ದೊಡ್ಡಬಳ್ಳಾಪುರ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ವಿಚಾರಣೆಯ ವೇಳೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಗ್ರಾಮವೊಂದರ ಆರೋಪಿಗಳಾದ ಪ್ರಭಾಕರ (21), ಗೋವಿಂದರಾಜು(21) ಇವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಒಂದನೇ ಎಫ್.ಟಿ.ಎಸ್.ಸಿ ನ್ಯಾಯಾಲಯದ ನ್ಯಾಯಾಧೀಶ ಟಿ.ಸಿ.ಶ್ರೀಕಾಂತ್ ಅವರು 20 ವರ್ಷಗಳ ಕಠಿಣ ಕಾರಾಗೃಹ ವಾಸದ ಶಿಕ್ಷೆ ಮತ್ತು ಐದು ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ನೊಂದ ಬಾಲಕಿಯು ತಾನು ಪ್ರೀತಿಸುತ್ತಿರುವ ಹುಡುಗ ಸರಿಯಾಗಿ ಮಾತನಾಡುತ್ತಿಲ್ಲವೆಂದು ಮನೆ ಬಿಟ್ಟು ಬಂದಿದ್ದ ಸಂದರ್ಭದಲ್ಲಿ ಇದನ್ನೇ ಬಂಡವಾಳಶಾಹಿ ಮಾಡಿಕೊಂಡ ಇಬ್ಬರು ಆರೋಪಿಗಳು ಲೈಗಿಂಕ ದೌರ್ಜನ್ಯ ಎಸಗಿದ್ದರು ಎನ್ನಲಾಗಿದೆ.
ಈ ಕುರಿತಂತೆ ನೋಂದ ಬಾಲಕಿ ನಗರದ ಮಹಿಳಾ ಪೊಲೀಸ್ ಠಾಣೆಗೆ 2022ರ ಆಗಸ್ಟ್ ನಲ್ಲಿ ನೀಡಿದ್ದ ದೂರಿನ ಮೇರೆಗೆ ಅಂದಿನ ಇನ್ಸ್ಪೆಕ್ಟರ್ ಶಬರೀಶ್ ಅವರು ಪೋಕ್ಸೊ ಕಾಯ್ದೆಯಡಿ ದೂರು ದಾಖಲಿಸಿಕೊಂಡು 26 ಜನ ಸಾಕ್ಷಿಗಳ ವಿಚಾರಣೆಯೊಂದಿಗೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಸರ್ಕಾರಿ ಅಭಿಯೋಜಕರಾದ ಎ.ಚಂದ್ರಕಲಾ ಅವರು ನ್ಯಾಯಾಲಯದಲ್ಲಿ ನೋಂದ ಬಾಲಕಿಯ ಪರವಾಗಿ ವಾದ ಮಂಡಿಸುವ ಮೂಲಕ ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆಯಾಗುವಂತೆ ಮಾಡಿದ್ದಾರೆ.
ಎಚ್ಚರಿಕೆಯ ಸಂದೇಶ
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದರೆ ಪೋಕ್ಸೊ ಕಾಯ್ದೆಯಡಿ ದೂರು ದಾಖಲಾಗಿ ಆರೋಪ ಸಾಬೀತಾದರೆ ಕಠಿಣ ಶಿಕ್ಷೆ ತಪ್ಪಿದ್ದಲ್ಲ ಎನ್ನುವ ಸಂದೇಶ ಈ ಪ್ರಕಣದಿಂದ ಸಮಾಜಕ್ಕೆ ಹೋಗಿದೆ. ಕ್ಷಣಿಕದ ಸಂತೋಷಕ್ಕಾಗಿ ಇಬ್ಬರು ಯುವಕರು ತಮ್ಮ ಇಡೀ ಜೀವನವನ್ನು ನಾಲ್ಕು ಗೋಡೆಗಳ ನಡುವೆ ಕಳೆಯುವಂತಾಗಿದೆ.
ಅಪರಾಧಿಗಳಾಗಿರುವ ಇಬ್ಬರು ಸಹ ಯುವಕರು. ದುಡಿದು ಬದುಕು ಕಟ್ಟಿಕೊಂಡು ಹೆತ್ತವರನ್ನು ಸಾಕಬೇಕಾದ ಜವಾಬ್ದಾರಿ ಹೊರಬೇಕಿದ್ದವರು ಈಗ ಜೈಲು ಪಾಲಾಗಿದ್ದಾರೆ. ಜೈಲಿನಿಂದ ಹೊರಬರುವಷ್ಟರಲ್ಲಿ ಮುಕ್ಕಾಲು ಜೀವನವೇ ಕಳೆದು ಹೋಗಿರುತ್ತದೆ. ಪೋಷಕರು ಹಾಗೂ ಶಾಲಾ ಕಾಲೇಜುಗಳಲ್ಲಿ ಪೋಕ್ಸೊ ಕಾಯ್ದೆ ಕುರಿತಂತೆ ಜಾಗೃತಿ ಮೂಡಿಸಬೇಕಿದೆ ಎಂದು ಪೊಲೀಸ್ ಅಧಿಕಾಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…