ಅಪ್ಪ, ಮಗನ ಮೇಲೆ‌‌ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ: ಹಲ್ಲೆ ಮಾಡಿ ಪರಾರಿಯಾಗಿರೋ ದುಷ್ಕರ್ಮಿಗಳು

ಅಪ್ಪ, ಮಗನ ಮೇಲೆ‌‌ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಇಂದು ಸಂಜೆ ಸುಮಾರು 4 ಗಂಟೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ನಡೆದಿದೆ…

ಅಪ್ಪ, ಮಗನ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಹಲ್ಲೆಗೊಳಗಾದವರನ್ನು ಅಪ್ಪ ಮಧುಸೂದನ್(49), ಮಗ ಕಾರ್ತಿಕ್ ಕುಮಾರ್(26) ಎಂದು ಗುರುತಿಸಲಾಗಿದೆ….

ಸ್ಯಾಂಟ್ರೊ ಕಾರಲ್ಲಿ ಬಂದು ಅಟ್ಯಾಕ್ ಮಾಡಿ ಎಸ್ಕೇಪ್ ಆಗಿರೋ ದುಷ್ಕರ್ಮಿಗಳು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ…

ಹಲ್ಲೆಗೊಳಗಾದವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ….

ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..

ಹೆಚ್ಚಿ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….

Leave a Reply

Your email address will not be published. Required fields are marked *

error: Content is protected !!