ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತನೆ ಮಾಡುವ ಪ್ರಕ್ರಿಯೆಯನ್ನು ಸರಳೀಕರಿಸುವ ಉದ್ದೇಶದಿಂದ ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಬೇಕೆಂದು ಸೂಚಿಸಲಾಗಿದೆ.
ಈ ಸಂಬಂಧ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಂದಾಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 95 ಹಾಗೂ 1966ರ ನಿಯಮಾವಳಿ ತಿದ್ದುಪಡಿ ನಿಯಮಗಳ ಪ್ರಕಾರ, 23 ಡಿಸೆಂಬರ್ 2025ರಿಂದ ಹೊಸ ನಿಯಮ ಜಾರಿಯಲ್ಲಿದೆ.
ಮಾಸ್ಟರ್ ಪ್ಲಾನ್ ವ್ಯಾಪ್ತಿಯ ಹೊರಗಿನ ಜಮೀನುಗಳಿಗೆ ಸಲ್ಲಿಸಿದ ಅರ್ಜಿಗಳನ್ನು ಜಿಲ್ಲಾಧಿಕಾರಿಗಳು 30 ದಿನಗಳೊಳಗೆ ತೀರ್ಮಾನ ಕೈಗೊಳ್ಳಬೇಕು. 30 ದಿನಗಳಲ್ಲಿ ನಿರ್ಧಾರ ಕೈಗೊಳ್ಳದಿದ್ದರೆ, ಅರ್ಜಿದಾರರು ಶುಲ್ಕ ಪಾವತಿಸಿದ್ದಲ್ಲಿ, ಅರ್ಜಿಯನ್ನು ಪರಿಭಾವಿತ ಭೂಪರಿವರ್ತನೆ (Deemed Conversion) ಎಂದು ಪರಿಗಣಿಸಿ, ತಂತ್ರಾಂಶದ ಮೂಲಕ ಸ್ವಯಂಚಾಲಿತ ಅನುಮೋದನೆ ನೀಡಲಾಗುತ್ತದೆ.
ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗೆ ಸಂಬಂಧಿಸಿದಂತೆ ತಾಲ್ಲೂಕು ತಹಶೀಲ್ದಾರರು, ಅರಣ್ಯ ಇಲಾಖೆ ಮೊದಲಾದ ಸಂಬಂಧಪಟ್ಟ ಇಲಾಖೆಗಳು ಅಭಿಪ್ರಾಯ ನೀಡಲು 15 ದಿನಗಳ ಕಾಲಾವಕಾಶವಿದ್ದು, ಜಿಲ್ಲಾಧಿಕಾರಿಗಳ ಕಛೇರಿ ವಿಷಯ ನಿರ್ವಾಹಕರಿಗೆ 5 ದಿನಗಳು, ಅಪರ ಜಿಲ್ಲಾಧಿಕಾರಿಗಳಿಗೆ 5 ದಿನಗಳು ಹಾಗೂ ಜಿಲ್ಲಾಧಿಕಾರಿಗಳಿಗೆ 5 ದಿನಗಳ ಕಾಲಾವಕಾಶ ಇರುತ್ತದೆ. ಒಟ್ಟು 30 ಕೆಲಸದ ದಿನಗಳಲ್ಲಿ ಜಿಲ್ಲಾಧಿಕಾರಿಗಳು ತೀರ್ಮಾನ ಕೈಗೊಳ್ಳದಿದ್ದರೆ, ಸದರಿ ಭೂಪರಿವರ್ತನಾ ಅರ್ಜಿಗೆ ಅನುಮೋದನೆ ಇದೆ ಎಂದು ಪರಿಗಣಿಸಿ, ಶುಲ್ಕ ಪಾವತಿಗಾಗಿ ಅರ್ಜಿದಾರರ ಲಾಗಿನ್ ಗೆ ವರ್ಗಾವಣೆಯಾಗುತ್ತದೆ.
ಶುಲ್ಕ ಪಾವತಿಯಾದ ನಂತರ ತಂತ್ರಾಂಶದ ಮೂಲಕ ಸ್ವಯಂಚಾಲಿತವಾಗಿ ಭೂಪರಿವರ್ತನೆ ಆದೇಶ ಸೃಜಿಸಲಾಗುತ್ತದೆ ಎಂದು ಕಂದಾಯ ಆಯುಕ್ತೆ ಮೀನಾ ನಾಗರಾಜ್ ಅವರಿಂದ ಡಿಜಿಟಲ್ ಸಹಿ ಮಾಡಲಾದ ಆದೇಶದಲ್ಲಿ ತಿಳಿಸಲಾಗಿದೆ. ಈ ಆದೇಶದ ಪ್ರತಿಯನ್ನು ರಾಜ್ಯದ ಎಲ್ಲಾ ಉಪವಿಭಾಗಾಧಿಕಾರಿಗಳು ಹಾಗೂ ತಾಲ್ಲೂಕು ತಹಶೀಲ್ದಾರರಿಗೆ ಮಾಹಿತಿ ಮತ್ತು ಅಗತ್ಯ ಕ್ರಮಕಾಗಿ ಕಳುಹಿಸಲಾಗಿದೆ.
ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 95 ಹಾಗೂ 1966ರ ನಿಯಮಾವಳಿ ತಿದ್ದುಪಡಿ ನಿಯಮಗಳು 2025ರ ಡಿಸೆಂಬರ್ 23ರಿಂದ ಜಾರಿಯಲ್ಲಿದ್ದು, ಭೂಪರಿವರ್ತನೆ ಪ್ರಕ್ರಿಯೆಯನ್ನು ಸರಳೀಕರಿಸುವುದು, ಪಾರದರ್ಶಕತೆ ಹೆಚ್ಚಿಸುವುದು ಮತ್ತು ತಂತ್ರಜ್ಞಾನ ಆಧಾರಿತ ಅನುಮೋದನೆ ವ್ಯವಸ್ಥೆಯನ್ನು ಅಳವಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…
ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…