ದೊಡ್ಡಬಳ್ಳಾಪುರ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ವಿಚಾರಣೆಯ ವೇಳೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಗ್ರಾಮವೊಂದರ ಆರೋಪಿಗಳಾದ ಪ್ರಭಾಕರ (21), ಗೋವಿಂದರಾಜು(21) ಇವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಒಂದನೇ ಎಫ್.ಟಿ.ಎಸ್.ಸಿ ನ್ಯಾಯಾಲಯದ ನ್ಯಾಯಾಧೀಶ ಟಿ.ಸಿ.ಶ್ರೀಕಾಂತ್ ಅವರು 20 ವರ್ಷಗಳ ಕಠಿಣ ಕಾರಾಗೃಹ ವಾಸದ ಶಿಕ್ಷೆ ಮತ್ತು ಐದು ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ನೊಂದ ಬಾಲಕಿಯು ತಾನು ಪ್ರೀತಿಸುತ್ತಿರುವ ಹುಡುಗ ಸರಿಯಾಗಿ ಮಾತನಾಡುತ್ತಿಲ್ಲವೆಂದು ಮನೆ ಬಿಟ್ಟು ಬಂದಿದ್ದ ಸಂದರ್ಭದಲ್ಲಿ ಇದನ್ನೇ ಬಂಡವಾಳಶಾಹಿ ಮಾಡಿಕೊಂಡ ಇಬ್ಬರು ಆರೋಪಿಗಳು ಲೈಗಿಂಕ ದೌರ್ಜನ್ಯ ಎಸಗಿದ್ದರು ಎನ್ನಲಾಗಿದೆ.
ಈ ಕುರಿತಂತೆ ನೋಂದ ಬಾಲಕಿ ನಗರದ ಮಹಿಳಾ ಪೊಲೀಸ್ ಠಾಣೆಗೆ 2022ರ ಆಗಸ್ಟ್ ನಲ್ಲಿ ನೀಡಿದ್ದ ದೂರಿನ ಮೇರೆಗೆ ಅಂದಿನ ಇನ್ಸ್ಪೆಕ್ಟರ್ ಶಬರೀಶ್ ಅವರು ಪೋಕ್ಸೊ ಕಾಯ್ದೆಯಡಿ ದೂರು ದಾಖಲಿಸಿಕೊಂಡು 26 ಜನ ಸಾಕ್ಷಿಗಳ ವಿಚಾರಣೆಯೊಂದಿಗೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಸರ್ಕಾರಿ ಅಭಿಯೋಜಕರಾದ ಎ.ಚಂದ್ರಕಲಾ ಅವರು ನ್ಯಾಯಾಲಯದಲ್ಲಿ ನೋಂದ ಬಾಲಕಿಯ ಪರವಾಗಿ ವಾದ ಮಂಡಿಸುವ ಮೂಲಕ ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆಯಾಗುವಂತೆ ಮಾಡಿದ್ದಾರೆ.
ಎಚ್ಚರಿಕೆಯ ಸಂದೇಶ
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದರೆ ಪೋಕ್ಸೊ ಕಾಯ್ದೆಯಡಿ ದೂರು ದಾಖಲಾಗಿ ಆರೋಪ ಸಾಬೀತಾದರೆ ಕಠಿಣ ಶಿಕ್ಷೆ ತಪ್ಪಿದ್ದಲ್ಲ ಎನ್ನುವ ಸಂದೇಶ ಈ ಪ್ರಕಣದಿಂದ ಸಮಾಜಕ್ಕೆ ಹೋಗಿದೆ. ಕ್ಷಣಿಕದ ಸಂತೋಷಕ್ಕಾಗಿ ಇಬ್ಬರು ಯುವಕರು ತಮ್ಮ ಇಡೀ ಜೀವನವನ್ನು ನಾಲ್ಕು ಗೋಡೆಗಳ ನಡುವೆ ಕಳೆಯುವಂತಾಗಿದೆ.
ಅಪರಾಧಿಗಳಾಗಿರುವ ಇಬ್ಬರು ಸಹ ಯುವಕರು. ದುಡಿದು ಬದುಕು ಕಟ್ಟಿಕೊಂಡು ಹೆತ್ತವರನ್ನು ಸಾಕಬೇಕಾದ ಜವಾಬ್ದಾರಿ ಹೊರಬೇಕಿದ್ದವರು ಈಗ ಜೈಲು ಪಾಲಾಗಿದ್ದಾರೆ. ಜೈಲಿನಿಂದ ಹೊರಬರುವಷ್ಟರಲ್ಲಿ ಮುಕ್ಕಾಲು ಜೀವನವೇ ಕಳೆದು ಹೋಗಿರುತ್ತದೆ. ಪೋಷಕರು ಹಾಗೂ ಶಾಲಾ ಕಾಲೇಜುಗಳಲ್ಲಿ ಪೋಕ್ಸೊ ಕಾಯ್ದೆ ಕುರಿತಂತೆ ಜಾಗೃತಿ ಮೂಡಿಸಬೇಕಿದೆ ಎಂದು ಪೊಲೀಸ್ ಅಧಿಕಾಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…