ದೊಡ್ಡಬಳ್ಳಾಪುರ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ವಿಚಾರಣೆಯ ವೇಳೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಗ್ರಾಮವೊಂದರ ಆರೋಪಿಗಳಾದ ಪ್ರಭಾಕರ (21), ಗೋವಿಂದರಾಜು(21) ಇವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಒಂದನೇ ಎಫ್.ಟಿ.ಎಸ್.ಸಿ ನ್ಯಾಯಾಲಯದ ನ್ಯಾಯಾಧೀಶ ಟಿ.ಸಿ.ಶ್ರೀಕಾಂತ್ ಅವರು 20 ವರ್ಷಗಳ ಕಠಿಣ ಕಾರಾಗೃಹ ವಾಸದ ಶಿಕ್ಷೆ ಮತ್ತು ಐದು ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ನೊಂದ ಬಾಲಕಿಯು ತಾನು ಪ್ರೀತಿಸುತ್ತಿರುವ ಹುಡುಗ ಸರಿಯಾಗಿ ಮಾತನಾಡುತ್ತಿಲ್ಲವೆಂದು ಮನೆ ಬಿಟ್ಟು ಬಂದಿದ್ದ ಸಂದರ್ಭದಲ್ಲಿ ಇದನ್ನೇ ಬಂಡವಾಳಶಾಹಿ ಮಾಡಿಕೊಂಡ ಇಬ್ಬರು ಆರೋಪಿಗಳು ಲೈಗಿಂಕ ದೌರ್ಜನ್ಯ ಎಸಗಿದ್ದರು ಎನ್ನಲಾಗಿದೆ.
ಈ ಕುರಿತಂತೆ ನೋಂದ ಬಾಲಕಿ ನಗರದ ಮಹಿಳಾ ಪೊಲೀಸ್ ಠಾಣೆಗೆ 2022ರ ಆಗಸ್ಟ್ ನಲ್ಲಿ ನೀಡಿದ್ದ ದೂರಿನ ಮೇರೆಗೆ ಅಂದಿನ ಇನ್ಸ್ಪೆಕ್ಟರ್ ಶಬರೀಶ್ ಅವರು ಪೋಕ್ಸೊ ಕಾಯ್ದೆಯಡಿ ದೂರು ದಾಖಲಿಸಿಕೊಂಡು 26 ಜನ ಸಾಕ್ಷಿಗಳ ವಿಚಾರಣೆಯೊಂದಿಗೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಸರ್ಕಾರಿ ಅಭಿಯೋಜಕರಾದ ಎ.ಚಂದ್ರಕಲಾ ಅವರು ನ್ಯಾಯಾಲಯದಲ್ಲಿ ನೋಂದ ಬಾಲಕಿಯ ಪರವಾಗಿ ವಾದ ಮಂಡಿಸುವ ಮೂಲಕ ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆಯಾಗುವಂತೆ ಮಾಡಿದ್ದಾರೆ.
ಎಚ್ಚರಿಕೆಯ ಸಂದೇಶ
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದರೆ ಪೋಕ್ಸೊ ಕಾಯ್ದೆಯಡಿ ದೂರು ದಾಖಲಾಗಿ ಆರೋಪ ಸಾಬೀತಾದರೆ ಕಠಿಣ ಶಿಕ್ಷೆ ತಪ್ಪಿದ್ದಲ್ಲ ಎನ್ನುವ ಸಂದೇಶ ಈ ಪ್ರಕಣದಿಂದ ಸಮಾಜಕ್ಕೆ ಹೋಗಿದೆ. ಕ್ಷಣಿಕದ ಸಂತೋಷಕ್ಕಾಗಿ ಇಬ್ಬರು ಯುವಕರು ತಮ್ಮ ಇಡೀ ಜೀವನವನ್ನು ನಾಲ್ಕು ಗೋಡೆಗಳ ನಡುವೆ ಕಳೆಯುವಂತಾಗಿದೆ.
ಅಪರಾಧಿಗಳಾಗಿರುವ ಇಬ್ಬರು ಸಹ ಯುವಕರು. ದುಡಿದು ಬದುಕು ಕಟ್ಟಿಕೊಂಡು ಹೆತ್ತವರನ್ನು ಸಾಕಬೇಕಾದ ಜವಾಬ್ದಾರಿ ಹೊರಬೇಕಿದ್ದವರು ಈಗ ಜೈಲು ಪಾಲಾಗಿದ್ದಾರೆ. ಜೈಲಿನಿಂದ ಹೊರಬರುವಷ್ಟರಲ್ಲಿ ಮುಕ್ಕಾಲು ಜೀವನವೇ ಕಳೆದು ಹೋಗಿರುತ್ತದೆ. ಪೋಷಕರು ಹಾಗೂ ಶಾಲಾ ಕಾಲೇಜುಗಳಲ್ಲಿ ಪೋಕ್ಸೊ ಕಾಯ್ದೆ ಕುರಿತಂತೆ ಜಾಗೃತಿ ಮೂಡಿಸಬೇಕಿದೆ ಎಂದು ಪೊಲೀಸ್ ಅಧಿಕಾಯೊಬ್ಬರು ತಿಳಿಸಿದ್ದಾರೆ.
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…