ತನ್ನ ಅಪ್ರಾಪ್ತನ ವಯಸ್ಸಿನ ಮಗನಿಗೆ ದ್ವಿಚಕ್ರ ವಾಹನವನ್ನು ಚಲಾಯಿಸಲು ನೀಡಿದ ತಪ್ಪಿಗೆ ತಂದೆ ರೂ. 20 ಸಾವಿರ ರೂ. ದಂಡ ತೆತ್ತಿದ್ದಾರೆ.
ಕೊಡಗಿನ ಸೋಮವಾರಪೇಟೆ ತಾಲ್ಲೂಕಿನ ತಲ್ತಾರೆ ಶೆಟ್ಟಳ್ಳಿ ಗ್ರಾಮದ ಯು.ಎಂ. ರಮೇಶ್ ಎಂಬುವವರು ಅಪ್ರಾಪ್ತ ವಯಸ್ಸಿನ ಪುತ್ರನಿಗೆ ದ್ವಿಚಕ್ರ ವಾಹನವನ್ನು ಚಲಾಯಿಸಲು ನೀಡಿದ್ದರು.
ಈ ಕುರಿತು ಸೋಮವಾರಪೇಟೆ ಪೊಲೀಸ್ ಠಾಣಾ ವೃತ್ತ ನಿರೀಕ್ಷಕರಾದ ಮುದ್ದು ಮಾದೇವ್ ಅವರು ಯು.ಎಂ. ರಮೇಶ್ ರವರ ವಿರುದ್ಧ ಪ್ರಕರಣ ದಾಖಲಿಸಿದ್ದರು.
ವಿಚಾರಣೆ ನಡೆಸಿದ ಸೋಮವಾರಪೇಟೆ ಜೆ.ಎಂ.ಎಫ್.ಸಿ
ನ್ಯಾಯಾಲಯದ ನ್ಯಾಯಾಧೀಶರಾದ ಕೆ. ಗೋಪಾಲಕೃಷ್ಣ ಅವರು ಇಂದು ರೂ. 20 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ವಾಹನ ಚಾಲನಾ ಪರವಾನಗಿ ಇಲ್ಲದೇ ಮತ್ತು ಅಪ್ರಾಪ್ತರು ವಾಹನ ಚಲಾವಣೆ ಮಾಡುತ್ತಿರುವುದರಿಂದ ಅಪಘಾತಗಳು ಹೆಚ್ಚಾಗುತ್ತದೆ. ಈ ಹಿನ್ನೆಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದ್ದು, ವಾಹನ ಮಾಲೀಕರು ಜಾಗೃತರಾಗಬೇಕು. ಅಪ್ರಾಪ್ತರಿಗೆ ಮತ್ತು ಚಾಲನಾ ಪರವಾನಗಿ ಇಲ್ಲದವರಿಗೆ ವಾಹನ ನೀಡಿ ಪೇಚಿಗೆ ಸಿಲುಕಬಾರದು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…