ಅಪ್ಪ, ಮಗನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಿನ್ನೆ(ಡಿ.13)ರ ಸಂಜೆ ಸುಮಾರು 4 ಗಂಟೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ನಡೆದಿತ್ತು…
ಹಲ್ಲೆಗೊಳಗಾದವರನ್ನು ಅಪ್ಪ ಮಧುಸೂದನ್(49), ಮಗ ಕಾರ್ತಿಕ್ ಕುಮಾರ್(26) ಎಂದು ಗುರುತಿಸಲಾಗಿದೆ….
ಅಡಕಮಾರನಹಳ್ಳಿ ಮೂಲದ ಮಹಿಳೆ ಜೊತೆಯಲ್ಲಿ ಕಾರ್ತಿಕ್ ಕುಮಾರ್ ಗೆ ಅನೈತಿಕ ಸಂಬಂಧವಿತ್ತು. ಈಕೆಯೇ ಈಗ ಕಾರ್ತಿಕ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿಸಿದ್ದಾಳೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ…
ನವೆಂಬರ್ 23 ರಂದು ಮೊದಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆಗ ಎರಡು ಕುಟುಂಬಗಳು ರಾಜಿ ಸಂಧಾನ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ.
ಅಕ್ರಮ ಸಂಬಂಧದ ಹಿನ್ನೆಲೆ ಕಾರ್ತಿಕ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಯತ್ನ ನಡೆಸಲಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ..
ಮಗನನ್ನು ಬಿಡಿಸಲು ಹೋದ ತಂದೆ ಮಧುಸೂದನ್ ಮೇಲೂ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ.
ಇಬ್ಬರಿಗೂ ತಲೆ, ಮುಖ ಹೊಟ್ಟೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಹಲ್ಲೆಗೊಳಗಾದವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ….
ಮಹಿಳೆ ಸೇರಿದಂತೆ ಐದು ಜನಕ್ಕೂ ಹೆಚ್ಚು ದುಷ್ಕರ್ಮಿಗಳು ಸ್ಯಾಂಟ್ರೊ ಕಾರಲ್ಲಿ ಬಂದು ಅಟ್ಯಾಕ್ ಮಾಡಿ ಎಸ್ಕೇಪ್ ಆಗಿದ್ದರು, ಸ್ಥಳದಲ್ಲಿ ಬಿಗುವುನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದರು..
ಕೊನೆ ಕ್ಷಣದಲ್ಲಿ ಗ್ರಾಮಸ್ಥರ ಸಹಾಯದಿಂದ ತಂದೆ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಆಸ್ಪತ್ರೆಗೆ ಎಎಸ್ಪಿ ನಾಗರಾಜ್ ಭೇಟಿ ನೀಡಿ ಗಾಯಾಳುಗಳನ್ನು ವಿಚಾರಿಸಿದ್ದಾರೆ.
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..,
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…..
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…