ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತನೆ ಮಾಡುವ ಪ್ರಕ್ರಿಯೆಯನ್ನು ಸರಳೀಕರಿಸುವ ಉದ್ದೇಶದಿಂದ ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಬೇಕೆಂದು ಸೂಚಿಸಲಾಗಿದೆ.
ಈ ಸಂಬಂಧ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಂದಾಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 95 ಹಾಗೂ 1966ರ ನಿಯಮಾವಳಿ ತಿದ್ದುಪಡಿ ನಿಯಮಗಳ ಪ್ರಕಾರ, 23 ಡಿಸೆಂಬರ್ 2025ರಿಂದ ಹೊಸ ನಿಯಮ ಜಾರಿಯಲ್ಲಿದೆ.
ಮಾಸ್ಟರ್ ಪ್ಲಾನ್ ವ್ಯಾಪ್ತಿಯ ಹೊರಗಿನ ಜಮೀನುಗಳಿಗೆ ಸಲ್ಲಿಸಿದ ಅರ್ಜಿಗಳನ್ನು ಜಿಲ್ಲಾಧಿಕಾರಿಗಳು 30 ದಿನಗಳೊಳಗೆ ತೀರ್ಮಾನ ಕೈಗೊಳ್ಳಬೇಕು. 30 ದಿನಗಳಲ್ಲಿ ನಿರ್ಧಾರ ಕೈಗೊಳ್ಳದಿದ್ದರೆ, ಅರ್ಜಿದಾರರು ಶುಲ್ಕ ಪಾವತಿಸಿದ್ದಲ್ಲಿ, ಅರ್ಜಿಯನ್ನು ಪರಿಭಾವಿತ ಭೂಪರಿವರ್ತನೆ (Deemed Conversion) ಎಂದು ಪರಿಗಣಿಸಿ, ತಂತ್ರಾಂಶದ ಮೂಲಕ ಸ್ವಯಂಚಾಲಿತ ಅನುಮೋದನೆ ನೀಡಲಾಗುತ್ತದೆ.
ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗೆ ಸಂಬಂಧಿಸಿದಂತೆ ತಾಲ್ಲೂಕು ತಹಶೀಲ್ದಾರರು, ಅರಣ್ಯ ಇಲಾಖೆ ಮೊದಲಾದ ಸಂಬಂಧಪಟ್ಟ ಇಲಾಖೆಗಳು ಅಭಿಪ್ರಾಯ ನೀಡಲು 15 ದಿನಗಳ ಕಾಲಾವಕಾಶವಿದ್ದು, ಜಿಲ್ಲಾಧಿಕಾರಿಗಳ ಕಛೇರಿ ವಿಷಯ ನಿರ್ವಾಹಕರಿಗೆ 5 ದಿನಗಳು, ಅಪರ ಜಿಲ್ಲಾಧಿಕಾರಿಗಳಿಗೆ 5 ದಿನಗಳು ಹಾಗೂ ಜಿಲ್ಲಾಧಿಕಾರಿಗಳಿಗೆ 5 ದಿನಗಳ ಕಾಲಾವಕಾಶ ಇರುತ್ತದೆ. ಒಟ್ಟು 30 ಕೆಲಸದ ದಿನಗಳಲ್ಲಿ ಜಿಲ್ಲಾಧಿಕಾರಿಗಳು ತೀರ್ಮಾನ ಕೈಗೊಳ್ಳದಿದ್ದರೆ, ಸದರಿ ಭೂಪರಿವರ್ತನಾ ಅರ್ಜಿಗೆ ಅನುಮೋದನೆ ಇದೆ ಎಂದು ಪರಿಗಣಿಸಿ, ಶುಲ್ಕ ಪಾವತಿಗಾಗಿ ಅರ್ಜಿದಾರರ ಲಾಗಿನ್ ಗೆ ವರ್ಗಾವಣೆಯಾಗುತ್ತದೆ.
ಶುಲ್ಕ ಪಾವತಿಯಾದ ನಂತರ ತಂತ್ರಾಂಶದ ಮೂಲಕ ಸ್ವಯಂಚಾಲಿತವಾಗಿ ಭೂಪರಿವರ್ತನೆ ಆದೇಶ ಸೃಜಿಸಲಾಗುತ್ತದೆ ಎಂದು ಕಂದಾಯ ಆಯುಕ್ತೆ ಮೀನಾ ನಾಗರಾಜ್ ಅವರಿಂದ ಡಿಜಿಟಲ್ ಸಹಿ ಮಾಡಲಾದ ಆದೇಶದಲ್ಲಿ ತಿಳಿಸಲಾಗಿದೆ. ಈ ಆದೇಶದ ಪ್ರತಿಯನ್ನು ರಾಜ್ಯದ ಎಲ್ಲಾ ಉಪವಿಭಾಗಾಧಿಕಾರಿಗಳು ಹಾಗೂ ತಾಲ್ಲೂಕು ತಹಶೀಲ್ದಾರರಿಗೆ ಮಾಹಿತಿ ಮತ್ತು ಅಗತ್ಯ ಕ್ರಮಕಾಗಿ ಕಳುಹಿಸಲಾಗಿದೆ.
ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 95 ಹಾಗೂ 1966ರ ನಿಯಮಾವಳಿ ತಿದ್ದುಪಡಿ ನಿಯಮಗಳು 2025ರ ಡಿಸೆಂಬರ್ 23ರಿಂದ ಜಾರಿಯಲ್ಲಿದ್ದು, ಭೂಪರಿವರ್ತನೆ ಪ್ರಕ್ರಿಯೆಯನ್ನು ಸರಳೀಕರಿಸುವುದು, ಪಾರದರ್ಶಕತೆ ಹೆಚ್ಚಿಸುವುದು ಮತ್ತು ತಂತ್ರಜ್ಞಾನ ಆಧಾರಿತ ಅನುಮೋದನೆ ವ್ಯವಸ್ಥೆಯನ್ನು ಅಳವಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ನೂತನ ಅಧ್ಯಕ್ಷರಾಗಿ ಪ್ರಭ ನಾಗರಾಜ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಪ್ರಭ ನಾಗರಾಜ್ ಅವರಿಗೆ ಗಣ್ಯರು…
ಸಂಬಂಧಗಳ ಬಲೆಯೊಳಗೆ.... ಪೂರ್ವ ನಿರ್ಧಾರಿತ ಬಂಧನದಲ್ಲಿ.... ಒಂದು ನಿಗದಿತ ವ್ಯವಸ್ಥೆಯ ಜೈಲಿನಲ್ಲಿ.... ಹಿಂದಿನವರ ಅನುಭವದ ಗೋಡೆಗಳೊಳಗೆ..... ಹುಟ್ಟುತ್ತಾ ವಿಶ್ವಮಾನವರು, ಬೆಳೆಯುತ್ತಾ......…
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…