15 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

16 hours ago