ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳ ತ್ವರಿತ ವಿಲೇವಾರಿ ಕುರಿತಂತೆ ಕಂದಾಯ ಆಯುಕ್ತರ ಹೊಸ ಆದೇಶ

ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತನೆ ಮಾಡುವ ಪ್ರಕ್ರಿಯೆಯನ್ನು ಸರಳೀಕರಿಸುವ ಉದ್ದೇಶದಿಂದ ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಬೇಕೆಂದು ಸೂಚಿಸಲಾಗಿದೆ.
ಈ ಸಂಬಂಧ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಂದಾಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 95 ಹಾಗೂ 1966ರ ನಿಯಮಾವಳಿ ತಿದ್ದುಪಡಿ ನಿಯಮಗಳ ಪ್ರಕಾರ, 23 ಡಿಸೆಂಬರ್ 2025ರಿಂದ ಹೊಸ ನಿಯಮ ಜಾರಿಯಲ್ಲಿದೆ.

ಮಾಸ್ಟರ್ ಪ್ಲಾನ್ ವ್ಯಾಪ್ತಿಯ ಹೊರಗಿನ ಜಮೀನುಗಳಿಗೆ ಸಲ್ಲಿಸಿದ ಅರ್ಜಿಗಳನ್ನು ಜಿಲ್ಲಾಧಿಕಾರಿಗಳು 30 ದಿನಗಳೊಳಗೆ ತೀರ್ಮಾನ ಕೈಗೊಳ್ಳಬೇಕು. 30 ದಿನಗಳಲ್ಲಿ ನಿರ್ಧಾರ ಕೈಗೊಳ್ಳದಿದ್ದರೆ, ಅರ್ಜಿದಾರರು ಶುಲ್ಕ ಪಾವತಿಸಿದ್ದಲ್ಲಿ, ಅರ್ಜಿಯನ್ನು ಪರಿಭಾವಿತ ಭೂಪರಿವರ್ತನೆ (Deemed Conversion) ಎಂದು ಪರಿಗಣಿಸಿ, ತಂತ್ರಾಂಶದ ಮೂಲಕ ಸ್ವಯಂಚಾಲಿತ ಅನುಮೋದನೆ ನೀಡಲಾಗುತ್ತದೆ.

ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗೆ ಸಂಬಂಧಿಸಿದಂತೆ ತಾಲ್ಲೂಕು ತಹಶೀಲ್ದಾರರು, ಅರಣ್ಯ ಇಲಾಖೆ ಮೊದಲಾದ ಸಂಬಂಧಪಟ್ಟ ಇಲಾಖೆಗಳು ಅಭಿಪ್ರಾಯ ನೀಡಲು 15 ದಿನಗಳ ಕಾಲಾವಕಾಶವಿದ್ದು, ಜಿಲ್ಲಾಧಿಕಾರಿಗಳ ಕಛೇರಿ ವಿಷಯ ನಿರ್ವಾಹಕರಿಗೆ 5 ದಿನಗಳು, ಅಪರ ಜಿಲ್ಲಾಧಿಕಾರಿಗಳಿಗೆ 5 ದಿನಗಳು ಹಾಗೂ ಜಿಲ್ಲಾಧಿಕಾರಿಗಳಿಗೆ 5 ದಿನಗಳ ಕಾಲಾವಕಾಶ ಇರುತ್ತದೆ. ಒಟ್ಟು 30 ಕೆಲಸದ ದಿನಗಳಲ್ಲಿ ಜಿಲ್ಲಾಧಿಕಾರಿಗಳು ತೀರ್ಮಾನ ಕೈಗೊಳ್ಳದಿದ್ದರೆ, ಸದರಿ ಭೂಪರಿವರ್ತನಾ ಅರ್ಜಿಗೆ ಅನುಮೋದನೆ ಇದೆ ಎಂದು ಪರಿಗಣಿಸಿ, ಶುಲ್ಕ ಪಾವತಿಗಾಗಿ ಅರ್ಜಿದಾರರ ಲಾಗಿನ್ ಗೆ ವರ್ಗಾವಣೆಯಾಗುತ್ತದೆ.

ಶುಲ್ಕ ಪಾವತಿಯಾದ ನಂತರ ತಂತ್ರಾಂಶದ ಮೂಲಕ ಸ್ವಯಂಚಾಲಿತವಾಗಿ ಭೂಪರಿವರ್ತನೆ ಆದೇಶ ಸೃಜಿಸಲಾಗುತ್ತದೆ ಎಂದು ಕಂದಾಯ ಆಯುಕ್ತೆ ಮೀನಾ ನಾಗರಾಜ್ ಅವರಿಂದ ಡಿಜಿಟಲ್ ಸಹಿ ಮಾಡಲಾದ ಆದೇಶದಲ್ಲಿ ತಿಳಿಸಲಾಗಿದೆ. ಈ ಆದೇಶದ ಪ್ರತಿಯನ್ನು ರಾಜ್ಯದ ಎಲ್ಲಾ ಉಪವಿಭಾಗಾಧಿಕಾರಿಗಳು ಹಾಗೂ ತಾಲ್ಲೂಕು ತಹಶೀಲ್ದಾರರಿಗೆ ಮಾಹಿತಿ ಮತ್ತು ಅಗತ್ಯ ಕ್ರಮಕಾಗಿ ಕಳುಹಿಸಲಾಗಿದೆ.

ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 95 ಹಾಗೂ 1966ರ ನಿಯಮಾವಳಿ ತಿದ್ದುಪಡಿ ನಿಯಮಗಳು 2025ರ ಡಿಸೆಂಬರ್ 23ರಿಂದ ಜಾರಿಯಲ್ಲಿದ್ದು, ಭೂಪರಿವರ್ತನೆ ಪ್ರಕ್ರಿಯೆಯನ್ನು ಸರಳೀಕರಿಸುವುದು, ಪಾರದರ್ಶಕತೆ ಹೆಚ್ಚಿಸುವುದು ಮತ್ತು ತಂತ್ರಜ್ಞಾನ ಆಧಾರಿತ ಅನುಮೋದನೆ ವ್ಯವಸ್ಥೆಯನ್ನು ಅಳವಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

3 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

6 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

18 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

19 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

21 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

23 hours ago