ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳ ತ್ವರಿತ ವಿಲೇವಾರಿ ಕುರಿತಂತೆ ಕಂದಾಯ ಆಯುಕ್ತರ ಹೊಸ ಆದೇಶ

ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತನೆ ಮಾಡುವ ಪ್ರಕ್ರಿಯೆಯನ್ನು ಸರಳೀಕರಿಸುವ ಉದ್ದೇಶದಿಂದ ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಬೇಕೆಂದು ಸೂಚಿಸಲಾಗಿದೆ.
ಈ ಸಂಬಂಧ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಂದಾಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 95 ಹಾಗೂ 1966ರ ನಿಯಮಾವಳಿ ತಿದ್ದುಪಡಿ ನಿಯಮಗಳ ಪ್ರಕಾರ, 23 ಡಿಸೆಂಬರ್ 2025ರಿಂದ ಹೊಸ ನಿಯಮ ಜಾರಿಯಲ್ಲಿದೆ.

ಮಾಸ್ಟರ್ ಪ್ಲಾನ್ ವ್ಯಾಪ್ತಿಯ ಹೊರಗಿನ ಜಮೀನುಗಳಿಗೆ ಸಲ್ಲಿಸಿದ ಅರ್ಜಿಗಳನ್ನು ಜಿಲ್ಲಾಧಿಕಾರಿಗಳು 30 ದಿನಗಳೊಳಗೆ ತೀರ್ಮಾನ ಕೈಗೊಳ್ಳಬೇಕು. 30 ದಿನಗಳಲ್ಲಿ ನಿರ್ಧಾರ ಕೈಗೊಳ್ಳದಿದ್ದರೆ, ಅರ್ಜಿದಾರರು ಶುಲ್ಕ ಪಾವತಿಸಿದ್ದಲ್ಲಿ, ಅರ್ಜಿಯನ್ನು ಪರಿಭಾವಿತ ಭೂಪರಿವರ್ತನೆ (Deemed Conversion) ಎಂದು ಪರಿಗಣಿಸಿ, ತಂತ್ರಾಂಶದ ಮೂಲಕ ಸ್ವಯಂಚಾಲಿತ ಅನುಮೋದನೆ ನೀಡಲಾಗುತ್ತದೆ.

ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗೆ ಸಂಬಂಧಿಸಿದಂತೆ ತಾಲ್ಲೂಕು ತಹಶೀಲ್ದಾರರು, ಅರಣ್ಯ ಇಲಾಖೆ ಮೊದಲಾದ ಸಂಬಂಧಪಟ್ಟ ಇಲಾಖೆಗಳು ಅಭಿಪ್ರಾಯ ನೀಡಲು 15 ದಿನಗಳ ಕಾಲಾವಕಾಶವಿದ್ದು, ಜಿಲ್ಲಾಧಿಕಾರಿಗಳ ಕಛೇರಿ ವಿಷಯ ನಿರ್ವಾಹಕರಿಗೆ 5 ದಿನಗಳು, ಅಪರ ಜಿಲ್ಲಾಧಿಕಾರಿಗಳಿಗೆ 5 ದಿನಗಳು ಹಾಗೂ ಜಿಲ್ಲಾಧಿಕಾರಿಗಳಿಗೆ 5 ದಿನಗಳ ಕಾಲಾವಕಾಶ ಇರುತ್ತದೆ. ಒಟ್ಟು 30 ಕೆಲಸದ ದಿನಗಳಲ್ಲಿ ಜಿಲ್ಲಾಧಿಕಾರಿಗಳು ತೀರ್ಮಾನ ಕೈಗೊಳ್ಳದಿದ್ದರೆ, ಸದರಿ ಭೂಪರಿವರ್ತನಾ ಅರ್ಜಿಗೆ ಅನುಮೋದನೆ ಇದೆ ಎಂದು ಪರಿಗಣಿಸಿ, ಶುಲ್ಕ ಪಾವತಿಗಾಗಿ ಅರ್ಜಿದಾರರ ಲಾಗಿನ್ ಗೆ ವರ್ಗಾವಣೆಯಾಗುತ್ತದೆ.

ಶುಲ್ಕ ಪಾವತಿಯಾದ ನಂತರ ತಂತ್ರಾಂಶದ ಮೂಲಕ ಸ್ವಯಂಚಾಲಿತವಾಗಿ ಭೂಪರಿವರ್ತನೆ ಆದೇಶ ಸೃಜಿಸಲಾಗುತ್ತದೆ ಎಂದು ಕಂದಾಯ ಆಯುಕ್ತೆ ಮೀನಾ ನಾಗರಾಜ್ ಅವರಿಂದ ಡಿಜಿಟಲ್ ಸಹಿ ಮಾಡಲಾದ ಆದೇಶದಲ್ಲಿ ತಿಳಿಸಲಾಗಿದೆ. ಈ ಆದೇಶದ ಪ್ರತಿಯನ್ನು ರಾಜ್ಯದ ಎಲ್ಲಾ ಉಪವಿಭಾಗಾಧಿಕಾರಿಗಳು ಹಾಗೂ ತಾಲ್ಲೂಕು ತಹಶೀಲ್ದಾರರಿಗೆ ಮಾಹಿತಿ ಮತ್ತು ಅಗತ್ಯ ಕ್ರಮಕಾಗಿ ಕಳುಹಿಸಲಾಗಿದೆ.

ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 95 ಹಾಗೂ 1966ರ ನಿಯಮಾವಳಿ ತಿದ್ದುಪಡಿ ನಿಯಮಗಳು 2025ರ ಡಿಸೆಂಬರ್ 23ರಿಂದ ಜಾರಿಯಲ್ಲಿದ್ದು, ಭೂಪರಿವರ್ತನೆ ಪ್ರಕ್ರಿಯೆಯನ್ನು ಸರಳೀಕರಿಸುವುದು, ಪಾರದರ್ಶಕತೆ ಹೆಚ್ಚಿಸುವುದು ಮತ್ತು ತಂತ್ರಜ್ಞಾನ ಆಧಾರಿತ ಅನುಮೋದನೆ ವ್ಯವಸ್ಥೆಯನ್ನು ಅಳವಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

Ramesh Babu

Journalist

Recent Posts

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

3 hours ago

ಬಸ್ ಏರಿದ್ರೆ ಗಮ್ಯಸ್ಥಾನ ಸೇರುತ್ತೇವೆ ಅನ್ನೋ ಗ್ಯಾರಂಟಿ ಇಲ್ಲ!: ಗುಂಡಮ್ಮಗೆರೆ–ಹೊಸಹಳ್ಳಿ ಮಾರ್ಗದಲ್ಲಿ ಪದೇ ಪದೇ ಕೆಟ್ಟು ನಿಲ್ಲುವ ಸಾರಿಗೆ ಬಸ್‌ಗಳು

ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್‌ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…

4 hours ago

ಕೃಷ್ಣ ಜನ್ಮಾಷ್ಟಮಿಯ ನೆಪದಲ್ಲಿ ಒಂದಷ್ಟು ಚಿಂತನೆ……

ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…

6 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ ರಾಜಶೇಖರ್ ಆಚಾರ್

  ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

16 hours ago

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ : ಕಾರ್ಯದರ್ಶಿ ಹೇಮಂತ್

  ಚಿಕ್ಕನಾಯಕನಹಳ್ಳಿ: ರೈತರ ವಿಕಸನಕ್ಕೆಂದೇ ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

16 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಕೇರ್ ಬೈ ಬಿಎಲ್‌ಆರ್’ ವೈಯಕ್ತಿಕ ಪ್ರಯಾಣಿಕ ಸೇವೆ ಆರಂಭ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ ಪ್ರಯಾಣಿಕರ ಅನುಭವವನ್ನು ಇನ್ನಷ್ಟು ಸುಗಮ, ಅನುಕೂಲಕರ ಮತ್ತು ವೈಯಕ್ತಿಕ ಅಗತ್ಯಗಳಿಗೆ ಹೊಂದುವಂತೆ…

19 hours ago