ಅಪ್ಪು ಪುಣ್ಯ ಸ್ಮರಣೆ: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ತೂಬಗೆರೆ: ಯುವಕರು ರಕ್ತದಾನಕ್ಕೆ ಸ್ವಯಂ ಪ್ರೇರಿತರಾಗಿ ಮುಂದಾಗಬೇಕು, ರಕ್ತದ ಅನಿವಾರ್ಯತೆ ಮತ್ತು ಮಹತ್ವ ಅರಿತು ಆರೋಗ್ಯವಂತ ಪ್ರತಿಯೊಬ್ಬರೂ ರಕ್ತದಾನ ಮಾಡಬೇಕು ಎಂದು ಲಯನ್ಸ್ ಕ್ಲಬ್ ರಕ್ತದಾನ ಜಿಲ್ಲಾ ಸಂಯೋಜಕರಾದ ಲಯನ್ ಜಿ.ವೆಂಕಟೇಶ್ ಹೇಳಿದರು.

ಲಯನ್ಸ್ ರಕ್ತ ನಿಧಿ, ಲಯನ್ಸ್ ಕ್ಲಬ್ ದೊಡ್ಡಬಳ್ಳಾಪುರ ಮತ್ತು ಬೆಂಗಳೂರಿನ ಮಹಾವೀರ ಜೈನ್ ಆಸ್ಪತ್ರೆ ವತಿಯಿಂದ ಡಾ. ಪುನೀತ್ ರಾಜಕುಮಾರ್ ರವರ ಎರಡನೇ ವರ್ಷದ ಪುಣ್ಯ ಸ್ಮರಣೆ ಪ್ರಯುಕ್ತ ತೂಬಗೆರೆ ಗ್ರಾಮದಲ್ಲಿ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ರಕ್ತವನ್ನು ಕೃತಕವಾಗಿ ಸೃಷ್ಟಿಸುವುದಕ್ಕಾಗುವುದಿಲ್ಲ, ಆದ್ದರಿಂದ ರಕ್ತಕ್ಕೆ ಪರ್ಯಾಯ ಯಾವುದು ಇಲ್ಲ. ಇತ್ತೀಚಿಗೆ  ಅಪಘಾತ, ಅವಘಡಗಳು ಸಂಭವಿಸಿದಾಗ ರಕ್ತಕ್ಕಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಜಾಗತಿಕ ಮಟ್ಟದಲ್ಲಿ ರಕ್ತದ ಬೇಡಿಕೆ ಹೆಚ್ಚಾಗಿದೆ. ಆದ್ದರಿಂದ ರಕ್ತದಾನದ ಕುರಿತು ಜನರಲ್ಲಿ ಅರಿವು ಮೂಡಿಸಬೇಕಾಗಿದೆ ಹಾಗೂ ರಕ್ತದಾನದಿಂದ ಆಗುವ ಪ್ರಯೋಜನಗಳು ಮತ್ತು ದಾನದಿಂದ  ಲಶೇಖರಣೆಯಾಗುವ ರಕ್ತದ ಸದುಪಯೋಗಗಳನ್ನು ಸಾರ್ವಜನಿಕರಿಗೆ ತಿಳಿಸಬೇಕಾಗಿದೆ ಎಂದರು.

ಶಿಬಿರದ ಪ್ರಾಯೋಜಕರಾದ ಗ್ರಾಮ ಪಂಚಾಯಿತಿ ಸದಸ್ಯ ಟಿ.ಎನ್.ಕೃಷ್ಣಪ್ಪ ಮಾತನಾಡಿ ಎಲ್ಲಾ ದಾನಗಳಿಗಿಂತ ರಕ್ತದಾನ ಶ್ರೇಷ್ಠವಾಗಿದ್ದು, ತುರ್ತು ಸಂದರ್ಭದಲ್ಲಿ ರಕ್ತದಾನ ಮಾಡಿ ಪ್ರಾಣ ಉಳಿಸಬಹುದು. ಲಯನ್ಸ್ ಕ್ಲಬ್ ಸಂಸ್ಥೆಯಿಂದ ನಮ್ಮೆಲ್ಲರ ನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಸ್ಮರಣೆಯ ದಿನ ರಕ್ತದಾನ ಶಿಬಿರ ಹಮ್ಮಿಕೊಂಡಿರುವುದು ಅರ್ಥಪೂರ್ಣವಾಗಿದೆ ಎಂದರು.

ರಕ್ತದಾನ ಶಿಬಿರದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಲಯನ್ ದೀಪಕ್ ಸುಮನ್, ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ರಾಜಶೇಖರ್, ಲಯನ್ಸ್ ಚಾರಿಟೀಸ್ ಟ್ರಸ್ಟ್  ಉಪಾಧ್ಯಕ್ಷ ಲಯನ್ ಡಾಕ್ಟರ್ ಹುಲಿಕಲ್ ನಟರಾಜ್, ಕಾರ್ಯದರ್ಶಿ ರಮಕಾಂತ್, ತೂಬಗೆರೆ ಗ್ರಾಮ ಪಂಚಾಯಿತಿ ಸದಸ್ಯ ಗಂಗಾಧರ್, ತೂಬಗೆರೆ ಹಿತರಕ್ಷಣ ಸಮಿತಿ ಅಧ್ಯಕ್ಷ ರವಿ ಸಿದ್ದಪ್ಪ, ಯುವ ಮುಖಂಡ ಉದಯ ಆರಾಧ್ಯ  ವಕೀಲ ಪ್ರತಾಪ್, ಪುನೀತ್ ರಾಜಕುಮಾರ್ ಅಭಿಮಾನಿ ಸಂಘದ  ಅಧ್ಯಕ್ಷ ಗಂಗಾಧರ್, ಸೋತೆನಹಳ್ಳಿ ಹರೀಶ್, ಗ್ರಾಮಸ್ಥರಾದ ಮೋಟರ್ ಮಂಜಣ್ಣ, ಸುಧೀರ್, ಸುನಿಲ್,  ಮಧು ಮತ್ತು ಸಾರ್ವಜನಿಕರು ಹಾಜರಿದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

2 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

7 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago